AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asian Games 2023: ಭಾರತಕ್ಕೆ ಕಂಚಿನ ಪದಕ ಗೆದ್ದು ಕೊಟ್ಟ ಇಯಾಬಾದ್ ಅಲಿ

Asian Games 2023: ಪ್ರಸ್ತುತ ಪದಕ ಪಟ್ಟಿಯಲ್ಲಿ ಭಾರತ ತಂಡವು 6ನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಒಟ್ಟು 3 ಚಿನ್ನದ ಪದಕ, 4 ಬೆಳ್ಳಿ ಪದಕ ಮತ್ತು 7 ಕಂಚಿನ ಪದಕಗಳನ್ನು ತೆಗೆದುಕೊಂಡಿದ್ದಾರೆ. ಇನ್ನು 40 ಚಿನ್ನದ ಪದಕ, 21 ಬೆಳ್ಳಿ ಪದಕ ಮತ್ತು 9 ಕಂಚಿನ ಪದಕಗಳನ್ನು ಗೆದ್ದಿರುವ ಚೀನಾ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

Asian Games 2023: ಭಾರತಕ್ಕೆ ಕಂಚಿನ ಪದಕ ಗೆದ್ದು ಕೊಟ್ಟ ಇಯಾಬಾದ್ ಅಲಿ
Eabad Ali
TV9 Web
| Edited By: |

Updated on: Sep 26, 2023 | 3:12 PM

Share

ಚೀನಾದ ಹ್ಯಾಂಗ್​ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನ ಸೈಲಿಂಗ್​ನಲ್ಲಿ (ನೌಕಾಯಾನ ಸ್ಪರ್ಧೆ) ಭಾರತ ಎರಡು ಪದಕಗಳನ್ನು ಗೆದ್ದುಕೊಂಡಿದೆ. ಮಂಗಳವಾರ ನಡೆದ ಈ ಸ್ಪರ್ಧೆಯ ಬಾಲಕಿಯ ವಿಭಾಗದಲ್ಲಿ 17ರ ಹರೆಯದ ನೇಹಾ ಠಾಕೂರ್ ಬೆಳ್ಳಿ ಪದಕ ಗೆದ್ದರೆ, ಪುರುಷರ ವಿಭಾಗದಲ್ಲಿ ಇಯಾಬಾದ್ ಅಲಿ ಕಂಚಿನ ಪದಕಕ್ಕೆ ಕೊರೊಳೊಡ್ಡಿದರು.

ಪುರುಷರ ವಿಂಡ್‌ಸರ್ಫರ್ ಆರ್‌ಎಸ್: ಎಕ್ಸ್ ಈವೆಂಟ್‌ನಲ್ಲಿ ಇಯಾಬಾದ್ ಅಲಿ 52 ಅಂಕಗಳು ಮತ್ತು ನೆಟ್​ ಸ್ಕೋರ್‌ನೊಂದಿಗೆ ಮೂರನೇ ಸ್ಥಾನ ಪಡೆದರು. ಈ ಮೂಲಕ ಸೈಲಿಂಗ್​ನಲ್ಲಿ ಭಾರತಕ್ಕೆ ಕಂಚಿನ ಪದಕ ತಂದುಕೊಡುವಲ್ಲಿ ಯಶಸ್ವಿಯಾದರು. ಇನ್ನು ಸ್ಪರ್ಧೆಯಲ್ಲಿ ಕೊರಿಯಾದ ವೊನ್ವೂ ಚೋ ಚಿನ್ನದ ಪದಕ ಗೆದ್ದರೆ, ಥಾಯ್ಲೆಂಡ್‌ನ ನಟ್ಟಾಫೊಂಗ್ ಫೋನೊಫ್ಫರತ್ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು.

ಬಾಲಕಿಯರ ಡಿಂಗಿ ಐಎಲ್‌ಸಿಎ-4 ಸ್ಪರ್ಧೆಯಲ್ಲಿ 17 ವರ್ಷದ ನೇಹಾ ಎರಡನೇ ಸ್ಥಾನ ಪಡೆದು ಭಾರತಕ್ಕೆ ದಿನದ ಮೊದಲ ಪದಕವನ್ನು ತಂದುಕೊಟ್ಟರು. ಭೋಪಾಲ್‌ನ ನ್ಯಾಷನಲ್ ಸೈಲಿಂಗ್ ಸ್ಕೂಲ್‌ನ ಉದಯೋನ್ಮುಖ ನಾವಿಕೆಯಾಗಿ ಗುರುತಿಸಿಕೊಂಡಿರುವ ನೇಹಾ ಒಟ್ಟು 32 ಅಂಕಗಳೊಂದಿಗೆ ಗುರಿ ಮುಟ್ಟಿದ್ದರು. ಅಲ್ಲದೆ 27 ನೆಟ್​ ಸ್ಕೋರ್​ಗಳೊಂದಿಗೆ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಈ ಸ್ಪರ್ಧೆಯಲ್ಲಿ ಥಾಯ್ಲೆಂಡ್‌ನ ನೊಪಾಸ್ಸೋರ್ನ್ ಖುನ್‌ಬೂಂಜಾನ್‌ ಚಿನ್ನ ಪದಕ ತಮ್ಮದಾಗಿಸಕೊಂಡರೆ, ಸಿಂಗಾಪುರದ ಕೀರಾ ಮೇರಿ ಕಾರ್ಲೈಲ್ ಕಂಚಿಗೆ ತೃಪ್ತಿಪಟ್ಟರು.

ಪ್ರಸ್ತುತ ಪದಕ ಪಟ್ಟಿಯಲ್ಲಿ ಭಾರತ ತಂಡವು 6ನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಒಟ್ಟು 3 ಚಿನ್ನದ ಪದಕ, 4 ಬೆಳ್ಳಿ ಪದಕ ಮತ್ತು 7 ಕಂಚಿನ ಪದಕಗಳನ್ನು ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಏಷ್ಯನ್ ಗೇಮ್ಸ್​: ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಇನ್ನು 40 ಚಿನ್ನದ ಪದಕ, 21 ಬೆಳ್ಳಿ ಪದಕ ಮತ್ತು 9 ಕಂಚಿನ ಪದಕಗಳನ್ನು ಗೆದ್ದಿರುವ ಚೀನಾ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್