AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿ 31 ವರ್ಷ: ಕ್ರಿಕೆಟ್​ ದೇವರಿಗೆ BCCI ವಂದನೆ

ಮುಂಬೈ: ಭಾರತದಲ್ಲಿ ಕ್ರಿಕೆಟ್ ಎಂಬ ಪದಕ್ಕೆ ಪರ್ಯಾಯವಾಗುವಷ್ಟು ದೈತ್ಯನಾಗಿ ಬೆಳೆದ, ಅಭಿಮಾನಿಗಳ ಪಾಲಿಗೆ ಅಕ್ಷರಶಃ ಕ್ರಿಕೆಟ್​ ದೇವರಾಗಿ ಕಂಡ ಮಾಸ್ಟರ್​ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್ ಲೋಕಕ್ಕೆ ಕಾಲಿಟ್ಟು ಇಂದಿಗೆ ಬರೋಬ್ಬರಿ 31 ವರ್ಷಗಳಾಗಿವೆ. ನವೆಂಬರ್ 15, 1989ರಂದು ಕರಾಚಿಯ ಮೈದಾನದಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯದ ಮೂಲಕ ತನ್ನ 16ನೇ ವಯಸ್ಸಿನಲ್ಲೇ ಭಾರತದ ಅತ್ಯಂತ ಕಿರಿಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಚಿನ್ ಇಂದಿಗೂ ಆ ಖ್ಯಾತಿಯನ್ನು ಉಳಿಸಿಕೊಂಡಿದ್ದಾರೆ. ಮೊದಲ ಪಂದ್ಯದಲ್ಲಿ ಸಚಿನ್ ಕಿರಿಯನೆಂಬ […]

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿ 31 ವರ್ಷ: ಕ್ರಿಕೆಟ್​ ದೇವರಿಗೆ BCCI ವಂದನೆ
KUSHAL V
|

Updated on: Nov 15, 2020 | 8:12 PM

Share

ಮುಂಬೈ: ಭಾರತದಲ್ಲಿ ಕ್ರಿಕೆಟ್ ಎಂಬ ಪದಕ್ಕೆ ಪರ್ಯಾಯವಾಗುವಷ್ಟು ದೈತ್ಯನಾಗಿ ಬೆಳೆದ, ಅಭಿಮಾನಿಗಳ ಪಾಲಿಗೆ ಅಕ್ಷರಶಃ ಕ್ರಿಕೆಟ್​ ದೇವರಾಗಿ ಕಂಡ ಮಾಸ್ಟರ್​ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್ ಲೋಕಕ್ಕೆ ಕಾಲಿಟ್ಟು ಇಂದಿಗೆ ಬರೋಬ್ಬರಿ 31 ವರ್ಷಗಳಾಗಿವೆ. ನವೆಂಬರ್ 15, 1989ರಂದು ಕರಾಚಿಯ ಮೈದಾನದಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯದ ಮೂಲಕ ತನ್ನ 16ನೇ ವಯಸ್ಸಿನಲ್ಲೇ ಭಾರತದ ಅತ್ಯಂತ ಕಿರಿಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಚಿನ್ ಇಂದಿಗೂ ಆ ಖ್ಯಾತಿಯನ್ನು ಉಳಿಸಿಕೊಂಡಿದ್ದಾರೆ.

ಮೊದಲ ಪಂದ್ಯದಲ್ಲಿ ಸಚಿನ್ ಕಿರಿಯನೆಂಬ ಕಾರಣಕ್ಕೆ ತುಂಬಾ ಅವಮಾನ ಅನುಭವಿಸಿದರೂ ನಂತರ ಅವಮಾನಿಸಿದವರೆಲ್ಲರೂ ಕಣ್ಣರಳಿಸಿ ನೋಡುವಂತೆ ಸಾಧಿಸಿದ ಸಚಿನ್​ ಇದೀಗ ಪ್ರತಿಯೊಬ್ಬರಿಗೂ ಮಾದರಿ. ಮೊದಲ ಆಟದಲ್ಲಿ ಕೇವಲ 15 ರನ್ ಗಳಿಸಿ ನಿರಾಸೆ ಅನುಭವಿಸಿದ್ದ ತೆಂಡೂಲ್ಕರ್ ಕೆಲವೇ ಕೆಲವು ವರ್ಷಗಳಲ್ಲಿ ಇಡೀ ತಂಡಕ್ಕೆ ಆಧಾರ ಸ್ತಂಭವಾಗಿ ಮಾರ್ಪಟ್ಟರು. ತನ್ನ ವೃತ್ತಿ ಜೀವನದಲ್ಲಿ 34 ಸಾವಿರಕ್ಕೂ ಅಧಿಕ ರನ್ ಗಳಿಸುವ ಮೂಲಕ ವಿಶ್ವದ ಶ್ರೇಷ್ಠ ಬ್ಯಾಟ್ಸ್​ಮ್ಯನ್ ಎಂಬ ಬಿರುದಿಗೆ ಪಾತ್ರರಾದರು.

ಐಪಿಎಲ್​ನಲ್ಲಿ ಮುಂಬೈ ತಂಡದಲ್ಲಿ ಆಡಿ ನಂತರ ಅದೇ ತಂಡದ ಮಾರ್ಗದರ್ಶಕರೂ ಆಗಿ ಕಾರ್ಯನಿರ್ವಹಿಸಿದ ಸಚಿನ್ ನಿವೃತ್ತಿಯ ನಂತರವೂ ಅಭಿಮಾನಿಗಳ ಪಾಲಿಗೆ ದೇವರಾಗಿಯೇ ಉಳಿದಿದ್ದಾರೆ. ಸಚಿನ್ ಅಂತಾರಾಷ್ಟೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ದಿನವನ್ನು ಸ್ಮರಿಸಿ ಬಿಸಿಸಿಐ ಟ್ವೀಟ್ ಮಾಡಿದ್ದು ಅವರು 2013ರಲ್ಲಿ ಕಟ್ಟಕಡೆಯ ಬಾರಿಗೆ ಭಾರತದ ಪರವಾಗಿ ಆಡಿದ್ದನ್ನೂ ಟ್ವೀಟ್​ನಲ್ಲಿ ಉಲ್ಲೇಖಿಸಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್