AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿ 31 ವರ್ಷ: ಕ್ರಿಕೆಟ್​ ದೇವರಿಗೆ BCCI ವಂದನೆ

ಮುಂಬೈ: ಭಾರತದಲ್ಲಿ ಕ್ರಿಕೆಟ್ ಎಂಬ ಪದಕ್ಕೆ ಪರ್ಯಾಯವಾಗುವಷ್ಟು ದೈತ್ಯನಾಗಿ ಬೆಳೆದ, ಅಭಿಮಾನಿಗಳ ಪಾಲಿಗೆ ಅಕ್ಷರಶಃ ಕ್ರಿಕೆಟ್​ ದೇವರಾಗಿ ಕಂಡ ಮಾಸ್ಟರ್​ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್ ಲೋಕಕ್ಕೆ ಕಾಲಿಟ್ಟು ಇಂದಿಗೆ ಬರೋಬ್ಬರಿ 31 ವರ್ಷಗಳಾಗಿವೆ. ನವೆಂಬರ್ 15, 1989ರಂದು ಕರಾಚಿಯ ಮೈದಾನದಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯದ ಮೂಲಕ ತನ್ನ 16ನೇ ವಯಸ್ಸಿನಲ್ಲೇ ಭಾರತದ ಅತ್ಯಂತ ಕಿರಿಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಚಿನ್ ಇಂದಿಗೂ ಆ ಖ್ಯಾತಿಯನ್ನು ಉಳಿಸಿಕೊಂಡಿದ್ದಾರೆ. ಮೊದಲ ಪಂದ್ಯದಲ್ಲಿ ಸಚಿನ್ ಕಿರಿಯನೆಂಬ […]

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿ 31 ವರ್ಷ: ಕ್ರಿಕೆಟ್​ ದೇವರಿಗೆ BCCI ವಂದನೆ
KUSHAL V
|

Updated on: Nov 15, 2020 | 8:12 PM

Share

ಮುಂಬೈ: ಭಾರತದಲ್ಲಿ ಕ್ರಿಕೆಟ್ ಎಂಬ ಪದಕ್ಕೆ ಪರ್ಯಾಯವಾಗುವಷ್ಟು ದೈತ್ಯನಾಗಿ ಬೆಳೆದ, ಅಭಿಮಾನಿಗಳ ಪಾಲಿಗೆ ಅಕ್ಷರಶಃ ಕ್ರಿಕೆಟ್​ ದೇವರಾಗಿ ಕಂಡ ಮಾಸ್ಟರ್​ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್ ಲೋಕಕ್ಕೆ ಕಾಲಿಟ್ಟು ಇಂದಿಗೆ ಬರೋಬ್ಬರಿ 31 ವರ್ಷಗಳಾಗಿವೆ. ನವೆಂಬರ್ 15, 1989ರಂದು ಕರಾಚಿಯ ಮೈದಾನದಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯದ ಮೂಲಕ ತನ್ನ 16ನೇ ವಯಸ್ಸಿನಲ್ಲೇ ಭಾರತದ ಅತ್ಯಂತ ಕಿರಿಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಚಿನ್ ಇಂದಿಗೂ ಆ ಖ್ಯಾತಿಯನ್ನು ಉಳಿಸಿಕೊಂಡಿದ್ದಾರೆ.

ಮೊದಲ ಪಂದ್ಯದಲ್ಲಿ ಸಚಿನ್ ಕಿರಿಯನೆಂಬ ಕಾರಣಕ್ಕೆ ತುಂಬಾ ಅವಮಾನ ಅನುಭವಿಸಿದರೂ ನಂತರ ಅವಮಾನಿಸಿದವರೆಲ್ಲರೂ ಕಣ್ಣರಳಿಸಿ ನೋಡುವಂತೆ ಸಾಧಿಸಿದ ಸಚಿನ್​ ಇದೀಗ ಪ್ರತಿಯೊಬ್ಬರಿಗೂ ಮಾದರಿ. ಮೊದಲ ಆಟದಲ್ಲಿ ಕೇವಲ 15 ರನ್ ಗಳಿಸಿ ನಿರಾಸೆ ಅನುಭವಿಸಿದ್ದ ತೆಂಡೂಲ್ಕರ್ ಕೆಲವೇ ಕೆಲವು ವರ್ಷಗಳಲ್ಲಿ ಇಡೀ ತಂಡಕ್ಕೆ ಆಧಾರ ಸ್ತಂಭವಾಗಿ ಮಾರ್ಪಟ್ಟರು. ತನ್ನ ವೃತ್ತಿ ಜೀವನದಲ್ಲಿ 34 ಸಾವಿರಕ್ಕೂ ಅಧಿಕ ರನ್ ಗಳಿಸುವ ಮೂಲಕ ವಿಶ್ವದ ಶ್ರೇಷ್ಠ ಬ್ಯಾಟ್ಸ್​ಮ್ಯನ್ ಎಂಬ ಬಿರುದಿಗೆ ಪಾತ್ರರಾದರು.

ಐಪಿಎಲ್​ನಲ್ಲಿ ಮುಂಬೈ ತಂಡದಲ್ಲಿ ಆಡಿ ನಂತರ ಅದೇ ತಂಡದ ಮಾರ್ಗದರ್ಶಕರೂ ಆಗಿ ಕಾರ್ಯನಿರ್ವಹಿಸಿದ ಸಚಿನ್ ನಿವೃತ್ತಿಯ ನಂತರವೂ ಅಭಿಮಾನಿಗಳ ಪಾಲಿಗೆ ದೇವರಾಗಿಯೇ ಉಳಿದಿದ್ದಾರೆ. ಸಚಿನ್ ಅಂತಾರಾಷ್ಟೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ದಿನವನ್ನು ಸ್ಮರಿಸಿ ಬಿಸಿಸಿಐ ಟ್ವೀಟ್ ಮಾಡಿದ್ದು ಅವರು 2013ರಲ್ಲಿ ಕಟ್ಟಕಡೆಯ ಬಾರಿಗೆ ಭಾರತದ ಪರವಾಗಿ ಆಡಿದ್ದನ್ನೂ ಟ್ವೀಟ್​ನಲ್ಲಿ ಉಲ್ಲೇಖಿಸಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ