AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 World Cup: ಟಿ-20 ವಿಶ್ವಕಪ್ ಟೂರ್ನಿ ಯುಎಇಗೆ ಸ್ಥಳಾಂತರ ಖಚಿತಪಡಿಸಿದ ಐಸಿಸಿ; ಪಂದ್ಯ ನಡೆಯುವ ದಿನಾಂಕ ಘೋಷಣೆ

ಯುಎಇ, ಒಮನ್​ನಲ್ಲಿ ಟಿ-ಟ್ವೆಂಟಿ ವಿಶ್ವಕಪ್ ಪಂದ್ಯ ನಡೆಯಲಿದೆ ಎಂದು ಐಸಿಸಿ ಹೇಳಿದೆ. ಅದರಂತೆ, ಭಾರತದಿಂದ ಯುಎಇಗೆ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿ ಸ್ಥಳಾಂತರ ಆಗಿರುವ ಬಗ್ಗೆ ಮಾಹಿತಿ ಖಚಿತಪಡಿಸಿದೆ.

ICC T20 World Cup: ಟಿ-20 ವಿಶ್ವಕಪ್ ಟೂರ್ನಿ ಯುಎಇಗೆ ಸ್ಥಳಾಂತರ ಖಚಿತಪಡಿಸಿದ ಐಸಿಸಿ; ಪಂದ್ಯ ನಡೆಯುವ ದಿನಾಂಕ ಘೋಷಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 29, 2021 | 5:28 PM

Share

ಮುಂಬೈ: ಟ್ವೆಂಟಿ ಟ್ವೆಂಟಿ ವಿಶ್ವಕಪ್ ಆರಂಭವಾಗುವ ಬಗ್ಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ಐಸಿಸಿ) ಅಧಿಕೃತ ಮಾಹಿತಿ ನೀಡಿದೆ. ಅಕ್ಟೋಬರ್ 17 ರಿಂದ ಐಸಿಸಿ ಟಿ-ಟ್ವೆಂಟಿ ವಿಶ್ವಕಪ್ ಆರಂಭವಾಗಲಿದೆ ಎಂದು ಐಸಿಸಿ ಹೇಳಿದೆ. ನವೆಂಬರ್ 14 ರಂದು ಟಿ-ಟ್ವೆಂಟಿ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಯುಎಇ, ಒಮನ್​ನಲ್ಲಿ ಟಿ-ಟ್ವೆಂಟಿ ವಿಶ್ವಕಪ್ ಪಂದ್ಯ ನಡೆಯಲಿದೆ ಎಂದು ಐಸಿಸಿ ಹೇಳಿದೆ. ಅದರಂತೆ, ಭಾರತದಿಂದ ಯುಎಇಗೆ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿ ಸ್ಥಳಾಂತರ ಆಗಿರುವ ಬಗ್ಗೆ ಮಾಹಿತಿ ಖಚಿತಪಡಿಸಿದೆ.

ಕೊರೊನಾ ಕಾರಣದಿಂದ ಟಿ-20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗಳನ್ನು ಯುಎಇಗೆ ಸ್ಥಳಾಂತರ ಮಾಡಲು ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ ನಿರ್ಧರಿಸಿದೆ. ಭಾರತದಲ್ಲಿ ಅರ್ಧಕ್ಕೆ ಸ್ಥಗಿತಗೊಂಡಿದ್ದ ಐಪಿಎಲ್​ 2021 ಕೂಡಾ ದುಬೈನಲ್ಲಿ ನಡೆಯಲಿದೆ ಎಂದು ಈ ಹಿಂದೆ ಬಿಸಿಸಿಐ ಘೋಷಿಸಿತ್ತು. ಇದೀಗ ಟಿ-20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗಳನ್ನು ಯುಎಇಗೆ ಸ್ಥಳಾಂತರ ಮಾಡಬೇಕೆಂದು ತೀರ್ಮಾನಿಸಿ ಮಾಹಿತಿ ಖಚಿತಪಡಿಸಿದೆ.

ಹೋಸ್ಟಿಂಗ್ ಹಕ್ಕುಗಳು ಬಿಸಿಸಿಐನೊಂದಿಗೆ ಉಳಿಯುತ್ತವೆ ಕೆಲವು ವಾರಗಳ ಊಹಾಪೋಹಗಳು, ಆತಂಕಗಳ ನಂತರ, ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್ ಸಂಘಟನೆಯ ಬಗ್ಗೆ ಈಗ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತದಲ್ಲಿ ನಡೆಯಲಿರುವ ಈ ಪಂದ್ಯಾವಳಿಯನ್ನು ಈಗ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಆಯೋಜಿಸಲಾಗುವುದು, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಬಗ್ಗೆ ಒಪ್ಪಿಗೆ ನೀಡಿತ್ತು. ಯುಎಇಯಲ್ಲಿ ಪಂದ್ಯಾವಳಿಯನ್ನು ಆಡಲಾಗಿದ್ದರೂ, ಹೋಸ್ಟಿಂಗ್ ಹಕ್ಕುಗಳು ಬಿಸಿಸಿಐನೊಂದಿಗೆ ಉಳಿಯುತ್ತವೆ.

ಭಾರತದಲ್ಲಿ ಕೊರೊನಾ ವೈರಸ್​ನಿಂದ ಉಂಟಾದ ಬಿಕ್ಕಟ್ಟಿನಿಂದಾಗಿ, ವಿಶ್ವಕಪ್ ಆಯೋಜನೆಯ ಬಗ್ಗೆ ಅನುಮಾನವಿತ್ತು. ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಭಾರತೀಯ ಮಂಡಳಿ ಈ ತಿಂಗಳು ಐಸಿಸಿಯಿಂದ ಸ್ವಲ್ಪ ಸಮಯ ಕೋರಿತ್ತು ಮತ್ತು ಜೂನ್ 28 ರೊಳಗೆ ಐಸಿಸಿಗೆ ತನ್ನ ನಿರ್ಧಾರವನ್ನು ತಿಳಿಸಬೇಕಾಗಿತ್ತು. ಈಗ ಬಿಸಿಸಿಐ ತನ್ನ ನಿರ್ಧಾರವನ್ನು ತೆಗೆದುಕೊಂಡಿದೆ. ಸುಮಾರು ಒಂದು ತಿಂಗಳ ಕಾಲ ನಡೆಯುವ ಈ ವಿಶ್ವಕಪ್, ಈಗ ಯುಎಇಯಲ್ಲಿ ಆಡಲಾಗುವುದು ಖಚಿತವಾಗಿದೆ.

ಇದನ್ನೂ ಓದಿ: T20 World Cup : ಟಿ-20 ವಿಶ್ವಕಪ್ ಯುಎಇಗೆ ಸ್ಥಳಾಂತರಗೊಳ್ಳಲು ಪಾಕಿಸ್ತಾನ ಕಾರಣ! ಅವರು ಬಂದರೆ ಗಲಭೆಗಳಾಗಬಹುದು; ಬಿಸಿಸಿಐ

20 ಓವರ್‌, ಕೇವಲ ಒಂದು ಬೌಂಡರಿ, 19 ಹೆಚ್ಚುವರಿ ರನ್; ಈ ಟಿ-20 ಪಂದ್ಯದ ವಿಶೇಷತೆಗಳು ಒಂದೆರಡಲ್ಲ

Published On - 5:13 pm, Tue, 29 June 21

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?