AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಓವರ್​ನಲ್ಲಿ 5 ಸಿಕ್ಸರ್​; IPL 14 ಹರಾಜಿಗೂ ಮುನ್ನ ಅರ್ಜುನ್​ ತೆಂಡೂಲ್ಕರ್ ಅದ್ಭುತ ಆಲ್​ರೌಂಡ್ ಪ್ರದರ್ಶನ

21 ವರ್ಷದ ಅರ್ಜುನ್ ತನ್ನ ಅದ್ಭುತ ಇನ್ನಿಂಗ್ಸ್​ನಲ್ಲಿ ಐದು ಬೌಂಡರಿ ಮತ್ತು ಎಂಟು ಸಿಕ್ಸರ್​ಗಳನ್ನು ಬಾರಿಸಿದರು. ಅಲ್ಲದೆ ಆಫ್‌ ಸ್ಪಿನ್ನರ್‌ ಹಶೀರ್‌ ದಫೆದಾರ್‌ ಅವರ ಓವರ್‌ನಲ್ಲಿ ಐದು ಸಿಕ್ಸರ್‌ ಹೊಡೆದರು. 31 ಎಸೆತಗಳಲ್ಲಿ ಅಜೇಯ 77 ರನ್ ಗಳಿಸಿದ ಅವರು 41 ರನ್‌ಗಳಿಗೆ ಮೂರು ವಿಕೆಟ್ ಪಡೆದರು.

ಒಂದೇ ಓವರ್​ನಲ್ಲಿ 5 ಸಿಕ್ಸರ್​; IPL 14 ಹರಾಜಿಗೂ ಮುನ್ನ ಅರ್ಜುನ್​ ತೆಂಡೂಲ್ಕರ್ ಅದ್ಭುತ ಆಲ್​ರೌಂಡ್ ಪ್ರದರ್ಶನ
ಅರ್ಜುನ್​ ತೆಂಡೂಲ್ಕರ್
ಪೃಥ್ವಿಶಂಕರ
| Edited By: |

Updated on: Feb 15, 2021 | 4:46 PM

Share

ಮುಂಬೈ: ಫೆಬ್ರವರಿ 14 ರಂದು ಮುಂಬೈನಲ್ಲಿ ನಡೆದ 73 ನೇ ಪೊಲೀಸ್ ಆಹ್ವಾನ ಶೀಲ್ಡ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕ್ರಿಕೆಟ್​ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅದ್ಭುತ ಆಟ ಪ್ರದರ್ಶಿಸಿದ್ದಾರೆ. ಎ ಗುಂಪಿನ ಎರಡನೇ ಸುತ್ತಿನಲ್ಲಿ 31 ಎಸೆತಗಳಲ್ಲಿ ಅಜೇಯ 77 ರನ್ ಗಳಿಸಿದ ಅವರು ಬೌಲಿಂಗ್​ನಲ್ಲಿ 41 ರನ್‌ಗಳಿಗೆ ಮೂರು ವಿಕೆಟ್ ಪಡೆದರು. ಇದರಿಂದಾಗಿ ಎಂಐಜಿ ಕ್ರಿಕೆಟ್ ಕ್ಲಬ್, ಇಸ್ಲಾಂ ಜಿಮ್ಖಾನಾ ತಂಡವನ್ನು 194 ರನ್‌ಗಳಿಂದ ಸೋಲಿಸಿತು.

ಈ ಪಂದ್ಯಾವಳಿಯನ್ನು ಮುಂಬೈ ಕ್ರಿಕೆಟ್ ಅಸೋಸಿಯೇಶನ್ (ಎಂಸಿಎ) ಅಡಿಯಲ್ಲಿ ಆಯೋಜಿಸಲಾಗುತ್ತಿದ್ದು ಕೊರೊನಾ ವೈರಸ್‌ನಿಂದ ಉಂಟಾದ ಲಾಕ್‌ಡೌನ್ ನಂತರ ನಗರದ ಮೊದಲ ಕ್ರಿಕೆಟ್ ಸ್ಪರ್ಧೆ ಇದಾಗಿದೆ. 21 ವರ್ಷದ ಅರ್ಜುನ್ ತಮ್ಮ ಅದ್ಭುತ ಇನ್ನಿಂಗ್ಸ್​ನಲ್ಲಿ ಐದು ಬೌಂಡರಿ ಮತ್ತು ಎಂಟು ಸಿಕ್ಸರ್​ಗಳನ್ನು ಬಾರಿಸಿದರು. ಅಲ್ಲದೆ ಆಫ್‌ ಸ್ಪಿನ್ನರ್‌ ಹಶೀರ್‌ ದಫೆದಾರ್‌ ಅವರ ಓವರ್‌ನಲ್ಲಿ ಐದು ಸಿಕ್ಸರ್‌ ಹೊಡೆದರು.

ಅರ್ಜುನ್ ಅವರ ಅದ್ಭುತ ಬ್ಯಾಟಿಂಗ್ ಜೊತೆಗೆ, ಓಪನರ್ ಕೆವಿನ್ ಡಿಎಲ್ಮೆಡಾ (96 ರನ್​) ಮತ್ತು ನಾಲ್ಕನೇ ನಂಬರ್ ಬ್ಯಾಟ್ಸ್‌ಮನ್ ಪ್ರಣೀಶ್ ಖಂಡಿಲೆವಾರ್ (112 ರನ್​) ಎಂಐಜಿಯ ಅದ್ಭುತ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಟಾಸ್ ಗೆದ್ದ ನಂತರ ಎಂಐಜಿ ಬ್ಯಾಟಿಂಗ್ ಮಾಡಲು ನಿರ್ಧರಿಸಿ 45 ಓವರ್‌ಗಳಲ್ಲಿ ಏಳು ವಿಕೆಟ್‌ಗಳಿಗೆ 385 ರನ್ ಗಳಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಇಸ್ಲಾಂ ಜಿಮ್ಖಾನಾ ತಂಡವನ್ನು 41.5 ಓವರ್‌ಗಳಲ್ಲಿ ಕೇವಲ 191 ರನ್‌ಗಳಿಗೆ ಆಲೌಟ್​ ಆಯಿತು. ಅರ್ಜುನ್ ಜೊತೆಯಲ್ಲಿ ಅಂಕುಶ್ ಜೈಸ್ವಾಲ್ (31 ರನ್‌ಗೆ 3 ವಿಕೆಟ್) ಮತ್ತು ಶ್ರೇಯಸ್ ಗುರಾವ್ (34 ರನ್‌ಗೆ 3 ವಿಕೆಟ್) ವಿಕೆಟ್ ಪಡೆದು ಮಿಂಚಿದರು.

ಮುಂಬೈನ ಹಿರಿಯ ತಂಡಕ್ಕೆ ಪಾದಾರ್ಪಣೆ ಅರ್ಜುನ್ ಇತ್ತೀಚೆಗೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡುವ ಮೂಲಕ ಮುಂಬೈ ಹಿರಿಯ ತಂಡಕ್ಕೆ ಪಾದಾರ್ಪಣೆ ಮಾಡಿದರು. ಆದಾಗ್ಯೂ, ಈ ಪಂದ್ಯಾವಳಿಯ ಎರಡು ಪಂದ್ಯಗಳಲ್ಲಿ ಅವರ ಸಾಧನೆ ಸೌಮ್ಯವಾಗಿತ್ತು. ಮುಂಬೈ ತಂಡವು ಐದು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. ಅದೇ ಸಮಯದಲ್ಲಿ, ವಿಜಯ್ ಹಜಾರೆ ಟ್ರೋಫಿಗೆ ಅರ್ಜುನ್ ತೆಂಡೂಲ್ಕರ್ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ತಂಡದ ಆಯ್ಕೆಗೆ ಮುಂಚಿನ ಅಭ್ಯಾಸ ಪಂದ್ಯಗಳಲ್ಲಿ, ಅವರು ಬೌಲಿಂಗ್ ಹಾಗೂ ಬ್ಯಾಟಿಂಗ್​ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ತೋರಲಿಲ್ಲ. ಈ ಕಾರಣದಿಂದಾಗಿ ಅವರು ತಂಡದಿಂದ ಹೊರಗುಳಿದಿದ್ದರು.

ಫೆಬ್ರವರಿ 18 ರಂದು ಚೆನ್ನೈನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹರಾಜಾಗುವ ಆಟಗಾರರ ಪಟ್ಟಿಯಲ್ಲಿ ಅರ್ಜುನ್ ಹೆಸರೂ ಇದೆ. ಹೀಗಾಗಿ ಅರ್ಜುನ್​ ನೀಡಿರುವ ಈ ಅದ್ಭುತ ಪ್ರದರ್ಶನ ಐಪಿಎಲ್ ಹರಾಜಿನಲ್ಲಿ ಪರಿಣಾಮಕಾರಿಯಾಗಬಹುದು.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!