AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್​ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿಗೆ ಹೆಣ್ಣು ಮಗು

2020ರಲ್ಲಿ ಅನುಷ್ಕಾ ಶರ್ಮಾ ಗರ್ಭ ಧರಿಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಅಷ್ಟೇ ಅಲ್ಲ ಜನವರಿ ತಿಂಗಳಲ್ಲಿ ಮನೆಗೆ ಹೊಸ ಸದಸ್ಯನ ಆಗಮನವಾಗಲಿದೆ ಎಂದು ಇವರು ಅಧಿಕೃತಗೊಳಿಸಿದ್ದರು.

ವಿರಾಟ್​ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿಗೆ ಹೆಣ್ಣು ಮಗು
ಕೊಹ್ಲಿ ಮತ್ತು ಅನುಷ್ಕಾ ಶರ್ಮಾ
ರಾಜೇಶ್ ದುಗ್ಗುಮನೆ
|

Updated on:Jan 11, 2021 | 5:23 PM

Share

ಕ್ರಿಕೆಟಿಗ ವಿರಾಟ್​ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ಕುಟುಂಬಕ್ಕೆ ಹೊಸ ಸದಸ್ಯೆಯ ಆಗಮನವಾಗಿದೆ. ಅರ್ಥಾತ್​, ಅನುಷ್ಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರ ವೈರಲ್​ ಆಗುತ್ತಿದ್ದಂತೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ವಿರುಷ್ಕಾಗೆ ಶುಭಾಶಯ ಕೋರಿದ್ದಾರೆ.

2020ರಲ್ಲಿ ಅನುಷ್ಕಾ ಶರ್ಮಾ ಗರ್ಭ ಧರಿಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಅಷ್ಟೇ ಅಲ್ಲ ಜನವರಿ ತಿಂಗಳಲ್ಲಿ ಮನೆಗೆ ಹೊಸ ಸದಸ್ಯನ ಆಗಮನವಾಗಲಿದೆ ಎಂದು ಅವರು ಅಧಿಕೃತಗೊಳಿಸಿದ್ದರು.

ಆ ವಿಶೇಷ ಕ್ಷಣ ಮಿಸ್​ ಮಾಡಿಕೊಳ್ಳದ ಕೊಹ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಟೂರ್​ ಆಡಲು ಕಾಂಗರೂಗಳ ನಾಡಿಗೆ ತೆರಳಿದೆ. ವಿರಾಟ್​ ಟಿ20 ಹಾಗೂ ಏಕದಿನ  ಹಾಗೂ ಒಂದು ಟೆಸ್ಟ್​ ಪಂದ್ಯ ಮುಗಿಸಿ ವಿರಾಟ್​ ಕೊಹ್ಲಿ ಭಾರತಕ್ಕೆ ಮರಳಿದ್ದರು. ಎಷ್ಟೇ ಕೋಟಿ ಕೊಟ್ಟರೂ ನಾನು ವಿಶೇಷ ಕ್ಷಣವನ್ನು ಮಿಸ್​ ಮಾಡಿಕೊಳ್ಳುವುದಿಲ್ಲ ಎಂದು ಕೊಹ್ಲಿ ಹೇಳಿದ್ದರು. ಅದೇ ರೀತಿ, ವಿರಾಟ್​ ಭಾರತಕ್ಕೆ ವಾಪಾಸಾಗಿ, ಅನುಷ್ಕಾ ಜೊತೆ ಸಮಯ ಕಳೆದಿದ್ದಾರೆ. ಹೆಣ್ಣು ಮಗು ಆಗಿರುವ ಬಗ್ಗೆ ಅವರು ಇನ್​ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇಂದು ಮಧ್ಯಾಹ್ನ ಅನುಷ್ಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯಲ್ಲಿ ಹಾಜರಿದ್ದ ವಿರಾಟ್ ಕೊಹ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

30 ನಿಮಿಷಕ್ಕೆ 12 ಲಕ್ಷ ಲೈಕ್ಸ್​:

ಅನುಷ್ಕಾ ಮಗಳು ದಾಖಲೆ ಬರೆದಿದ್ದಾಳೆ. ಅನುಷ್ಕಾ ಮಗಳ  ಕುರಿತು ವಿರಾಟ್​ ಕೊಹ್ಲಿ ಇನ್​ಸ್ಟಾಗ್ರಾಂನಲ್ಲಿ ಹಾಕಿರುವ ಫೋಟೋ 30 ನಿಮಿಷಕ್ಕೆ ಬರೋಬ್ಬರಿ 12 ಲಕ್ಷ ಲೈಕ್ಸ್​ ಪಡೆದುಕೊಂಡಿದೆ. ಅಲ್ಲದೆ ಸಾವಿರಾರು ಮಂದಿ ಕಮೆಂಟ್​ ಮಾಡಿ ವಿರುಷ್ಕಾ ದಂಪತಿಗೆ ಶುಭಾಶಯ ಕೋರಿದ್ದಾರೆ.

View this post on Instagram

A post shared by Virat Kohli (@virat.kohli)

India vs Australia Test Cricket 2020 | ರಹಾನೆ ಮೇಲೆ ದೊಡ್ಡ ಜವಾಬ್ದಾರಿ ಹೊರೆಸಿ ಸ್ವದೇಶಕ್ಕೆ ವಾಪಸ್ಸು ಹೊರಟ ಕೊಹ್ಲಿ

Twitter India ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಅಮ್ಮ ಆಗುತ್ತಿದ್ದಾರೆ: 2020ರ ಅತಿಹೆಚ್ಚು ಲೈಕ್ ಪಡೆದ ಟ್ವೀಟ್

Published On - 4:20 pm, Mon, 11 January 21

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​