AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಸೀನಿಯರ್ ತಂಡಕ್ಕೆ ಮೊದಲ ಬಾರಿಗೆ ಆಯ್ಕೆಯಾದ ಅರ್ಜುನ್ ತೆಂಡೂಲ್ಕರ್

ಭಾರತದ ಕ್ರಿಕೆಟ್ ಟೀಮನ್ನು ಪ್ರತಿನಿಧಿಸಲು ಭಾರಿ ಶ್ರಮ ಪಡುತ್ತಿರುವ ಅರ್ಜುನ್ ತೆಂಡೂಲ್ಕರ್ ಆ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿರಿಸಿದ್ದಾರೆ. ಅವರನ್ನು ಮುಂಬೈ ಸೀನಿಯರ್ ಟೀಮಿಗೆ ಆಯ್ಕೆ ಮಾಡಲಾಗಿದೆ.

ಮುಂಬೈ ಸೀನಿಯರ್ ತಂಡಕ್ಕೆ ಮೊದಲ ಬಾರಿಗೆ ಆಯ್ಕೆಯಾದ ಅರ್ಜುನ್ ತೆಂಡೂಲ್ಕರ್
ಅರ್ಜುನ್ ತೆಂಡೂಲ್ಕರ್
ಅರುಣ್​ ಕುಮಾರ್​ ಬೆಳ್ಳಿ
|

Updated on: Jan 02, 2021 | 10:08 PM

Share

ಭಾರತದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರ ಮಗ ಅರ್ಜುನ್ ತೆಂಡೂಲ್ಕರ್ ಮುಂಬೈ ಸೀನಿಯರ್ ಟೀಮಿನಲ್ಲಿ ಸ್ಥಾನ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜನೆವರಿ 10ರಿಂದ ಆರಂಭವಾಗಲಿರುವ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಮುಂಬೈಯನ್ನು ಪ್ರತಿನಿಧಿಸಲಿರುವ 22 ಆಟಗಾರರ ಪೈಕಿ ಅರ್ಜುನ್ ಒಬ್ಬರಾಗಿದ್ದಾರೆ.

ಅಸಲಿಗೆ, ಮೊದಲು ಆಯ್ಕೆ ಮಾಡಿದ 20 ಸದಸ್ಯರ ತಂಡದಲ್ಲಿ ಅರ್ಜುನ್​ಗೆ ಅವಕಾಶ ಕಲ್ಪಿಸಲಾಗಿರಲಿಲ್ಲ. ಆದರೆ, ಕೊವಿಡ್-19 ಪಿಡುಗಿನ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು, ಟೂರ್ನಿಯಲ್ಲಿ ಭಾಗವಹಿಸುವ ಎಲ್ಲ ತಂಡಗಳಿಗೆ ಅಟಗಾರರ ಸಂಖ್ಯೆಯನ್ನು 22ಕ್ಕೆ ಹೆಚ್ಚಿಸಿಕೊಳ್ಳಲು ಸೂಚಿಸಿತು. ಮಂಡಳಿಯ ಸೂಚನೆ ನಂತರ ಮುಂಬೈ ಕ್ರಿಕೆಟ್ ಸಂಸ್ಥೆ ಅರ್ಜುನ್ ಮತ್ತು ಇನ್ನೊಬ್ಬ ವೇಗದ ಬೌಲರ್ ಕೃತಿಕ್ ಹನಗವಾಡಿ ಅವರನ್ನು ತಂಡಕ್ಕೆ ಸೇರಿಸಿಕೊಂಡಿತು.

ಎಡಗೈ ಮಧ್ಯಮ ವೇಗದ ಬೌಲರ್ ಆಗಿರುವ 21-ವರ್ಷ ವಯಸ್ಸಿನ ಅರ್ಜುನ್ ಇದೇ ಮೊದಲಬಾರಿಗೆ ಮುಂಬೈನ ಸೀನಿಯರ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದಕ್ಕೆ ಮೊದಲು ಅವರು ವಯೋಮಿತಿ ಆಧಾರಿತ ಟೂರ್ನಿಗಳಲ್ಲಿ ಆಡುತ್ತಿದ್ದರು.

ಸಚಿನ್ ಮತ್ತು ಅರ್ಜುನ್ ತೆಂಡೂಲ್ಕರ್

ಭಾರತದ ಸೀನಿಯರ್ ಟೀಮಿನ ಸದಸ್ಯರಿಗೆ ನೆಟ್ಸ್​ನಲ್ಲಿ ಬೌಲಿಂಗ್ ಮಾಡುತ್ತಿದ್ದ ಅರ್ಜುನ್, ಭಾರತದ ಅಂಡರ್-19 ಟೀಮಿಗೆ ಆಯ್ಕೆಯಾಗಿ ಶ್ರೀಲಂಕಾ ಪ್ರವಾಸ ಹೋಗಿದ್ದರು. ಅವರನ್ನು ಒಬ್ಬ ಉತ್ತಮ ಬೌಲರ್ ಆಗಿ ರೂಪಿಸಲು ಸೀನಿಯರ್ ತೆಂಡೂಲ್ಕರ್ ಬಹಳಷ್ಟು ಶ್ರಮವಹಿಸಿದ್ದಾರೆ.

ಜನವರಿ 10 ರಿಂದ ಆರಂಭಗೊಳ್ಳುವ ಮುಷ್ತಾಕ್ ಅಲಿ ಟೂರ್ನಿಯು ವಿಳಂಬಿತ 2020-21 ದೇಶೀಯ ಕ್ರಿಕೆಟ್ ಋತುವಿನ ಮೊದಲ ಪಂದ್ಯಾವಳಿಯಾಗಲಿದೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ