AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿ 31 ವರ್ಷ: ಕ್ರಿಕೆಟ್​ ದೇವರಿಗೆ BCCI ವಂದನೆ

ಮುಂಬೈ: ಭಾರತದಲ್ಲಿ ಕ್ರಿಕೆಟ್ ಎಂಬ ಪದಕ್ಕೆ ಪರ್ಯಾಯವಾಗುವಷ್ಟು ದೈತ್ಯನಾಗಿ ಬೆಳೆದ, ಅಭಿಮಾನಿಗಳ ಪಾಲಿಗೆ ಅಕ್ಷರಶಃ ಕ್ರಿಕೆಟ್​ ದೇವರಾಗಿ ಕಂಡ ಮಾಸ್ಟರ್​ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್ ಲೋಕಕ್ಕೆ ಕಾಲಿಟ್ಟು ಇಂದಿಗೆ ಬರೋಬ್ಬರಿ 31 ವರ್ಷಗಳಾಗಿವೆ. ನವೆಂಬರ್ 15, 1989ರಂದು ಕರಾಚಿಯ ಮೈದಾನದಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯದ ಮೂಲಕ ತನ್ನ 16ನೇ ವಯಸ್ಸಿನಲ್ಲೇ ಭಾರತದ ಅತ್ಯಂತ ಕಿರಿಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಚಿನ್ ಇಂದಿಗೂ ಆ ಖ್ಯಾತಿಯನ್ನು ಉಳಿಸಿಕೊಂಡಿದ್ದಾರೆ. ಮೊದಲ ಪಂದ್ಯದಲ್ಲಿ ಸಚಿನ್ ಕಿರಿಯನೆಂಬ […]

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿ 31 ವರ್ಷ: ಕ್ರಿಕೆಟ್​ ದೇವರಿಗೆ BCCI ವಂದನೆ
KUSHAL V
|

Updated on: Nov 15, 2020 | 8:12 PM

Share

ಮುಂಬೈ: ಭಾರತದಲ್ಲಿ ಕ್ರಿಕೆಟ್ ಎಂಬ ಪದಕ್ಕೆ ಪರ್ಯಾಯವಾಗುವಷ್ಟು ದೈತ್ಯನಾಗಿ ಬೆಳೆದ, ಅಭಿಮಾನಿಗಳ ಪಾಲಿಗೆ ಅಕ್ಷರಶಃ ಕ್ರಿಕೆಟ್​ ದೇವರಾಗಿ ಕಂಡ ಮಾಸ್ಟರ್​ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್ ಲೋಕಕ್ಕೆ ಕಾಲಿಟ್ಟು ಇಂದಿಗೆ ಬರೋಬ್ಬರಿ 31 ವರ್ಷಗಳಾಗಿವೆ. ನವೆಂಬರ್ 15, 1989ರಂದು ಕರಾಚಿಯ ಮೈದಾನದಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯದ ಮೂಲಕ ತನ್ನ 16ನೇ ವಯಸ್ಸಿನಲ್ಲೇ ಭಾರತದ ಅತ್ಯಂತ ಕಿರಿಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಚಿನ್ ಇಂದಿಗೂ ಆ ಖ್ಯಾತಿಯನ್ನು ಉಳಿಸಿಕೊಂಡಿದ್ದಾರೆ.

ಮೊದಲ ಪಂದ್ಯದಲ್ಲಿ ಸಚಿನ್ ಕಿರಿಯನೆಂಬ ಕಾರಣಕ್ಕೆ ತುಂಬಾ ಅವಮಾನ ಅನುಭವಿಸಿದರೂ ನಂತರ ಅವಮಾನಿಸಿದವರೆಲ್ಲರೂ ಕಣ್ಣರಳಿಸಿ ನೋಡುವಂತೆ ಸಾಧಿಸಿದ ಸಚಿನ್​ ಇದೀಗ ಪ್ರತಿಯೊಬ್ಬರಿಗೂ ಮಾದರಿ. ಮೊದಲ ಆಟದಲ್ಲಿ ಕೇವಲ 15 ರನ್ ಗಳಿಸಿ ನಿರಾಸೆ ಅನುಭವಿಸಿದ್ದ ತೆಂಡೂಲ್ಕರ್ ಕೆಲವೇ ಕೆಲವು ವರ್ಷಗಳಲ್ಲಿ ಇಡೀ ತಂಡಕ್ಕೆ ಆಧಾರ ಸ್ತಂಭವಾಗಿ ಮಾರ್ಪಟ್ಟರು. ತನ್ನ ವೃತ್ತಿ ಜೀವನದಲ್ಲಿ 34 ಸಾವಿರಕ್ಕೂ ಅಧಿಕ ರನ್ ಗಳಿಸುವ ಮೂಲಕ ವಿಶ್ವದ ಶ್ರೇಷ್ಠ ಬ್ಯಾಟ್ಸ್​ಮ್ಯನ್ ಎಂಬ ಬಿರುದಿಗೆ ಪಾತ್ರರಾದರು.

ಐಪಿಎಲ್​ನಲ್ಲಿ ಮುಂಬೈ ತಂಡದಲ್ಲಿ ಆಡಿ ನಂತರ ಅದೇ ತಂಡದ ಮಾರ್ಗದರ್ಶಕರೂ ಆಗಿ ಕಾರ್ಯನಿರ್ವಹಿಸಿದ ಸಚಿನ್ ನಿವೃತ್ತಿಯ ನಂತರವೂ ಅಭಿಮಾನಿಗಳ ಪಾಲಿಗೆ ದೇವರಾಗಿಯೇ ಉಳಿದಿದ್ದಾರೆ. ಸಚಿನ್ ಅಂತಾರಾಷ್ಟೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ದಿನವನ್ನು ಸ್ಮರಿಸಿ ಬಿಸಿಸಿಐ ಟ್ವೀಟ್ ಮಾಡಿದ್ದು ಅವರು 2013ರಲ್ಲಿ ಕಟ್ಟಕಡೆಯ ಬಾರಿಗೆ ಭಾರತದ ಪರವಾಗಿ ಆಡಿದ್ದನ್ನೂ ಟ್ವೀಟ್​ನಲ್ಲಿ ಉಲ್ಲೇಖಿಸಿದೆ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ