AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asian Games 2023: ಭಾರತಕ್ಕೆ ಕಂಚಿನ ಪದಕ ಗೆದ್ದು ಕೊಟ್ಟ ಇಯಾಬಾದ್ ಅಲಿ

Asian Games 2023: ಪ್ರಸ್ತುತ ಪದಕ ಪಟ್ಟಿಯಲ್ಲಿ ಭಾರತ ತಂಡವು 6ನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಒಟ್ಟು 3 ಚಿನ್ನದ ಪದಕ, 4 ಬೆಳ್ಳಿ ಪದಕ ಮತ್ತು 7 ಕಂಚಿನ ಪದಕಗಳನ್ನು ತೆಗೆದುಕೊಂಡಿದ್ದಾರೆ. ಇನ್ನು 40 ಚಿನ್ನದ ಪದಕ, 21 ಬೆಳ್ಳಿ ಪದಕ ಮತ್ತು 9 ಕಂಚಿನ ಪದಕಗಳನ್ನು ಗೆದ್ದಿರುವ ಚೀನಾ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

Asian Games 2023: ಭಾರತಕ್ಕೆ ಕಂಚಿನ ಪದಕ ಗೆದ್ದು ಕೊಟ್ಟ ಇಯಾಬಾದ್ ಅಲಿ
Eabad Ali
TV9 Web
| Edited By: |

Updated on: Sep 26, 2023 | 3:12 PM

Share

ಚೀನಾದ ಹ್ಯಾಂಗ್​ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನ ಸೈಲಿಂಗ್​ನಲ್ಲಿ (ನೌಕಾಯಾನ ಸ್ಪರ್ಧೆ) ಭಾರತ ಎರಡು ಪದಕಗಳನ್ನು ಗೆದ್ದುಕೊಂಡಿದೆ. ಮಂಗಳವಾರ ನಡೆದ ಈ ಸ್ಪರ್ಧೆಯ ಬಾಲಕಿಯ ವಿಭಾಗದಲ್ಲಿ 17ರ ಹರೆಯದ ನೇಹಾ ಠಾಕೂರ್ ಬೆಳ್ಳಿ ಪದಕ ಗೆದ್ದರೆ, ಪುರುಷರ ವಿಭಾಗದಲ್ಲಿ ಇಯಾಬಾದ್ ಅಲಿ ಕಂಚಿನ ಪದಕಕ್ಕೆ ಕೊರೊಳೊಡ್ಡಿದರು.

ಪುರುಷರ ವಿಂಡ್‌ಸರ್ಫರ್ ಆರ್‌ಎಸ್: ಎಕ್ಸ್ ಈವೆಂಟ್‌ನಲ್ಲಿ ಇಯಾಬಾದ್ ಅಲಿ 52 ಅಂಕಗಳು ಮತ್ತು ನೆಟ್​ ಸ್ಕೋರ್‌ನೊಂದಿಗೆ ಮೂರನೇ ಸ್ಥಾನ ಪಡೆದರು. ಈ ಮೂಲಕ ಸೈಲಿಂಗ್​ನಲ್ಲಿ ಭಾರತಕ್ಕೆ ಕಂಚಿನ ಪದಕ ತಂದುಕೊಡುವಲ್ಲಿ ಯಶಸ್ವಿಯಾದರು. ಇನ್ನು ಸ್ಪರ್ಧೆಯಲ್ಲಿ ಕೊರಿಯಾದ ವೊನ್ವೂ ಚೋ ಚಿನ್ನದ ಪದಕ ಗೆದ್ದರೆ, ಥಾಯ್ಲೆಂಡ್‌ನ ನಟ್ಟಾಫೊಂಗ್ ಫೋನೊಫ್ಫರತ್ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು.

ಬಾಲಕಿಯರ ಡಿಂಗಿ ಐಎಲ್‌ಸಿಎ-4 ಸ್ಪರ್ಧೆಯಲ್ಲಿ 17 ವರ್ಷದ ನೇಹಾ ಎರಡನೇ ಸ್ಥಾನ ಪಡೆದು ಭಾರತಕ್ಕೆ ದಿನದ ಮೊದಲ ಪದಕವನ್ನು ತಂದುಕೊಟ್ಟರು. ಭೋಪಾಲ್‌ನ ನ್ಯಾಷನಲ್ ಸೈಲಿಂಗ್ ಸ್ಕೂಲ್‌ನ ಉದಯೋನ್ಮುಖ ನಾವಿಕೆಯಾಗಿ ಗುರುತಿಸಿಕೊಂಡಿರುವ ನೇಹಾ ಒಟ್ಟು 32 ಅಂಕಗಳೊಂದಿಗೆ ಗುರಿ ಮುಟ್ಟಿದ್ದರು. ಅಲ್ಲದೆ 27 ನೆಟ್​ ಸ್ಕೋರ್​ಗಳೊಂದಿಗೆ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಈ ಸ್ಪರ್ಧೆಯಲ್ಲಿ ಥಾಯ್ಲೆಂಡ್‌ನ ನೊಪಾಸ್ಸೋರ್ನ್ ಖುನ್‌ಬೂಂಜಾನ್‌ ಚಿನ್ನ ಪದಕ ತಮ್ಮದಾಗಿಸಕೊಂಡರೆ, ಸಿಂಗಾಪುರದ ಕೀರಾ ಮೇರಿ ಕಾರ್ಲೈಲ್ ಕಂಚಿಗೆ ತೃಪ್ತಿಪಟ್ಟರು.

ಪ್ರಸ್ತುತ ಪದಕ ಪಟ್ಟಿಯಲ್ಲಿ ಭಾರತ ತಂಡವು 6ನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಒಟ್ಟು 3 ಚಿನ್ನದ ಪದಕ, 4 ಬೆಳ್ಳಿ ಪದಕ ಮತ್ತು 7 ಕಂಚಿನ ಪದಕಗಳನ್ನು ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಏಷ್ಯನ್ ಗೇಮ್ಸ್​: ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಇನ್ನು 40 ಚಿನ್ನದ ಪದಕ, 21 ಬೆಳ್ಳಿ ಪದಕ ಮತ್ತು 9 ಕಂಚಿನ ಪದಕಗಳನ್ನು ಗೆದ್ದಿರುವ ಚೀನಾ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್