AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರವೇ ನಡೆಸಲಿದೆ ಡಿಯೆಗೊ ಮರಡೋನಾ ಅಂತ್ಯಕ್ರಿಯೆ; ಅರ್ಜಂಟೀನಾದಲ್ಲಿ ಮೂರುದಿನ ಶೋಕಾಚರಣೆ

ಇತ್ತೀಚೆಗಷ್ಟೇ ಮಿದುಳು ಸರ್ಜರಿ ಮಾಡಿಸಿಕೊಂಡು ಮನೆಗೆ ಬಂದಿದ್ದ ಮರಡೋನಾಗೆ ಮನೆಯಲ್ಲೇ ಚಿಕಿತ್ಸೆ ನಡೆಯುತ್ತಿತ್ತು. ಬುಧವಾರ ಬೆಳಗ್ಗೆ ತಿಂಡಿಗೆಂದು ಎದ್ದುಬಂದರೂ ತುಂಬ ಸುಸ್ತಾದವರಂತೆ ಕಾಣುತ್ತಿದ್ದರು. ಅಲ್ಲದೆ ನನಗೆ ಶೀತವಾಗಿದೆ, ಐ ಫೀಲ್​ ಸಿಕ್​..(ಆರೋಗ್ಯ ಸರಿಯಿಲ್ಲದಂತೆ ಅನ್ನಿಸುತ್ತಿದೆ) ಎಂದು ಮನೆಯಲ್ಲಿದ್ದ ಸಂಬಂಧಿಯ ಬಳಿ ಹೇಳಿಕೊಂಡಿದ್ದರಂತೆ.

ಸರ್ಕಾರವೇ ನಡೆಸಲಿದೆ ಡಿಯೆಗೊ ಮರಡೋನಾ ಅಂತ್ಯಕ್ರಿಯೆ; ಅರ್ಜಂಟೀನಾದಲ್ಲಿ ಮೂರುದಿನ ಶೋಕಾಚರಣೆ
ಡಿಯೆಗೊ ಮರಡೋನಾ (ಸಂಗ್ರಹ ಚಿತ್ರ)
Lakshmi Hegde
| Edited By: |

Updated on: Nov 26, 2020 | 6:44 PM

Share

ಹೃದಯಾಘಾತದಿಂದ ಬುಧವಾರ (ನ.25) ನಿಧನರಾದ ಫುಟ್​ಬಾಲ್​ ದಿಗ್ಗಜ ಡಿಯಾಗೋ ಮರಡೋನಾ ಅಂತ್ಯಕ್ರಿಯೆಯನ್ನು ಸರ್ಕಾರವೇ ನಡೆಸಲಿದೆ ಎಂದು ಅರ್ಜೆಂಟೀನಾ ಅಧ್ಯಕ್ಷ ಅಲ್ಬೆರ್ಟೋ ಫರ್ನಂಡೀಸ್ ತಿಳಿಸಿದ್ದಾರೆ. ಹಾಗೇ, ರಾಷ್ಟ್ರದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

ಡಿಯಾಗೋ ಅವರು ವಿಶ್ವ ಕಂಡ ಶ್ರೇಷ್ಠ ಫುಟ್​ಬಾಲ್ ಆಟಗಾರರಾಗಿದ್ದು, 1986ರ ವಿಶ್ವಕಪ್​ ವಿಜೇತ ತಂಡದ ನಾಯಕನಾಗಿದ್ದರು. ಇತ್ತೀಚೆಗಷ್ಟೇ ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿ, ಮನೆಗೆ ಬಂದಿದ್ದರು. ಆದರೆ ನಿನ್ನೆ ಹೃದಯಾಘಾತದಿಂದ ಮರಣಹೊಂದಿದ್ದಾರೆ.

ಅರ್ಜಿಂಟೀನಾ ರಾಜಧಾನಿ ಬ್ಯೂನಸ್ ಐರಿಸ್​​ನಲ್ಲಿರುವ ಸರ್ಕಾರಿ ಭವನದಲ್ಲಿ ಮರಡೋನಾಗೆ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸುವುದಾಗಿ ಅವರ ಕುಟುಂಬಕ್ಕೆ ಅಧ್ಯಕ್ಷರು ತಿಳಿಸಿದ್ದಾರೆ. ಈ ಮೂಲಕ ದೇಶದ ಐಕಾನ್ ಆಗಿದ್ದ ಫುಟ್​ಬಾಲ್​ ದಿಗ್ಗಜನಿಗೆ ವಿದಾಯ ಹೇಳಲು ಸರ್ಕಾರ ನಿರ್ಧರಿಸಿದೆ. ಆದರೆ ಅಂತ್ಯಕ್ರಿಯೆ ಯಾವಾಗ ಎಂಬುದು ಇನ್ನೂ ಖಚಿತವಾಗಿಲ್ಲ. ಈಗಾಗಲೇ ಶವಪರೀಕ್ಷೆ ಮುಗಿದು, ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ.

‘ಐ ಫೀಲ್​ ಸಿಕ್​…’ ಇತ್ತೀಚೆಗಷ್ಟೇ ಮಿದುಳು ಸರ್ಜರಿ ಮಾಡಿಸಿಕೊಂಡು ಮನೆಗೆ ಬಂದಿದ್ದ ಮರಡೋನಾಗೆ ಮನೆಯಲ್ಲೇ ಚಿಕಿತ್ಸೆ ನಡೆಯುತ್ತಿತ್ತು. ಬುಧವಾರ ಬೆಳಗ್ಗೆ ತಿಂಡಿಗೆಂದು ಎದ್ದುಬಂದರೂ ತುಂಬ ಸುಸ್ತಾದವರಂತೆ ಕಾಣುತ್ತಿದ್ದರು. ಅಲ್ಲದೆ ನನಗೆ ಶೀತವಾಗಿದೆ, ಐ ಫೀಲ್​ ಸಿಕ್​..(ಆರೋಗ್ಯ ಸರಿಯಿಲ್ಲದಂತೆ ಅನ್ನಿಸುತ್ತಿದೆ) ಎಂದು ಮನೆಯಲ್ಲಿದ್ದ ಸಂಬಂಧಿಯ ಬಳಿ ಹೇಳಿಕೊಂಡಿದ್ದರಂತೆ. ಅದೇ ಅವರ ಕೊನೇ ಮಾತು..ಮತ್ತೆ ತುಂಬ ಹೊತ್ತು ಬದುಕಲಿಲ್ಲ ಎಂದು ಕುಟುಂಬ ಮೂಲಗಳು ಮಾಧ್ಯಮವೊಂದಕ್ಕೆ ತಿಳಿಸಿವೆ.

ಇದನ್ನೂ ಓದಿ: ಸಾಕರ್ ಫೀಲ್ಡಿಗೆ ಗುಡ್​ಬೈ ಹೇಳಿದ ಫುಟ್ಬಾಲ್ ಮಾಂತ್ರಿಕ ಮರಡೊನ!

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!