AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಲ್ಬರ್ನ್​ನಲ್ಲಿ ಭಾರತೀಯ ಕ್ರಿಕೆಟಿಗರಿಂದ ಬೀಫ್ ಸೇವನೆ? ಟ್ವಿಟರ್​ನಲ್ಲಿ ವೈರಲ್ ಆಯ್ತು ಊಟದ ಬಿಲ್

ಟ್ವಿಟರ್​ನಲ್ಲಿ ವೈರಲ್ ಆಗಿರುವ ಬಿಲ್​ನಲ್ಲಿ ಪೋರ್ಕ್ ಕೂಡಾ ಇದೆ. ಹೋಟೆಲ್​ಗೆ ಹೋಗಿ ಬೀಫ್ ಮತ್ತು ಪೋರ್ಕ್ ತಿಂದವರು ಯಾರು? ಎಂದು ಕೆಲವು ನೆಟ್ಟಿಗರು ಪ್ರಶ್ನಿಸಿದ್ದು ಇನ್ನು ಕೆಲವರು ರೋಹಿತ್ ಶರ್ಮಾ ಬೀಫ್ ಸೇವನೆ ಮಾಡುತ್ತಾರೆಯೇ ಎಂದು ಹುಬ್ಬೇರಿಸಿದ್ದಾರೆ.

ಮೆಲ್ಬರ್ನ್​ನಲ್ಲಿ ಭಾರತೀಯ ಕ್ರಿಕೆಟಿಗರಿಂದ ಬೀಫ್ ಸೇವನೆ? ಟ್ವಿಟರ್​ನಲ್ಲಿ ವೈರಲ್ ಆಯ್ತು ಊಟದ ಬಿಲ್
ರೋಹಿತ್ ಶರ್ಮಾ (ಎಡಚಿತ್ರ) ಮತ್ತು ವೈರಲ್ ಆಗಿರುವ ಬಿಲ್
ರಶ್ಮಿ ಕಲ್ಲಕಟ್ಟ
| Edited By: |

Updated on:Jan 03, 2021 | 3:02 PM

Share

ಮೆಲ್ಬರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರಾದ ರೋಹಿತ್ ಶರ್ಮ, ರಿಷಭ್ ಪಂತ್, ನವದೀಪ್ ಸೈನಿ ಮತ್ತು ಶುಭಮನ್ ಗಿಲ್ ಹೊಸವರ್ಷದ ಮೊದಲ ದಿನದಂದು ಮೆಲ್ಬರ್ನ್ ನಗರದ ಹೋಟೆಲ್​ನಲ್ಲಿ ಊಟ ಮಾಡಿದ ಬಿಲ್​ನ್ನು ಅಭಿಮಾನಿಯೊಬ್ಬರು ಪಾವತಿಸಿದ್ದು ಸುದ್ದಿಯಾದ ಬೆನ್ನಲ್ಲೇ ಇದೀಗ ಅದೇ ಬಿಲ್ ಟ್ವಿಟರ್​ನಲ್ಲಿ ವೈರಲ್ ಆಗಿದೆ.

ಬಿಲ್​ನಲ್ಲಿ ಬೀಫ್ ಇದೆ. ಭಾರತೀಯ ಆಟಗಾರರು ವಿದೇಶದಲ್ಲಿ ಬೀಫ್ ತಿಂದಿದ್ದಾರೆ ಎಂದು ಆರೋಪಿಸಿ ನೆಟ್ಟಿಗರು ಕ್ರಿಕೆಟಿಗರನ್ನು ಟ್ರೋಲ್ ಮಾಡಿದ್ದಾರೆ. ಟ್ವಿಟರ್​ನಲ್ಲಿ ವೈರಲ್ ಆಗಿರುವ ಬಿಲ್ ನಲ್ಲಿ ಪೋರ್ಕ್ ಕೂಡಾ ಇದೆ. ಹೋಟೆಲ್​ಗೆ ಹೋಗಿ ಬೀಫ್ ಮತ್ತು ಪೋರ್ಕ್ ತಿಂದವರು ಯಾರು ಎಂದು ಟ್ವೀಟಿಗರು ಪ್ರಶ್ನಿಸಿದ್ದಾರೆ.

ಕ್ರಿಕೆಟಿಗರು ಹೋಟೆಲ್​ನಲ್ಲಿರುವ ವಿಡಿಯೊವನ್ನು ಕ್ರಿಕೆಟ್ ಅಭಿಮಾನಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಅಪ್​ಲೋಡ್ ಮಾಡಿದ್ದರು. ಏತನ್ಮಧ್ಯೆ, ಕ್ರಿಕೆಟಿಗರು ಬಯೋ ಸೆಕ್ಯುರಿಟಿ ಪ್ರೊಟೊಕಾಲ್ (ಕೋವಿಡ್ ಸುರಕ್ಷಾ ನಿಯಮ) ಉಲ್ಲಂಘಿಸಿ ಹೋಟೆಲ್​ಗೆ ಹೋಗಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ವಿಡಿಯೊ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಬಿಸಿಸಿಐ ತನಿಖೆ ನಡೆಸುತ್ತಿದ್ದು, ನಮ್ಮ ಆಟಗಾರರು ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಬಿಸಿಸಿಐ ಹೇಳಿದೆ.

India vs Australia Test Series |ಮೆಲ್ಬರ್ನ್​ನಲ್ಲಿ ಭಾರತೀಯ ಆಟಗಾರರ ಊಟದ ಬಿಲ್ ನೀಡಿದ ಭಾರತೀಯ ಅಭಿಮಾನಿ

Published On - 11:36 am, Sun, 3 January 21

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!