AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿಯಮಾವಳಿ ಅನುಸರಿಸದಿದ್ದರೆ ಕ್ರಿಕೆಟ್ ಆಡಲು ಬರಬೇಡಿ: ಬೇಟ್ಸ್ ಹೇಳಿಕೆಗೆ BCCI ಅಸಮಧಾನ

ಭಾರತೀಯ ಕ್ರಿಕೆಟ್ ತಂಡಕ್ಕೆ ಕೊವಿಡ್ ನಿಯಮಾವಳಿಗಳನ್ನು ಅನುಸರಿಸುವ ಆಸಕ್ತಿ ಇಲ್ಲ ಎಂಬಂತೆ ಆಸ್ಟ್ರೇಲಿಯಾ ರಾಜಕಾರಣಿಗಳು ಮಾತನಾಡಿದ್ದಾರೆ.

ಕೊವಿಡ್ ನಿಯಮಾವಳಿ ಅನುಸರಿಸದಿದ್ದರೆ ಕ್ರಿಕೆಟ್ ಆಡಲು ಬರಬೇಡಿ: ಬೇಟ್ಸ್ ಹೇಳಿಕೆಗೆ BCCI ಅಸಮಧಾನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 11:01 PM

Share

ದೆಹಲಿ: ಕೊವಿಡ್-19ರ ನಡುವೆ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಸರಣಿಯ ವೇಳೆ, ಭಾರತೀಯ ಕ್ರಿಕೆಟ್ ತಂಡ ಕೊವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸಿಲ್ಲ ಎಂದು ಆಸ್ಟ್ರೇಲಿಯಾ ಕ್ವೀನ್ಸ್​ಲ್ಯಾಂಡ್ ರಾಜಕಾರಣಿ ರಾಸ್ ಬೇಟ್ಸ್ BCCI ವಿರುದ್ಧ ಹೇಳಿಕೆ ನೀಡಿದ್ದಾರೆ. ರಾಸ್ ಬೇಟ್ಸ್ ಹೇಳಿಕೆ ಬಗ್ಗೆ BCCI ಅಸಮಾಧಾನ ವ್ಯಕ್ತಪಡಿಸಿದೆ.

ಭಾರತೀಯ ಕ್ರಿಕೆಟ್ ತಂಡದ ವಿರುದ್ಧದ ಸಾಲು ಸಾಲು ಹೇಳಿಕೆಗಳಿಗೆ ಬೇಸರ ವ್ಯಕ್ತಪಡಿಸಿರುವ BCCI, ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯನ್ನು ಮೂರು ಪಂದ್ಯದಲ್ಲಿ ಅಂತ್ಯಗೊಳಿಸುವ ಬಗ್ಗೆ ಯೋಚನೆ ಮಾಡಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಸಿಡ್ನಿ ಮೈದಾನದಲ್ಲಿ ನಡೆಯುವ ಮೂರನೇ ಪಂದ್ಯಕ್ಕೆ ಸರಣಿಯನ್ನು ಮುಕ್ತಾಯಗೊಳಿಸುವ ಆಲೋಚನೆಯಲ್ಲಿ BCCI ಇದೆ ಎಂದು ತಿಳಿದುಬಂದಿದೆ.

ಭಾರತೀಯ ಕ್ರಿಕೆಟ್ ಸಂಸ್ಥೆಯು ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆಯೊಂದಿಗೆ ಒಗ್ಗಟ್ಟಾಗಿ ವರ್ತಿಸಿದೆ. ಭಾರತದ ಆಸಿಸ್ ಪ್ರವಾಸವು ಸೂಕ್ತ ರೀತಿಯಲ್ಲಿ ನಡೆಯುವಲ್ಲಿ ಶ್ರಮಿಸುತ್ತಿದೆ. ಈ ನಡುವೆ, ರಾಸ್ ಬೇಟ್ಸ್ ಈ ರೀತಿ ಹೇಳಿಕೆ ನೀಡಬಾರದಿತ್ತು ಎಂದು ಭಾರತೀಯ ಕ್ರಿಕೆಟ್ ಸಂಸ್ಥೆಯ ಮೂಲಗಳು ಪ್ರತಿಕ್ರಿಯೆ ನೀಡಿವೆ.

ಭಾರತೀಯ ಕ್ರಿಕೆಟ್ ತಂಡಕ್ಕೆ ಕೊವಿಡ್ ನಿಯಮಾವಳಿಗಳನ್ನು ಅನುಸರಿಸುವ ಆಸಕ್ತಿ ಇಲ್ಲ ಎಂಬಂತೆ ಆಸ್ಟ್ರೇಲಿಯಾ ರಾಜಕಾರಣಿಗಳು ಮಾತನಾಡಿದ್ದಾರೆ. ಭಾರತೀಯ ತಂಡವು ಆಸಿಸ್​ನಲ್ಲಿ ಕ್ರಿಕೆಟ್ ಆಡುವುದು ಅವರಿಗೆ ಇಷ್ಟವಿಲ್ಲ ಎಂಬುದು ನೋವಿನ ಸಂಗತಿ ಎಂದು ಹೇಳಿದ್ದಾರೆ.

ರಾಜಕಾರಣಿಗಳ ಹೇಳಿಕೆಗಳು ಭಾರತೀಯ ಕ್ರಿಕೆಟ್ ಆಟಗಾರರನ್ನು ಕೀಳುಮಟ್ಟದಲ್ಲಿ ನೋಡಿದೆ. ಆದರೆ, ಭಾರತೀಯ ಕ್ರಿಕೆಟ್ ಸಂಸ್ಥೆಗೆ ನಿಯಮಾವಳಿಗಳನ್ನು ಪಾಲಿಸುವುದೇ ಮುಖ್ಯವಾಗಿದೆ. ಅದೇ ಕಾರಣಕ್ಕೆ ರೋಹಿತ್ ಶರ್ಮಾಗೆ 14 ದಿನಗಳ ಕಡ್ಡಾಯ ಕ್ವಾರಂಟೈನ್ ನೀಡಲಾಗಿದೆ ಎಂದು BCCI ಹೇಳಿದೆ.

ಕೊವಿಡ್ ನಿಯಮಾವಳಿಗಳನ್ನು ಅನುಸರಿಸುವುದಿಲ್ಲವಾದರೆ, ಭಾರತ ತಂಡ ಕ್ರಿಕೆಟ್ ಆಡಲು ಬರುವುದು ಬೇಡ ಎಂದು ರಾಸ್ ಬೇಟ್ಸ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು. ಇದೇ ಹೇಳಿಕೆಯನ್ನು ಕ್ವೀನ್ಸ್​ಲ್ಯಾಂಡ್ ಶಾಡೋ ಕ್ರೀಡಾ ಸಚಿವ ಟಿಮ್ ಮ್ಯಾಂಡರ್ ಕೂಡ ಪುನರುಚ್ಚರಿಸಿದ್ದರು. ಆದ್ದರಿಂದ, ಭಾರತೀಯ ಕ್ರಿಕೆಟ್ ಸಂಸ್ಥೆ ನಾಲ್ಕನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದ ಬಗ್ಗೆ ಯೋಚಿಸುವಂತಾಗಿದೆ. ಮೂರನೇ ಟೆಸ್ಟ್ ಪಂದ್ಯವು ಜನವರಿ 7ರಿಂದ, ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

India vs Australia Test Series | ಟೀಮ್ ಇಂಡಿಯಾದ ಸದಸ್ಯರ ವಿರುದ್ಧ ಸಲ್ಲದ ಆರೋಪ ಮಾಡಲಾರಂಭಿಸಿದ ಆಸ್ಸೀ ಮಿಡಿಯಾ

Published On - 5:23 pm, Mon, 4 January 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್