AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಲ್ಬರ್ನ್​ನಲ್ಲಿ ಭಾರತೀಯ ಕ್ರಿಕೆಟಿಗರಿಂದ ಬೀಫ್ ಸೇವನೆ? ಟ್ವಿಟರ್​ನಲ್ಲಿ ವೈರಲ್ ಆಯ್ತು ಊಟದ ಬಿಲ್

ಟ್ವಿಟರ್​ನಲ್ಲಿ ವೈರಲ್ ಆಗಿರುವ ಬಿಲ್​ನಲ್ಲಿ ಪೋರ್ಕ್ ಕೂಡಾ ಇದೆ. ಹೋಟೆಲ್​ಗೆ ಹೋಗಿ ಬೀಫ್ ಮತ್ತು ಪೋರ್ಕ್ ತಿಂದವರು ಯಾರು? ಎಂದು ಕೆಲವು ನೆಟ್ಟಿಗರು ಪ್ರಶ್ನಿಸಿದ್ದು ಇನ್ನು ಕೆಲವರು ರೋಹಿತ್ ಶರ್ಮಾ ಬೀಫ್ ಸೇವನೆ ಮಾಡುತ್ತಾರೆಯೇ ಎಂದು ಹುಬ್ಬೇರಿಸಿದ್ದಾರೆ.

ಮೆಲ್ಬರ್ನ್​ನಲ್ಲಿ ಭಾರತೀಯ ಕ್ರಿಕೆಟಿಗರಿಂದ ಬೀಫ್ ಸೇವನೆ? ಟ್ವಿಟರ್​ನಲ್ಲಿ ವೈರಲ್ ಆಯ್ತು ಊಟದ ಬಿಲ್
ರೋಹಿತ್ ಶರ್ಮಾ (ಎಡಚಿತ್ರ) ಮತ್ತು ವೈರಲ್ ಆಗಿರುವ ಬಿಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on:Jan 03, 2021 | 3:02 PM

Share

ಮೆಲ್ಬರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರಾದ ರೋಹಿತ್ ಶರ್ಮ, ರಿಷಭ್ ಪಂತ್, ನವದೀಪ್ ಸೈನಿ ಮತ್ತು ಶುಭಮನ್ ಗಿಲ್ ಹೊಸವರ್ಷದ ಮೊದಲ ದಿನದಂದು ಮೆಲ್ಬರ್ನ್ ನಗರದ ಹೋಟೆಲ್​ನಲ್ಲಿ ಊಟ ಮಾಡಿದ ಬಿಲ್​ನ್ನು ಅಭಿಮಾನಿಯೊಬ್ಬರು ಪಾವತಿಸಿದ್ದು ಸುದ್ದಿಯಾದ ಬೆನ್ನಲ್ಲೇ ಇದೀಗ ಅದೇ ಬಿಲ್ ಟ್ವಿಟರ್​ನಲ್ಲಿ ವೈರಲ್ ಆಗಿದೆ.

ಬಿಲ್​ನಲ್ಲಿ ಬೀಫ್ ಇದೆ. ಭಾರತೀಯ ಆಟಗಾರರು ವಿದೇಶದಲ್ಲಿ ಬೀಫ್ ತಿಂದಿದ್ದಾರೆ ಎಂದು ಆರೋಪಿಸಿ ನೆಟ್ಟಿಗರು ಕ್ರಿಕೆಟಿಗರನ್ನು ಟ್ರೋಲ್ ಮಾಡಿದ್ದಾರೆ. ಟ್ವಿಟರ್​ನಲ್ಲಿ ವೈರಲ್ ಆಗಿರುವ ಬಿಲ್ ನಲ್ಲಿ ಪೋರ್ಕ್ ಕೂಡಾ ಇದೆ. ಹೋಟೆಲ್​ಗೆ ಹೋಗಿ ಬೀಫ್ ಮತ್ತು ಪೋರ್ಕ್ ತಿಂದವರು ಯಾರು ಎಂದು ಟ್ವೀಟಿಗರು ಪ್ರಶ್ನಿಸಿದ್ದಾರೆ.

ಕ್ರಿಕೆಟಿಗರು ಹೋಟೆಲ್​ನಲ್ಲಿರುವ ವಿಡಿಯೊವನ್ನು ಕ್ರಿಕೆಟ್ ಅಭಿಮಾನಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಅಪ್​ಲೋಡ್ ಮಾಡಿದ್ದರು. ಏತನ್ಮಧ್ಯೆ, ಕ್ರಿಕೆಟಿಗರು ಬಯೋ ಸೆಕ್ಯುರಿಟಿ ಪ್ರೊಟೊಕಾಲ್ (ಕೋವಿಡ್ ಸುರಕ್ಷಾ ನಿಯಮ) ಉಲ್ಲಂಘಿಸಿ ಹೋಟೆಲ್​ಗೆ ಹೋಗಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ವಿಡಿಯೊ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಬಿಸಿಸಿಐ ತನಿಖೆ ನಡೆಸುತ್ತಿದ್ದು, ನಮ್ಮ ಆಟಗಾರರು ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಬಿಸಿಸಿಐ ಹೇಳಿದೆ.

India vs Australia Test Series |ಮೆಲ್ಬರ್ನ್​ನಲ್ಲಿ ಭಾರತೀಯ ಆಟಗಾರರ ಊಟದ ಬಿಲ್ ನೀಡಿದ ಭಾರತೀಯ ಅಭಿಮಾನಿ

Published On - 11:36 am, Sun, 3 January 21

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ