AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asian Games 2023: ಭಾರತಕ್ಕೆ ಕಂಚಿನ ಪದಕ ಗೆದ್ದು ಕೊಟ್ಟ ಇಯಾಬಾದ್ ಅಲಿ

Asian Games 2023: ಪ್ರಸ್ತುತ ಪದಕ ಪಟ್ಟಿಯಲ್ಲಿ ಭಾರತ ತಂಡವು 6ನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಒಟ್ಟು 3 ಚಿನ್ನದ ಪದಕ, 4 ಬೆಳ್ಳಿ ಪದಕ ಮತ್ತು 7 ಕಂಚಿನ ಪದಕಗಳನ್ನು ತೆಗೆದುಕೊಂಡಿದ್ದಾರೆ. ಇನ್ನು 40 ಚಿನ್ನದ ಪದಕ, 21 ಬೆಳ್ಳಿ ಪದಕ ಮತ್ತು 9 ಕಂಚಿನ ಪದಕಗಳನ್ನು ಗೆದ್ದಿರುವ ಚೀನಾ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

Asian Games 2023: ಭಾರತಕ್ಕೆ ಕಂಚಿನ ಪದಕ ಗೆದ್ದು ಕೊಟ್ಟ ಇಯಾಬಾದ್ ಅಲಿ
Eabad Ali
TV9 Web
| Edited By: |

Updated on: Sep 26, 2023 | 3:12 PM

Share

ಚೀನಾದ ಹ್ಯಾಂಗ್​ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನ ಸೈಲಿಂಗ್​ನಲ್ಲಿ (ನೌಕಾಯಾನ ಸ್ಪರ್ಧೆ) ಭಾರತ ಎರಡು ಪದಕಗಳನ್ನು ಗೆದ್ದುಕೊಂಡಿದೆ. ಮಂಗಳವಾರ ನಡೆದ ಈ ಸ್ಪರ್ಧೆಯ ಬಾಲಕಿಯ ವಿಭಾಗದಲ್ಲಿ 17ರ ಹರೆಯದ ನೇಹಾ ಠಾಕೂರ್ ಬೆಳ್ಳಿ ಪದಕ ಗೆದ್ದರೆ, ಪುರುಷರ ವಿಭಾಗದಲ್ಲಿ ಇಯಾಬಾದ್ ಅಲಿ ಕಂಚಿನ ಪದಕಕ್ಕೆ ಕೊರೊಳೊಡ್ಡಿದರು.

ಪುರುಷರ ವಿಂಡ್‌ಸರ್ಫರ್ ಆರ್‌ಎಸ್: ಎಕ್ಸ್ ಈವೆಂಟ್‌ನಲ್ಲಿ ಇಯಾಬಾದ್ ಅಲಿ 52 ಅಂಕಗಳು ಮತ್ತು ನೆಟ್​ ಸ್ಕೋರ್‌ನೊಂದಿಗೆ ಮೂರನೇ ಸ್ಥಾನ ಪಡೆದರು. ಈ ಮೂಲಕ ಸೈಲಿಂಗ್​ನಲ್ಲಿ ಭಾರತಕ್ಕೆ ಕಂಚಿನ ಪದಕ ತಂದುಕೊಡುವಲ್ಲಿ ಯಶಸ್ವಿಯಾದರು. ಇನ್ನು ಸ್ಪರ್ಧೆಯಲ್ಲಿ ಕೊರಿಯಾದ ವೊನ್ವೂ ಚೋ ಚಿನ್ನದ ಪದಕ ಗೆದ್ದರೆ, ಥಾಯ್ಲೆಂಡ್‌ನ ನಟ್ಟಾಫೊಂಗ್ ಫೋನೊಫ್ಫರತ್ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು.

ಬಾಲಕಿಯರ ಡಿಂಗಿ ಐಎಲ್‌ಸಿಎ-4 ಸ್ಪರ್ಧೆಯಲ್ಲಿ 17 ವರ್ಷದ ನೇಹಾ ಎರಡನೇ ಸ್ಥಾನ ಪಡೆದು ಭಾರತಕ್ಕೆ ದಿನದ ಮೊದಲ ಪದಕವನ್ನು ತಂದುಕೊಟ್ಟರು. ಭೋಪಾಲ್‌ನ ನ್ಯಾಷನಲ್ ಸೈಲಿಂಗ್ ಸ್ಕೂಲ್‌ನ ಉದಯೋನ್ಮುಖ ನಾವಿಕೆಯಾಗಿ ಗುರುತಿಸಿಕೊಂಡಿರುವ ನೇಹಾ ಒಟ್ಟು 32 ಅಂಕಗಳೊಂದಿಗೆ ಗುರಿ ಮುಟ್ಟಿದ್ದರು. ಅಲ್ಲದೆ 27 ನೆಟ್​ ಸ್ಕೋರ್​ಗಳೊಂದಿಗೆ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಈ ಸ್ಪರ್ಧೆಯಲ್ಲಿ ಥಾಯ್ಲೆಂಡ್‌ನ ನೊಪಾಸ್ಸೋರ್ನ್ ಖುನ್‌ಬೂಂಜಾನ್‌ ಚಿನ್ನ ಪದಕ ತಮ್ಮದಾಗಿಸಕೊಂಡರೆ, ಸಿಂಗಾಪುರದ ಕೀರಾ ಮೇರಿ ಕಾರ್ಲೈಲ್ ಕಂಚಿಗೆ ತೃಪ್ತಿಪಟ್ಟರು.

ಪ್ರಸ್ತುತ ಪದಕ ಪಟ್ಟಿಯಲ್ಲಿ ಭಾರತ ತಂಡವು 6ನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಒಟ್ಟು 3 ಚಿನ್ನದ ಪದಕ, 4 ಬೆಳ್ಳಿ ಪದಕ ಮತ್ತು 7 ಕಂಚಿನ ಪದಕಗಳನ್ನು ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಏಷ್ಯನ್ ಗೇಮ್ಸ್​: ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಇನ್ನು 40 ಚಿನ್ನದ ಪದಕ, 21 ಬೆಳ್ಳಿ ಪದಕ ಮತ್ತು 9 ಕಂಚಿನ ಪದಕಗಳನ್ನು ಗೆದ್ದಿರುವ ಚೀನಾ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

Follow Us
Web contact
Web contact

TV9 Kannada

Read More
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!