AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಭಾರತದ ಸ್ಪರ್ಧಿಗಳಿಗಾಗಿ ಮೋದಿ ಅಭಿಯಾನ; ಒಲಂಪಿಕ್ಸ್ ಕ್ರೀಡಾಪಟುಗಳಿಗೆ ಶುಭ ಹಾರೈಸಿದ ಟೀಮ್ ಇಂಡಿಯಾ ಕ್ರಿಕೆಟಿಗರು

Tokyo Olympics: ಟ್ವಿಟರ್ ಹ್ಯಾಂಡಲ್‌ನಲ್ಲಿ ಶನಿವಾರ ಹಂಚಿಕೊಂಡಿರುವ ವಿಡಿಯೋದಲ್ಲಿ, ಮಿಥಾಲಿ, ರೋಹಿತ್, ವಿರಾಟ್ ಕೊಹ್ಲಿ, ಜೆಮಿಮಾ ರೊಡ್ರಿಗಸ್, ಅಜಿಂಕ್ಯ ರಹಾನೆ, ಹಾರ್ಲೀನ್ ಡಿಯೋಲ್ ಅವರಂತಹ ಆಟಗಾರರು ಭಾರತಕ್ಕೆ ಮೆರಗು ನೀಡಿ ಎಂದು ಹೇಳಿಕೊಂಡಿದ್ದಾರೆ.

Tokyo Olympics: ಭಾರತದ ಸ್ಪರ್ಧಿಗಳಿಗಾಗಿ ಮೋದಿ ಅಭಿಯಾನ; ಒಲಂಪಿಕ್ಸ್ ಕ್ರೀಡಾಪಟುಗಳಿಗೆ ಶುಭ ಹಾರೈಸಿದ ಟೀಮ್ ಇಂಡಿಯಾ ಕ್ರಿಕೆಟಿಗರು
ಮಿಥಾಲಿ ರಾಜ್, ನರೇಂದ್ರ ಮೋದಿ, ರೋಹಿತ್ ಶರ್ಮಾ
TV9 Web
| Edited By: |

Updated on: Jul 11, 2021 | 7:28 PM

Share

ಭಾರತೀಯ ಕ್ರೀಡಾಪಟುಗಳು ಕೆಲವೇ ದಿನಗಳಲ್ಲಿ ಟೋಕಿಯೊ ಒಲಿಂಪಿಕ್ಸ್‌ಗೆ ತೆರಳಲಿದ್ದಾರೆ. ಹೀಗಾಗಿ ಇಡೀ ದೇಶವೇ ಭಾರತದ ಆಟಗಾರರನ್ನು ಹುರಿದುಂಬಿಸುತ್ತಿದೆ. ಪಿಎಂ ನರೇಂದ್ರ ಮೋದಿ ಅವರು ಆಟಗಾರರ ಉತ್ಸಾಹವನ್ನು ಹೆಚ್ಚಿಸಲು ಚೀಯರ್ 4 ಇಂಡಿಯಾ ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಭಾರತೀಯ ಕ್ರಿಕೆಟಿಗರೂ ಈ ಅಭಿಯಾನಕ್ಕೆ ಕೈಜೋಡಿಸಿದ್ದು ಆಟಗಾರರಿಗೆ ಹಾರೈಸಿದರು. ಭಾರತದ 100 ಕ್ಕೂ ಹೆಚ್ಚು ಕ್ರೀಡಾಪಟುಗಳು ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ. ಕಳೆದ ವರ್ಷ ಪಂದ್ಯಗಳನ್ನು ನಡೆಸಲು ನಿರ್ಧರಿಸಲಾಗಿತ್ತು ಆದರೆ ಕೊರೊನಾದ ಕಾರಣ ಅದನ್ನು ಒಂದು ವರ್ಷಕ್ಕೆ ಮುಂದೂಡಲಾಯಿತು.

ಈಗ ಈ ಆಟ ಜುಲೈ 23 ರಿಂದ ಪ್ರಾರಂಭವಾಗಲಿದೆ. ಉದ್ಘಾಟನಾ ಸಮಾರಂಭದಲ್ಲಿ ಹಾಕಿ ನಾಯಕ ಮನ್‌ಪ್ರೀತ್ ಸಿಂಗ್ ಮತ್ತು ಲಂಡನ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಾಕ್ಸರ್ ಎಂಸಿ ಮೇರಿ ಕೋಮ್ ಭಾರತದ ಧ್ವಜ ಧಾರಕರಾಗಲಿದ್ದಾರೆ. ಆಗಸ್ಟ್ 8 ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಅಗ್ರ ಕುಸ್ತಿಪಟು ಭಜರಂಗ್ ಪುನಿಯಾ ಅವರನ್ನು ದೇಶದ ಧ್ವಜ ಧಾರಕರನ್ನಾಗಿ ಮಾಡಲಾಗಿದೆ.

ಕ್ರಿಕೆಟಿಗರು ಆಟಗಾರರನ್ನು ಹುರಿದುಂಬಿಸಿದರು ಬಿಸಿಸಿಐ ವಿಶೇಷ ವಿಡಿಯೋ ಹಂಚಿಕೊಳ್ಳುವ ಮೂಲಕ ಆಟಗಾರರನ್ನು ಅಭಿನಂದಿಸಿದೆ. ಟೋಕಿಯೊ ಒಲಿಂಪಿಕ್ಸ್‌ಗಾಗಿ ಭಾರತದ ಕ್ರೀಡಾಪಟುಗಳಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ನೀಡುವಲ್ಲಿ ಭಾರತದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಬಿಸಿಸಿಐ ಹೆಮ್ಮೆಯಿಂದ ತೊಡಗಿಸಿಕೊಂಡಿದೆ ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ. ಕ್ರೀಡಾಪಟುಗಳು ಕಷ್ಟಪಟ್ಟು ಕೆಲಸ ಮಾಡಿದ್ದಾರೆ ಮತ್ತು ಹೋಗಲು ಉತ್ಸುಕರಾಗಿದ್ದಾರೆ. ನಾವು ಅವರನ್ನು ಒಟ್ಟಿಗೆ ಹುರಿದುಂಬಿಸೋಣ ಎಂದು ಬರದುಕೊಂಡಿದೆ.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಶನಿವಾರ ಹಂಚಿಕೊಂಡಿರುವ ವಿಡಿಯೋದಲ್ಲಿ, ಮಿಥಾಲಿ, ರೋಹಿತ್, ವಿರಾಟ್ ಕೊಹ್ಲಿ, ಜೆಮಿಮಾ ರೊಡ್ರಿಗಸ್, ಅಜಿಂಕ್ಯ ರಹಾನೆ, ಹಾರ್ಲೀನ್ ಡಿಯೋಲ್ ಅವರಂತಹ ಆಟಗಾರರು ಭಾರತಕ್ಕೆ ಮೆರಗು ನೀಡಿ ಎಂದು ಹೇಳಿಕೊಂಡಿದ್ದಾರೆ.

ಐಸೊಎಗೆ ಬಿಸಿಸಿಐ 10 ಕೋಟಿ ರೂ ಆಟಗಾರರ ತಯಾರಿ ಮತ್ತು ತರಬೇತಿಗಾಗಿ 10 ಕೋಟಿ ರೂ. ನೀಡುವುದಾಗಿ ಬಿಸಿಸಿಐ ಇತ್ತೀಚೆಗೆ ಘೋಷಿಸಿತ್ತು. ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ನಮ್ಮ ಉನ್ನತ ಆಟಗಾರರ ತಯಾರಿ ಮತ್ತು ಇತರ ಉದ್ದೇಶಗಳಿಗಾಗಿ ಈ ನಿಧಿಯನ್ನು ಬಳಸಲಾಗುವುದು ಎಂದು ಮಂಡಳಿಯ ಅಧಿಕಾರಿ ತಿಳಿಸಿದ್ದಾರೆ. ಕ್ರೀಡಾ ಸಚಿವಾಲಯ ಮತ್ತು ಭಾರತೀಯ ಒಲಿಂಪಿಕ್ ಸಂಘದೊಂದಿಗೆ ಮಾತನಾಡಿದ ನಂತರ ಪಾವತಿ ವಿಧಾನವನ್ನು ನಿರ್ಧರಿಸಲಾಗುತ್ತದೆ.

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು