AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಲ್ಬರ್ನ್​ನಲ್ಲಿ ಭಾರತೀಯ ಕ್ರಿಕೆಟಿಗರಿಂದ ಬೀಫ್ ಸೇವನೆ? ಟ್ವಿಟರ್​ನಲ್ಲಿ ವೈರಲ್ ಆಯ್ತು ಊಟದ ಬಿಲ್

ಟ್ವಿಟರ್​ನಲ್ಲಿ ವೈರಲ್ ಆಗಿರುವ ಬಿಲ್​ನಲ್ಲಿ ಪೋರ್ಕ್ ಕೂಡಾ ಇದೆ. ಹೋಟೆಲ್​ಗೆ ಹೋಗಿ ಬೀಫ್ ಮತ್ತು ಪೋರ್ಕ್ ತಿಂದವರು ಯಾರು? ಎಂದು ಕೆಲವು ನೆಟ್ಟಿಗರು ಪ್ರಶ್ನಿಸಿದ್ದು ಇನ್ನು ಕೆಲವರು ರೋಹಿತ್ ಶರ್ಮಾ ಬೀಫ್ ಸೇವನೆ ಮಾಡುತ್ತಾರೆಯೇ ಎಂದು ಹುಬ್ಬೇರಿಸಿದ್ದಾರೆ.

ಮೆಲ್ಬರ್ನ್​ನಲ್ಲಿ ಭಾರತೀಯ ಕ್ರಿಕೆಟಿಗರಿಂದ ಬೀಫ್ ಸೇವನೆ? ಟ್ವಿಟರ್​ನಲ್ಲಿ ವೈರಲ್ ಆಯ್ತು ಊಟದ ಬಿಲ್
ರೋಹಿತ್ ಶರ್ಮಾ (ಎಡಚಿತ್ರ) ಮತ್ತು ವೈರಲ್ ಆಗಿರುವ ಬಿಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on:Jan 03, 2021 | 3:02 PM

Share

ಮೆಲ್ಬರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರಾದ ರೋಹಿತ್ ಶರ್ಮ, ರಿಷಭ್ ಪಂತ್, ನವದೀಪ್ ಸೈನಿ ಮತ್ತು ಶುಭಮನ್ ಗಿಲ್ ಹೊಸವರ್ಷದ ಮೊದಲ ದಿನದಂದು ಮೆಲ್ಬರ್ನ್ ನಗರದ ಹೋಟೆಲ್​ನಲ್ಲಿ ಊಟ ಮಾಡಿದ ಬಿಲ್​ನ್ನು ಅಭಿಮಾನಿಯೊಬ್ಬರು ಪಾವತಿಸಿದ್ದು ಸುದ್ದಿಯಾದ ಬೆನ್ನಲ್ಲೇ ಇದೀಗ ಅದೇ ಬಿಲ್ ಟ್ವಿಟರ್​ನಲ್ಲಿ ವೈರಲ್ ಆಗಿದೆ.

ಬಿಲ್​ನಲ್ಲಿ ಬೀಫ್ ಇದೆ. ಭಾರತೀಯ ಆಟಗಾರರು ವಿದೇಶದಲ್ಲಿ ಬೀಫ್ ತಿಂದಿದ್ದಾರೆ ಎಂದು ಆರೋಪಿಸಿ ನೆಟ್ಟಿಗರು ಕ್ರಿಕೆಟಿಗರನ್ನು ಟ್ರೋಲ್ ಮಾಡಿದ್ದಾರೆ. ಟ್ವಿಟರ್​ನಲ್ಲಿ ವೈರಲ್ ಆಗಿರುವ ಬಿಲ್ ನಲ್ಲಿ ಪೋರ್ಕ್ ಕೂಡಾ ಇದೆ. ಹೋಟೆಲ್​ಗೆ ಹೋಗಿ ಬೀಫ್ ಮತ್ತು ಪೋರ್ಕ್ ತಿಂದವರು ಯಾರು ಎಂದು ಟ್ವೀಟಿಗರು ಪ್ರಶ್ನಿಸಿದ್ದಾರೆ.

ಕ್ರಿಕೆಟಿಗರು ಹೋಟೆಲ್​ನಲ್ಲಿರುವ ವಿಡಿಯೊವನ್ನು ಕ್ರಿಕೆಟ್ ಅಭಿಮಾನಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಅಪ್​ಲೋಡ್ ಮಾಡಿದ್ದರು. ಏತನ್ಮಧ್ಯೆ, ಕ್ರಿಕೆಟಿಗರು ಬಯೋ ಸೆಕ್ಯುರಿಟಿ ಪ್ರೊಟೊಕಾಲ್ (ಕೋವಿಡ್ ಸುರಕ್ಷಾ ನಿಯಮ) ಉಲ್ಲಂಘಿಸಿ ಹೋಟೆಲ್​ಗೆ ಹೋಗಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ವಿಡಿಯೊ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಬಿಸಿಸಿಐ ತನಿಖೆ ನಡೆಸುತ್ತಿದ್ದು, ನಮ್ಮ ಆಟಗಾರರು ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಬಿಸಿಸಿಐ ಹೇಳಿದೆ.

India vs Australia Test Series |ಮೆಲ್ಬರ್ನ್​ನಲ್ಲಿ ಭಾರತೀಯ ಆಟಗಾರರ ಊಟದ ಬಿಲ್ ನೀಡಿದ ಭಾರತೀಯ ಅಭಿಮಾನಿ

Published On - 11:36 am, Sun, 3 January 21

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’