AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಪರ ಆಡುತ್ತಿದ್ದ ಮಾಜಿ ಕ್ರಿಕೆಟಿಗ ಬಿ.ವಿಜಯ್​ಕೃಷ್ಣ ನಿಧನ; ವಿಕ್ರಂ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರು

ಅಕ್ಟೋಬರ್​ 12, 1949ರಲ್ಲಿ ಜನಿಸಿದ ಬಿ. ವಿಜಯ್​ಕೃಷ್ಣ ಅವರ ಪೂರ್ಣ ಹೆಸರು ಭರಮಯ್ಯ ವಿಜಯ್​ಕೃಷ್ಣ. ಆದರೆ, ಅವರ ವಿಜಿ ಎಂಬ ಅಡ್ಡಹೆಸರು ಹೆಚ್ಚು ಚಾಲ್ತಿಯಲ್ಲಿತ್ತು.

ಕರ್ನಾಟಕದ ಪರ ಆಡುತ್ತಿದ್ದ ಮಾಜಿ ಕ್ರಿಕೆಟಿಗ ಬಿ.ವಿಜಯ್​ಕೃಷ್ಣ ನಿಧನ; ವಿಕ್ರಂ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರು
ಮಾಜಿ ಕ್ರಿಕೆಟಿಗ ಬಿ.ವಿಜಯ್​ಕೃಷ್ಣ
TV9 Web
| Edited By: |

Updated on:Jun 17, 2021 | 9:59 AM

Share

ಬೆಂಗಳೂರು: ಮಾಜಿ ಕ್ರಿಕೆಟಿಗ, ಕರ್ನಾಟಕ ತಂಡದ ಪರ ಆಡುತ್ತಿದ್ದ ಎಡಗೈ ಬ್ಯಾಟ್ಸ್​ಮನ್​ ಬಿ ವಿಜಯಕೃಷ್ಣ ಇಂದು (ಜೂನ್ 17) ಮುಂಜಾನೆ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯ್​ಕೃಷ್ಣ ಬಹು ಅಂಗಾಂಗ ವೈಫಲ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರು. ಇಂದು ಮುಂಜಾನೆ ವೇಳೆಗೆ ತೀವ್ರ ಹೃದಯಾಘಾತ ಸಂಭವಿಸಿ ಸುಮಾರು 5.50ರ ಹೊತ್ತಿದೆ ಕಣ್ಮುಚ್ಚಿದ್ದಾರೆ.

ಲೆಫ್ಟ್​ ಆರ್ಮ್​ ಸ್ಪಿನ್ನರ್ ಹಾಗೂ ಲೆಫ್ಟ್​ ಹ್ಯಾಂಡ್ ಬ್ಯಾಟ್ಸ್​ಮನ್​ ಆಗಿ ಸುಮಾರು 15 ವರ್ಷಗಳ ಆಡಿದ ಅವರು 80 ಪ್ರಮುಖ ಪಂದ್ಯಗಳಿಂದ ಒಟ್ಟು 2000ಕ್ಕೂ ಹೆಚ್ಚು ರನ್​ ಗಳಿಸಿ, 194 ವಿಕೆಟ್ ಪಡೆದಿದ್ದಾರೆ.

ಕರ್ನಾಟಕದ ಪರ ಆಡುತ್ತಿದ್ದ ಕೆ.ನಾಗಭೂಷಣ್ ಅವರ ಪ್ರೋತ್ಸಾಹದಿಂದ ಮೈದಾನಕ್ಕಿಳಿದ ವಿಜಯ್​ಕೃಷ್ಣ ಅತ್ಯುತ್ತಮ ಆಲ್​ರೌಂಡರ್ ಆಗಿ ಪ್ರದರ್ಶನ ನೀಡಿದರು. ನಾಗಭೂಷಣ್ ಅವರ ಸಹಕಾರದೊಂದಿಗೆ ಕಾರ್​ ಶೆಡ್​ನಲ್ಲಿ ಟೆನ್ನಿಸ್​ ಬಾಲ್​ ಮೂಲಕ ಬೌಲಿಂಗ್ ಅಭ್ಯಾಸ ಮಾಡಿಕೊಂಡ ಅವರು 1968-69ನೇ ಸಾಲಿನಲ್ಲಿ ಆಡಿದ ಮೊದಲ ರಣಜಿ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಮೂರು ವಿಕೆಟ್ ಪಡೆದಿದ್ದರು. ಅಲ್ಲದೇ ಅದರ ನಂತರ ಮದ್ರಾಸ್ ವಿರುದ್ಧದ ಪಂದ್ಯದಲ್ಲಿ ಆರು ವಿಕೆಟ್ ಪಡೆದು ಸೈ ಎನ್ನಿಸಿಕೊಂಡಿದ್ದರು.

ಇದನ್ನೂ ಓದಿ: ಕೋಲಾರದ ಲಕ್ಷ್ಮೀ ಖಾಸಗಿ ಆಸ್ಪತ್ರೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕ್ರಿಕೆಟಿಗ ಇರ್ಫಾನ್ ಪಠಾನ್ 

17 ಎಸೆತಗಳಲ್ಲಿ 90 ರನ್! ಈ ಆಂಗ್ಲ ಕ್ರಿಕೆಟಿಗನ ಸಿಕ್ಸರ್​ ಸುನಾಮಿಗೆ ಎದುರಾಳಿ ತಂಡ ಕೊಚ್ಚಿ ಹೋಗಿತ್ತು

Published On - 9:59 am, Thu, 17 June 21

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ