AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರವೇ ನಡೆಸಲಿದೆ ಡಿಯೆಗೊ ಮರಡೋನಾ ಅಂತ್ಯಕ್ರಿಯೆ; ಅರ್ಜಂಟೀನಾದಲ್ಲಿ ಮೂರುದಿನ ಶೋಕಾಚರಣೆ

ಇತ್ತೀಚೆಗಷ್ಟೇ ಮಿದುಳು ಸರ್ಜರಿ ಮಾಡಿಸಿಕೊಂಡು ಮನೆಗೆ ಬಂದಿದ್ದ ಮರಡೋನಾಗೆ ಮನೆಯಲ್ಲೇ ಚಿಕಿತ್ಸೆ ನಡೆಯುತ್ತಿತ್ತು. ಬುಧವಾರ ಬೆಳಗ್ಗೆ ತಿಂಡಿಗೆಂದು ಎದ್ದುಬಂದರೂ ತುಂಬ ಸುಸ್ತಾದವರಂತೆ ಕಾಣುತ್ತಿದ್ದರು. ಅಲ್ಲದೆ ನನಗೆ ಶೀತವಾಗಿದೆ, ಐ ಫೀಲ್​ ಸಿಕ್​..(ಆರೋಗ್ಯ ಸರಿಯಿಲ್ಲದಂತೆ ಅನ್ನಿಸುತ್ತಿದೆ) ಎಂದು ಮನೆಯಲ್ಲಿದ್ದ ಸಂಬಂಧಿಯ ಬಳಿ ಹೇಳಿಕೊಂಡಿದ್ದರಂತೆ.

ಸರ್ಕಾರವೇ ನಡೆಸಲಿದೆ ಡಿಯೆಗೊ ಮರಡೋನಾ ಅಂತ್ಯಕ್ರಿಯೆ; ಅರ್ಜಂಟೀನಾದಲ್ಲಿ ಮೂರುದಿನ ಶೋಕಾಚರಣೆ
ಡಿಯೆಗೊ ಮರಡೋನಾ (ಸಂಗ್ರಹ ಚಿತ್ರ)
Lakshmi Hegde
| Edited By: |

Updated on: Nov 26, 2020 | 6:44 PM

Share

ಹೃದಯಾಘಾತದಿಂದ ಬುಧವಾರ (ನ.25) ನಿಧನರಾದ ಫುಟ್​ಬಾಲ್​ ದಿಗ್ಗಜ ಡಿಯಾಗೋ ಮರಡೋನಾ ಅಂತ್ಯಕ್ರಿಯೆಯನ್ನು ಸರ್ಕಾರವೇ ನಡೆಸಲಿದೆ ಎಂದು ಅರ್ಜೆಂಟೀನಾ ಅಧ್ಯಕ್ಷ ಅಲ್ಬೆರ್ಟೋ ಫರ್ನಂಡೀಸ್ ತಿಳಿಸಿದ್ದಾರೆ. ಹಾಗೇ, ರಾಷ್ಟ್ರದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

ಡಿಯಾಗೋ ಅವರು ವಿಶ್ವ ಕಂಡ ಶ್ರೇಷ್ಠ ಫುಟ್​ಬಾಲ್ ಆಟಗಾರರಾಗಿದ್ದು, 1986ರ ವಿಶ್ವಕಪ್​ ವಿಜೇತ ತಂಡದ ನಾಯಕನಾಗಿದ್ದರು. ಇತ್ತೀಚೆಗಷ್ಟೇ ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿ, ಮನೆಗೆ ಬಂದಿದ್ದರು. ಆದರೆ ನಿನ್ನೆ ಹೃದಯಾಘಾತದಿಂದ ಮರಣಹೊಂದಿದ್ದಾರೆ.

ಅರ್ಜಿಂಟೀನಾ ರಾಜಧಾನಿ ಬ್ಯೂನಸ್ ಐರಿಸ್​​ನಲ್ಲಿರುವ ಸರ್ಕಾರಿ ಭವನದಲ್ಲಿ ಮರಡೋನಾಗೆ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸುವುದಾಗಿ ಅವರ ಕುಟುಂಬಕ್ಕೆ ಅಧ್ಯಕ್ಷರು ತಿಳಿಸಿದ್ದಾರೆ. ಈ ಮೂಲಕ ದೇಶದ ಐಕಾನ್ ಆಗಿದ್ದ ಫುಟ್​ಬಾಲ್​ ದಿಗ್ಗಜನಿಗೆ ವಿದಾಯ ಹೇಳಲು ಸರ್ಕಾರ ನಿರ್ಧರಿಸಿದೆ. ಆದರೆ ಅಂತ್ಯಕ್ರಿಯೆ ಯಾವಾಗ ಎಂಬುದು ಇನ್ನೂ ಖಚಿತವಾಗಿಲ್ಲ. ಈಗಾಗಲೇ ಶವಪರೀಕ್ಷೆ ಮುಗಿದು, ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ.

‘ಐ ಫೀಲ್​ ಸಿಕ್​…’ ಇತ್ತೀಚೆಗಷ್ಟೇ ಮಿದುಳು ಸರ್ಜರಿ ಮಾಡಿಸಿಕೊಂಡು ಮನೆಗೆ ಬಂದಿದ್ದ ಮರಡೋನಾಗೆ ಮನೆಯಲ್ಲೇ ಚಿಕಿತ್ಸೆ ನಡೆಯುತ್ತಿತ್ತು. ಬುಧವಾರ ಬೆಳಗ್ಗೆ ತಿಂಡಿಗೆಂದು ಎದ್ದುಬಂದರೂ ತುಂಬ ಸುಸ್ತಾದವರಂತೆ ಕಾಣುತ್ತಿದ್ದರು. ಅಲ್ಲದೆ ನನಗೆ ಶೀತವಾಗಿದೆ, ಐ ಫೀಲ್​ ಸಿಕ್​..(ಆರೋಗ್ಯ ಸರಿಯಿಲ್ಲದಂತೆ ಅನ್ನಿಸುತ್ತಿದೆ) ಎಂದು ಮನೆಯಲ್ಲಿದ್ದ ಸಂಬಂಧಿಯ ಬಳಿ ಹೇಳಿಕೊಂಡಿದ್ದರಂತೆ. ಅದೇ ಅವರ ಕೊನೇ ಮಾತು..ಮತ್ತೆ ತುಂಬ ಹೊತ್ತು ಬದುಕಲಿಲ್ಲ ಎಂದು ಕುಟುಂಬ ಮೂಲಗಳು ಮಾಧ್ಯಮವೊಂದಕ್ಕೆ ತಿಳಿಸಿವೆ.

ಇದನ್ನೂ ಓದಿ: ಸಾಕರ್ ಫೀಲ್ಡಿಗೆ ಗುಡ್​ಬೈ ಹೇಳಿದ ಫುಟ್ಬಾಲ್ ಮಾಂತ್ರಿಕ ಮರಡೊನ!

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!