AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australian Open 2021: 9ನೇ ಬಾರಿಗೆ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಗೆದ್ದ ನೊವಾಕ್ ಜೊಕೊವಿಕ್

Australian Open 2021: ವಿಶ್ವದ ನಂಬರ್ ಒನ್ ಟೆನ್ನಿಸ್​ ಆಟಗಾರ ನೊವಾಕ್ ಜೊಕೊವಿಕ್ ರಷ್ಯಾದ ಡೇನಿಲ್ ಮೆಡ್ವೆಡೆವ್ ಅವರನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದರು.

Australian Open 2021: 9ನೇ ಬಾರಿಗೆ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಗೆದ್ದ ನೊವಾಕ್ ಜೊಕೊವಿಕ್
ನೊವಾಕ್ ಜೊಕೊವಿಕ್
ಪೃಥ್ವಿಶಂಕರ
| Edited By: |

Updated on: Feb 21, 2021 | 4:56 PM

Share

ವರ್ಷದ ಮೊದಲ ಗ್ರ್ಯಾಂಡ್‌ಸ್ಲಾಮ್‌ನ ಫೈನಲ್‌ನಲ್ಲಿ ಭಾನುವಾರ ವಿಶ್ವದ ನಂಬರ್ ಒನ್ ಟೆನ್ನಿಸ್​ ಆಟಗಾರ ನೊವಾಕ್ ಜೊಕೊವಿಕ್ ರಷ್ಯಾದ ಡೇನಿಲ್ ಮೆಡ್ವೆಡೆವ್ ಅವರನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದರು. ಅವರು 7-5, 6-2, 6-2ರಿಂದ ಮೆಡ್ವೆಡೆವ್ ಅವರನ್ನು ಸೋಲಿಸಿದರು. ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಒಂಬತ್ತನೇ ಬಾರಿಗೆ ಗೆಲ್ಲುವುದರೊಂದಿಗೆ, ಜೊಕೊವಿಕ್‌ ಅವರ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಯ ಸಂಖ್ಯೆ 18 ಕ್ಕೆ ತಲುಪಿದೆ.

ಫೈನಲ್‌ನಲ್ಲಿ ಎರಡನೇ ಬಾರಿ ಮೆಡ್ವೆಡೆವ್ ಸೋಲು ಸೆರ್ಬಿಯಾದ ಜೊಕೊವಿಕ್ ಅವರು ಇಲ್ಲಿಯವರೆಗೆ ಆಸ್ಟ್ರೇಲಿಯನ್ ಓಪನ್ ಫೈನಲ್ ತಲುಪಿದಾಗಲೆಲ್ಲಾ ಗೆದ್ದಿದ್ದಾರೆ. ಅದೇ ಸಮಯದಲ್ಲಿ, ಮೆಡ್ವೆಡೆವ್ ಎರಡು ಬಾರಿ ಗ್ರ್ಯಾಂಡ್ ಸ್ಲ್ಯಾಮ್​ ಫೈನಲ್ ತಲುಪಿದ್ದಾರೆ. ಆದರೆ ಅವರು ಪ್ರತಿ ಬಾರಿಯೂ ಸೋಲು ಎದುರಿಸಿದ್ದಾರೆ. ಇದಕ್ಕೂ ಮೊದಲು, 2019ರಲ್ಲಿ ನಡೆದ ಯುಎಸ್ ಓಪನ್‌ನ ಫೈನಲ್‌ನಲ್ಲಿ ಅವರು ನಾಲ್ಕು ಗಂಟೆ 51 ನಿಮಿಷಗಳ ಹೋರಾಟದಲ್ಲಿ ರಫೆಲ್ ನಡಾಲ್ ವಿರುದ್ಧ ಸೋಲು ಅನುಭವಿಸಬೇಕಾಯಿತು.

ಸೆಮಿಫೈನಲ್‌ನಲ್ಲಿ ಕ್ವಾಲಿಫೈಯರ್‌ಗಳನ್ನು ಸುಲಭವಾಗಿ ಸೋಲಿಸುವ ಮೂಲಕ ಜೊಕೊವಿಕ್ ಫೈನಲ್‌ಗೆ ಪ್ರವೇಶಿಸಿದರು. ವಿಶ್ವದ 114ನೇ ಶ್ರೇಯಾಂಕದ ಅಸ್ಲಾನ್ ಕರಟ್ಸೆವ್ 6-3, 6-4, 6-4. ವಿಶ್ವ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನದಲ್ಲಿರುವ ರಷ್ಯಾದ ಡೆನಿಲ್ ಮೆಡ್ವೆಡೆವ್ ಸೆಮಿಫೈನಲ್‌ನಲ್ಲಿ ಗ್ರೀಸ್‌ನ ಸ್ಟೆಫಾನೋಸ್ ಸಿತಿಪಾಸ್ ಅವರನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಿದರು. ಎರಡು ಗಂಟೆ ಒಂಬತ್ತು ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಮೆಡ್ವೆಡೆವ್ ಸತತ ಸೆಟ್‌ಗಳಲ್ಲಿ ಐದನೇ ಶ್ರೇಯಾಂಕದ ಸಿಸಿಪಾಸ್ ಅವರನ್ನು 6-4, 6-2, 7-5 ಸೆಟ್‌ಗಳಿಂದ ಸೋಲಿಸಿದರು.

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ