Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರವೇ ನಡೆಸಲಿದೆ ಡಿಯೆಗೊ ಮರಡೋನಾ ಅಂತ್ಯಕ್ರಿಯೆ; ಅರ್ಜಂಟೀನಾದಲ್ಲಿ ಮೂರುದಿನ ಶೋಕಾಚರಣೆ

ಇತ್ತೀಚೆಗಷ್ಟೇ ಮಿದುಳು ಸರ್ಜರಿ ಮಾಡಿಸಿಕೊಂಡು ಮನೆಗೆ ಬಂದಿದ್ದ ಮರಡೋನಾಗೆ ಮನೆಯಲ್ಲೇ ಚಿಕಿತ್ಸೆ ನಡೆಯುತ್ತಿತ್ತು. ಬುಧವಾರ ಬೆಳಗ್ಗೆ ತಿಂಡಿಗೆಂದು ಎದ್ದುಬಂದರೂ ತುಂಬ ಸುಸ್ತಾದವರಂತೆ ಕಾಣುತ್ತಿದ್ದರು. ಅಲ್ಲದೆ ನನಗೆ ಶೀತವಾಗಿದೆ, ಐ ಫೀಲ್​ ಸಿಕ್​..(ಆರೋಗ್ಯ ಸರಿಯಿಲ್ಲದಂತೆ ಅನ್ನಿಸುತ್ತಿದೆ) ಎಂದು ಮನೆಯಲ್ಲಿದ್ದ ಸಂಬಂಧಿಯ ಬಳಿ ಹೇಳಿಕೊಂಡಿದ್ದರಂತೆ.

ಸರ್ಕಾರವೇ ನಡೆಸಲಿದೆ ಡಿಯೆಗೊ ಮರಡೋನಾ ಅಂತ್ಯಕ್ರಿಯೆ; ಅರ್ಜಂಟೀನಾದಲ್ಲಿ ಮೂರುದಿನ ಶೋಕಾಚರಣೆ
ಡಿಯೆಗೊ ಮರಡೋನಾ (ಸಂಗ್ರಹ ಚಿತ್ರ)
Follow us
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 26, 2020 | 6:44 PM

ಹೃದಯಾಘಾತದಿಂದ ಬುಧವಾರ (ನ.25) ನಿಧನರಾದ ಫುಟ್​ಬಾಲ್​ ದಿಗ್ಗಜ ಡಿಯಾಗೋ ಮರಡೋನಾ ಅಂತ್ಯಕ್ರಿಯೆಯನ್ನು ಸರ್ಕಾರವೇ ನಡೆಸಲಿದೆ ಎಂದು ಅರ್ಜೆಂಟೀನಾ ಅಧ್ಯಕ್ಷ ಅಲ್ಬೆರ್ಟೋ ಫರ್ನಂಡೀಸ್ ತಿಳಿಸಿದ್ದಾರೆ. ಹಾಗೇ, ರಾಷ್ಟ್ರದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

ಡಿಯಾಗೋ ಅವರು ವಿಶ್ವ ಕಂಡ ಶ್ರೇಷ್ಠ ಫುಟ್​ಬಾಲ್ ಆಟಗಾರರಾಗಿದ್ದು, 1986ರ ವಿಶ್ವಕಪ್​ ವಿಜೇತ ತಂಡದ ನಾಯಕನಾಗಿದ್ದರು. ಇತ್ತೀಚೆಗಷ್ಟೇ ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿ, ಮನೆಗೆ ಬಂದಿದ್ದರು. ಆದರೆ ನಿನ್ನೆ ಹೃದಯಾಘಾತದಿಂದ ಮರಣಹೊಂದಿದ್ದಾರೆ.

ಅರ್ಜಿಂಟೀನಾ ರಾಜಧಾನಿ ಬ್ಯೂನಸ್ ಐರಿಸ್​​ನಲ್ಲಿರುವ ಸರ್ಕಾರಿ ಭವನದಲ್ಲಿ ಮರಡೋನಾಗೆ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸುವುದಾಗಿ ಅವರ ಕುಟುಂಬಕ್ಕೆ ಅಧ್ಯಕ್ಷರು ತಿಳಿಸಿದ್ದಾರೆ. ಈ ಮೂಲಕ ದೇಶದ ಐಕಾನ್ ಆಗಿದ್ದ ಫುಟ್​ಬಾಲ್​ ದಿಗ್ಗಜನಿಗೆ ವಿದಾಯ ಹೇಳಲು ಸರ್ಕಾರ ನಿರ್ಧರಿಸಿದೆ. ಆದರೆ ಅಂತ್ಯಕ್ರಿಯೆ ಯಾವಾಗ ಎಂಬುದು ಇನ್ನೂ ಖಚಿತವಾಗಿಲ್ಲ. ಈಗಾಗಲೇ ಶವಪರೀಕ್ಷೆ ಮುಗಿದು, ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ.

‘ಐ ಫೀಲ್​ ಸಿಕ್​…’ ಇತ್ತೀಚೆಗಷ್ಟೇ ಮಿದುಳು ಸರ್ಜರಿ ಮಾಡಿಸಿಕೊಂಡು ಮನೆಗೆ ಬಂದಿದ್ದ ಮರಡೋನಾಗೆ ಮನೆಯಲ್ಲೇ ಚಿಕಿತ್ಸೆ ನಡೆಯುತ್ತಿತ್ತು. ಬುಧವಾರ ಬೆಳಗ್ಗೆ ತಿಂಡಿಗೆಂದು ಎದ್ದುಬಂದರೂ ತುಂಬ ಸುಸ್ತಾದವರಂತೆ ಕಾಣುತ್ತಿದ್ದರು. ಅಲ್ಲದೆ ನನಗೆ ಶೀತವಾಗಿದೆ, ಐ ಫೀಲ್​ ಸಿಕ್​..(ಆರೋಗ್ಯ ಸರಿಯಿಲ್ಲದಂತೆ ಅನ್ನಿಸುತ್ತಿದೆ) ಎಂದು ಮನೆಯಲ್ಲಿದ್ದ ಸಂಬಂಧಿಯ ಬಳಿ ಹೇಳಿಕೊಂಡಿದ್ದರಂತೆ. ಅದೇ ಅವರ ಕೊನೇ ಮಾತು..ಮತ್ತೆ ತುಂಬ ಹೊತ್ತು ಬದುಕಲಿಲ್ಲ ಎಂದು ಕುಟುಂಬ ಮೂಲಗಳು ಮಾಧ್ಯಮವೊಂದಕ್ಕೆ ತಿಳಿಸಿವೆ.

ಇದನ್ನೂ ಓದಿ: ಸಾಕರ್ ಫೀಲ್ಡಿಗೆ ಗುಡ್​ಬೈ ಹೇಳಿದ ಫುಟ್ಬಾಲ್ ಮಾಂತ್ರಿಕ ಮರಡೊನ!

ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ