AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ACT 2021: ರೋಚಕ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿ ಕಂಚಿನ ಪದಕಕ್ಕೆ ಮುತ್ತಿಟ್ಟ ಭಾರತ ಹಾಕಿ ತಂಡ

Asian champions trophy 2021: ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2021 ರ ಮೂರನೇ ಸ್ಥಾನದ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ 4-3 ಗೋಲುಗಳ ಅಂತರದ ರೋಚಕ ಜಯವನ್ನು ದಾಖಲಿಸಿತು.

ACT 2021: ರೋಚಕ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿ ಕಂಚಿನ ಪದಕಕ್ಕೆ ಮುತ್ತಿಟ್ಟ ಭಾರತ ಹಾಕಿ ತಂಡ
ಭಾರತ- ಪಾಕ್ ಹಾಕಿ ತಂಡ
TV9 Web
| Edited By: |

Updated on:Dec 22, 2021 | 5:28 PM

Share

ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2021 ರ ಮೂರನೇ ಸ್ಥಾನದ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ 4-3 ರೋಚಕ ಜಯವನ್ನು ದಾಖಲಿಸಿತು. ಭಾರತವು ಕೊನೆಯ ಕೆಲವು ನಿಮಿಷಗಳಲ್ಲಿ ಕೇವಲ ಒಂಬತ್ತು ಆಟಗಾರರೊಂದಿಗೆ ಆಡಿದ್ದರು ಕೂಡ ತಮ್ಮ ಮುನ್ನಡೆಯನ್ನು ಕಳೆದುಕೊಳ್ಳದೆ ಗೆಲುವನ್ನು ದಾಖಲಿಸಿದರು. ಕಳೆದ ಬಾರಿ ಈ ಟೂರ್ನಮೆಂಟ್ ಅನ್ನು ಗೆದ್ದಿದ್ದ ಟೀಮ್ ಇಂಡಿಯಾ ಈ ಬಾರಿ ಜಪಾನ್ ವಿರುದ್ಧ ದುರ್ಬಲ ಆಟದಿಂದ ಪ್ರಶಸ್ತಿಯನ್ನು ಕೈಯಿಂದ ಕಳೆದುಕೊಂಡಿತು.ಈ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಇದು ಎರಡನೇ ಗೆಲುವು. ಇದಕ್ಕೂ ಮೊದಲು ರೌಂಡ್ ರಾಬಿನ್ ಹಂತದಲ್ಲಿ ಪಾಕಿಸ್ತಾನವನ್ನು 3-1 ಗೋಲುಗಳಿಂದ ಸೋಲಿಸಿತ್ತು.

ಈ ಪಂದ್ಯದಲ್ಲಿ ಭಾರತವು ಒಟ್ಟು 11 ಪೆನಾಲ್ಟಿ ಕಾರ್ನರ್‌ಗಳನ್ನು ಗಳಿಸಿತು ಆದರೆ ಕೇವಲ ಎರಡು ಗೋಲುಗಳನ್ನು ಪರಿವರ್ತಿಸಲು ಸಾಧ್ಯವಾಯಿತು. ಈ ಮೂಲಕ ಪೆನಾಲ್ಟಿ ಕಾರ್ನರ್ ಗಳನ್ನು ಗೋಲಾಗಿ ಪರಿವರ್ತಿಸಲು ಸಾಧ್ಯವಾಗದೆ ಭಾರತದ ಹಳೇ ಸಂಕಷ್ಟ ಮುಂದುವರಿದಿದೆ. ಜಪಾನ್ ವಿರುದ್ಧದ ಪಂದ್ಯದಲ್ಲೂ ಭಾರತ ಅದೇ ತಪ್ಪನ್ನು ಮಾಡಬೇಕಾಯಿತು. ಮತ್ತೊಂದೆಡೆ, ಇಡೀ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ನಾಲ್ಕು ಪೆನಾಲ್ಟಿ ಕಾರ್ನರ್ ಸಿಕ್ಕಿತು. ಅವರಲ್ಲಿ ಒಬ್ಬರು ಗೋಲು ಹೊಡೆದರು. ಆಟಗಾರರು ಕೂಡ ಪಂದ್ಯದಲ್ಲಿ ಉತ್ಸಾಹ ತೋರಿದರು ಮತ್ತು ಇದರಿಂದಾಗಿ ಅವರು ಅನೇಕ ತಪ್ಪುಗಳನ್ನು ಮಾಡಿದರು. ಪಂದ್ಯದುದ್ದಕ್ಕೂ ಎಂಟು ಕಾರ್ಡ್‌ಗಳನ್ನು ತೋರಿಸಲಾಯಿತು. ಇದರ ಅಡಿಯಲ್ಲಿ ಪಾಕಿಸ್ತಾನಕ್ಕೆ ಮೂರು ಹಸಿರು ಮತ್ತು ಒಂದು ಹಳದಿ ಕಾರ್ಡ್ ತೋರಿಸಲಾಯಿತು. ಅದೇ ಸಮಯದಲ್ಲಿ ಭಾರತಕ್ಕೆ ಒಂದು ಹಸಿರು ಮತ್ತು ಮೂರು ಹಳದಿ ಕಾರ್ಡ್‌ಗಳು ದೊರೆತವು.

ಈ ಆಟಗಾರರು ಗೋಲು ಗಳಿಸಿದರು ಭಾರತದ ಪರ ಹರ್ಮನ್‌ಪ್ರೀತ್ ಸಿಂಗ್, ಸುಮಿತ್ ಕುಮಾರ್ (45ನೇ ನಿ), ವರುಣ್ ಕುಮಾರ್ (53ನೇ ನಿ) ಮತ್ತು ಆಕಾಶದೀಪ್ ಸಿಂಗ್ (57ನೇ ನಿ) ಗೋಲು ಗಳಿಸಿದರು. ಮತ್ತೊಂದೆಡೆ ಪಾಕಿಸ್ತಾನ ಪರ ಅಫ್ರಾಜ್ (10ನೇ), ಅಬ್ದುಲ್ ರಾಣಾ (33ನೇ) ಮತ್ತು ಅಹ್ಮದ್ ನದೀಮ್ (57ನೇ ನಿಮಿಷ) ಗೋಲು ಗಳಿಸಿದರು. ಢಾಕಾದಲ್ಲಿ ನಡೆದ ಪಂದ್ಯದಲ್ಲಿ ಭಾರತ ಮೊದಲ ನಿಮಿಷದಿಂದಲೇ ಮುನ್ನಡೆ ಸಾಧಿಸಿತ್ತು. ಉಪನಾಯಕ ಹರ್ಮನ್‌ಪ್ರೀತ್ ಸಿಂಗ್ ಈ ಗೋಲು ದಾಖಲಿಸಿದರು. ಭಾರತ ಆರಂಭಿಕ ಕ್ಷಣಗಳಲ್ಲಿ ಪೆನಾಲ್ಟಿ ಕಾರ್ನರ್‌ಗಳನ್ನು ಕಲೆಹಾಕಿತು ಆದರೆ ಹರ್ಮನ್‌ಪ್ರೀತ್ ಮಾತ್ರ ಗೋಲು ಗಳಿಸಲು ಸಾಧ್ಯವಾಯಿತು.

Published On - 5:13 pm, Wed, 22 December 21

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್