AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರವೇ ನಡೆಸಲಿದೆ ಡಿಯೆಗೊ ಮರಡೋನಾ ಅಂತ್ಯಕ್ರಿಯೆ; ಅರ್ಜಂಟೀನಾದಲ್ಲಿ ಮೂರುದಿನ ಶೋಕಾಚರಣೆ

ಇತ್ತೀಚೆಗಷ್ಟೇ ಮಿದುಳು ಸರ್ಜರಿ ಮಾಡಿಸಿಕೊಂಡು ಮನೆಗೆ ಬಂದಿದ್ದ ಮರಡೋನಾಗೆ ಮನೆಯಲ್ಲೇ ಚಿಕಿತ್ಸೆ ನಡೆಯುತ್ತಿತ್ತು. ಬುಧವಾರ ಬೆಳಗ್ಗೆ ತಿಂಡಿಗೆಂದು ಎದ್ದುಬಂದರೂ ತುಂಬ ಸುಸ್ತಾದವರಂತೆ ಕಾಣುತ್ತಿದ್ದರು. ಅಲ್ಲದೆ ನನಗೆ ಶೀತವಾಗಿದೆ, ಐ ಫೀಲ್​ ಸಿಕ್​..(ಆರೋಗ್ಯ ಸರಿಯಿಲ್ಲದಂತೆ ಅನ್ನಿಸುತ್ತಿದೆ) ಎಂದು ಮನೆಯಲ್ಲಿದ್ದ ಸಂಬಂಧಿಯ ಬಳಿ ಹೇಳಿಕೊಂಡಿದ್ದರಂತೆ.

ಸರ್ಕಾರವೇ ನಡೆಸಲಿದೆ ಡಿಯೆಗೊ ಮರಡೋನಾ ಅಂತ್ಯಕ್ರಿಯೆ; ಅರ್ಜಂಟೀನಾದಲ್ಲಿ ಮೂರುದಿನ ಶೋಕಾಚರಣೆ
ಡಿಯೆಗೊ ಮರಡೋನಾ (ಸಂಗ್ರಹ ಚಿತ್ರ)
Lakshmi Hegde
| Edited By: |

Updated on: Nov 26, 2020 | 6:44 PM

Share

ಹೃದಯಾಘಾತದಿಂದ ಬುಧವಾರ (ನ.25) ನಿಧನರಾದ ಫುಟ್​ಬಾಲ್​ ದಿಗ್ಗಜ ಡಿಯಾಗೋ ಮರಡೋನಾ ಅಂತ್ಯಕ್ರಿಯೆಯನ್ನು ಸರ್ಕಾರವೇ ನಡೆಸಲಿದೆ ಎಂದು ಅರ್ಜೆಂಟೀನಾ ಅಧ್ಯಕ್ಷ ಅಲ್ಬೆರ್ಟೋ ಫರ್ನಂಡೀಸ್ ತಿಳಿಸಿದ್ದಾರೆ. ಹಾಗೇ, ರಾಷ್ಟ್ರದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

ಡಿಯಾಗೋ ಅವರು ವಿಶ್ವ ಕಂಡ ಶ್ರೇಷ್ಠ ಫುಟ್​ಬಾಲ್ ಆಟಗಾರರಾಗಿದ್ದು, 1986ರ ವಿಶ್ವಕಪ್​ ವಿಜೇತ ತಂಡದ ನಾಯಕನಾಗಿದ್ದರು. ಇತ್ತೀಚೆಗಷ್ಟೇ ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿ, ಮನೆಗೆ ಬಂದಿದ್ದರು. ಆದರೆ ನಿನ್ನೆ ಹೃದಯಾಘಾತದಿಂದ ಮರಣಹೊಂದಿದ್ದಾರೆ.

ಅರ್ಜಿಂಟೀನಾ ರಾಜಧಾನಿ ಬ್ಯೂನಸ್ ಐರಿಸ್​​ನಲ್ಲಿರುವ ಸರ್ಕಾರಿ ಭವನದಲ್ಲಿ ಮರಡೋನಾಗೆ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸುವುದಾಗಿ ಅವರ ಕುಟುಂಬಕ್ಕೆ ಅಧ್ಯಕ್ಷರು ತಿಳಿಸಿದ್ದಾರೆ. ಈ ಮೂಲಕ ದೇಶದ ಐಕಾನ್ ಆಗಿದ್ದ ಫುಟ್​ಬಾಲ್​ ದಿಗ್ಗಜನಿಗೆ ವಿದಾಯ ಹೇಳಲು ಸರ್ಕಾರ ನಿರ್ಧರಿಸಿದೆ. ಆದರೆ ಅಂತ್ಯಕ್ರಿಯೆ ಯಾವಾಗ ಎಂಬುದು ಇನ್ನೂ ಖಚಿತವಾಗಿಲ್ಲ. ಈಗಾಗಲೇ ಶವಪರೀಕ್ಷೆ ಮುಗಿದು, ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ.

‘ಐ ಫೀಲ್​ ಸಿಕ್​…’ ಇತ್ತೀಚೆಗಷ್ಟೇ ಮಿದುಳು ಸರ್ಜರಿ ಮಾಡಿಸಿಕೊಂಡು ಮನೆಗೆ ಬಂದಿದ್ದ ಮರಡೋನಾಗೆ ಮನೆಯಲ್ಲೇ ಚಿಕಿತ್ಸೆ ನಡೆಯುತ್ತಿತ್ತು. ಬುಧವಾರ ಬೆಳಗ್ಗೆ ತಿಂಡಿಗೆಂದು ಎದ್ದುಬಂದರೂ ತುಂಬ ಸುಸ್ತಾದವರಂತೆ ಕಾಣುತ್ತಿದ್ದರು. ಅಲ್ಲದೆ ನನಗೆ ಶೀತವಾಗಿದೆ, ಐ ಫೀಲ್​ ಸಿಕ್​..(ಆರೋಗ್ಯ ಸರಿಯಿಲ್ಲದಂತೆ ಅನ್ನಿಸುತ್ತಿದೆ) ಎಂದು ಮನೆಯಲ್ಲಿದ್ದ ಸಂಬಂಧಿಯ ಬಳಿ ಹೇಳಿಕೊಂಡಿದ್ದರಂತೆ. ಅದೇ ಅವರ ಕೊನೇ ಮಾತು..ಮತ್ತೆ ತುಂಬ ಹೊತ್ತು ಬದುಕಲಿಲ್ಲ ಎಂದು ಕುಟುಂಬ ಮೂಲಗಳು ಮಾಧ್ಯಮವೊಂದಕ್ಕೆ ತಿಳಿಸಿವೆ.

ಇದನ್ನೂ ಓದಿ: ಸಾಕರ್ ಫೀಲ್ಡಿಗೆ ಗುಡ್​ಬೈ ಹೇಳಿದ ಫುಟ್ಬಾಲ್ ಮಾಂತ್ರಿಕ ಮರಡೊನ!

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!