AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಪರ ಆಡುತ್ತಿದ್ದ ಮಾಜಿ ಕ್ರಿಕೆಟಿಗ ಬಿ.ವಿಜಯ್​ಕೃಷ್ಣ ನಿಧನ; ವಿಕ್ರಂ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರು

ಅಕ್ಟೋಬರ್​ 12, 1949ರಲ್ಲಿ ಜನಿಸಿದ ಬಿ. ವಿಜಯ್​ಕೃಷ್ಣ ಅವರ ಪೂರ್ಣ ಹೆಸರು ಭರಮಯ್ಯ ವಿಜಯ್​ಕೃಷ್ಣ. ಆದರೆ, ಅವರ ವಿಜಿ ಎಂಬ ಅಡ್ಡಹೆಸರು ಹೆಚ್ಚು ಚಾಲ್ತಿಯಲ್ಲಿತ್ತು.

ಕರ್ನಾಟಕದ ಪರ ಆಡುತ್ತಿದ್ದ ಮಾಜಿ ಕ್ರಿಕೆಟಿಗ ಬಿ.ವಿಜಯ್​ಕೃಷ್ಣ ನಿಧನ; ವಿಕ್ರಂ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರು
ಮಾಜಿ ಕ್ರಿಕೆಟಿಗ ಬಿ.ವಿಜಯ್​ಕೃಷ್ಣ
TV9 Web
| Edited By: |

Updated on:Jun 17, 2021 | 9:59 AM

Share

ಬೆಂಗಳೂರು: ಮಾಜಿ ಕ್ರಿಕೆಟಿಗ, ಕರ್ನಾಟಕ ತಂಡದ ಪರ ಆಡುತ್ತಿದ್ದ ಎಡಗೈ ಬ್ಯಾಟ್ಸ್​ಮನ್​ ಬಿ ವಿಜಯಕೃಷ್ಣ ಇಂದು (ಜೂನ್ 17) ಮುಂಜಾನೆ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯ್​ಕೃಷ್ಣ ಬಹು ಅಂಗಾಂಗ ವೈಫಲ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರು. ಇಂದು ಮುಂಜಾನೆ ವೇಳೆಗೆ ತೀವ್ರ ಹೃದಯಾಘಾತ ಸಂಭವಿಸಿ ಸುಮಾರು 5.50ರ ಹೊತ್ತಿದೆ ಕಣ್ಮುಚ್ಚಿದ್ದಾರೆ.

ಲೆಫ್ಟ್​ ಆರ್ಮ್​ ಸ್ಪಿನ್ನರ್ ಹಾಗೂ ಲೆಫ್ಟ್​ ಹ್ಯಾಂಡ್ ಬ್ಯಾಟ್ಸ್​ಮನ್​ ಆಗಿ ಸುಮಾರು 15 ವರ್ಷಗಳ ಆಡಿದ ಅವರು 80 ಪ್ರಮುಖ ಪಂದ್ಯಗಳಿಂದ ಒಟ್ಟು 2000ಕ್ಕೂ ಹೆಚ್ಚು ರನ್​ ಗಳಿಸಿ, 194 ವಿಕೆಟ್ ಪಡೆದಿದ್ದಾರೆ.

ಕರ್ನಾಟಕದ ಪರ ಆಡುತ್ತಿದ್ದ ಕೆ.ನಾಗಭೂಷಣ್ ಅವರ ಪ್ರೋತ್ಸಾಹದಿಂದ ಮೈದಾನಕ್ಕಿಳಿದ ವಿಜಯ್​ಕೃಷ್ಣ ಅತ್ಯುತ್ತಮ ಆಲ್​ರೌಂಡರ್ ಆಗಿ ಪ್ರದರ್ಶನ ನೀಡಿದರು. ನಾಗಭೂಷಣ್ ಅವರ ಸಹಕಾರದೊಂದಿಗೆ ಕಾರ್​ ಶೆಡ್​ನಲ್ಲಿ ಟೆನ್ನಿಸ್​ ಬಾಲ್​ ಮೂಲಕ ಬೌಲಿಂಗ್ ಅಭ್ಯಾಸ ಮಾಡಿಕೊಂಡ ಅವರು 1968-69ನೇ ಸಾಲಿನಲ್ಲಿ ಆಡಿದ ಮೊದಲ ರಣಜಿ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಮೂರು ವಿಕೆಟ್ ಪಡೆದಿದ್ದರು. ಅಲ್ಲದೇ ಅದರ ನಂತರ ಮದ್ರಾಸ್ ವಿರುದ್ಧದ ಪಂದ್ಯದಲ್ಲಿ ಆರು ವಿಕೆಟ್ ಪಡೆದು ಸೈ ಎನ್ನಿಸಿಕೊಂಡಿದ್ದರು.

ಇದನ್ನೂ ಓದಿ: ಕೋಲಾರದ ಲಕ್ಷ್ಮೀ ಖಾಸಗಿ ಆಸ್ಪತ್ರೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕ್ರಿಕೆಟಿಗ ಇರ್ಫಾನ್ ಪಠಾನ್ 

17 ಎಸೆತಗಳಲ್ಲಿ 90 ರನ್! ಈ ಆಂಗ್ಲ ಕ್ರಿಕೆಟಿಗನ ಸಿಕ್ಸರ್​ ಸುನಾಮಿಗೆ ಎದುರಾಳಿ ತಂಡ ಕೊಚ್ಚಿ ಹೋಗಿತ್ತು

Published On - 9:59 am, Thu, 17 June 21

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್