AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs NZ: ಬೆನ್ ಸ್ಟೋಕ್ಸ್​ಗೆ ಟೆಸ್ಟ್ ಸರಣಿ ಸೋಲಿನ ವಿದಾಯ

New Zealand vs England: ಇಂಗ್ಲೆಂಡ್-ನ್ಯೂಜಿಲೆಂಡ್ ಟೆಸ್ಟ್ ಸರಣಿಯಲ್ಲಿ ಕಿವೀಸ್ 2-1 ಅಂತರದಿಂದ ಜಯಗಳಿಸಿದೆ. ನಾಯಕ ಬೆನ್ ಸ್ಟೋಕ್ಸ್ ತಮ್ಮ ವಿದಾಯ ಸರಣಿಯಲ್ಲಿ ಸೋಲಿನೊಂದಿಗೆ ನಿವೃತ್ತಿ ಹೇಳುವಂತಾಗಿದೆ. ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ ಅಂತಿಮ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಬ್ಯಾಟಿಂಗ್ ವಿಫಲವಾಗಿ 160 ರನ್‌ಗಳಿಂದ ಸೋಲನುಭವಿಸಿತು. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ತನ್ನ ಹಿಂದಿನ ಸೋಲಿಗೆ ಸೇಡು ತೀರಿಸಿಕೊಂಡಿತು ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಮುಂದುವರೆಸಿದೆ.

ENG vs NZ: ಬೆನ್ ಸ್ಟೋಕ್ಸ್​ಗೆ ಟೆಸ್ಟ್ ಸರಣಿ ಸೋಲಿನ ವಿದಾಯ
England Team
ಪೃಥ್ವಿಶಂಕರ
|

Updated on: Jun 29, 2026 | 8:42 PM

Share

ಟೆಸ್ಟ್ ಸರಣಿ ಗೆಲುವಿನೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಬೇಕು ಎಂದುಕೊಂಡಿದ್ದ ಇಂಗ್ಲೆಂಡ್‌ ತಂಡದ ನಾಯಕ ಬೆನ್ ಸ್ಟೋಕ್ಸ್​ಗೆ (Ben Stokes) ಸೋಲಿನ ಬೀಳ್ಕೊಡುಗೆ ಸಿಕ್ಕಿದೆ. ಇಂಗ್ಲೆಂಡ್‌ ಮತ್ತು ನ್ಯೂಜಿಲೆಂಡ್ ( England vs New Zealand) ನಡುವೆ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ನ್ಯೂಜಿಲೆಂಡ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ತನ್ನ ಅಮೋಘ ಪ್ರದರ್ಶನವನ್ನು ಮುಂದುವರೆಸಿದೆ. ಸುಮಾರು ಎರಡು ವರ್ಷಗಳ ಹಿಂದೆ ಭಾರತದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾವನ್ನು ಸೋಲಿಸಿದ್ದ ನ್ಯೂಜಿಲೆಂಡ್ ಈಗ ಇಂಗ್ಲೆಂಡ್ ತಂಡವನ್ನು ಅವರದೇ ನೆಲದಲ್ಲಿ ಸೋಲಿಸಿದೆ. ಟಾಮ್ ಲ್ಯಾಥಮ್ ನಾಯಕತ್ವದ ಕಿವೀಸ್ ಪಡೆ, ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಆತಿಥೇಯ ಇಂಗ್ಲೆಂಡ್ ತಂಡವನ್ನು 160 ರನ್‌ಗಳಿಂದ ಸೋಲಿಸಿ, ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ, ನ್ಯೂಜಿಲೆಂಡ್, ಇಂಗ್ಲೆಂಡ್ ವಿರುದ್ಧದ ಹಿಂದಿನ ತವರಿನ ಸೋಲಿಗೆ ಸೇಡು ತೀರಿಸಿಕೊಂಡಿತು.

ಇಂಗ್ಲೆಂಡ್ ಬ್ಯಾಟಿಂಗ್ ವಿಫಲ

ಜೂನ್ 29, ಸೋಮವಾರ, ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯದ ಅಂತಿಮ ದಿನದಂದು ಇಂಗ್ಲೆಂಡ್ ಗೆಲ್ಲಲು 170 ರನ್‌ಗಳ ಅಗತ್ಯವಿತ್ತು. ಆರು ವಿಕೆಟ್‌ಗಳು ಕೈಯಲ್ಲಿದ್ದವು. ಅದರಲ್ಲೂ ಸ್ಟಾರ್ ಬ್ಯಾಟ್ಸ್‌ಮನ್ ಜೋ ರೂಟ್ ಕ್ರೀಸ್‌ನಲ್ಲಿ ಇದ್ದಿದ್ದರಿಂದ ಇಂಗ್ಲೆಂಡ್‌ ತಂಡಕ್ಕೆ ಗೆಲುವಿನ ಭರವಸೆ ಇತ್ತು. ಆದರೆ ದಿನದ ಆರಂಭದಲ್ಲಿ ಜೋ ರೂಟ್ ಸೇರಿದಂತೆ ಒಂದೇ ಓವರ್‌ನಲ್ಲಿ ಎರಡು ವಿಕೆಟ್‌ಗಳು ಬಿದ್ದವು. ವೇಗಿ ನಾಥನ್ ಸ್ಮಿತ್ ಬೌಲಿಂಗ್ ಮಾಡಿದ ಈ ಓವರ್‌ನಲ್ಲಿ, ಎಮಿಲಿಯೊ ಗೇ ಮೊದಲು ವಿಕೆಟ್‌ಕೀಪರ್‌ಗೆ ಕ್ಯಾಚ್ ನೀಡಿದರೆ, ನಂತರ ಜೋ ರೂಟ್ ರನೌಟ್ ಆದರು. ಇದರೊಂದಿಗೆ, ಇಂಗ್ಲೆಂಡ್‌ನ ಸೋಲು ಖಚಿತವಾಯಿತು.

ಅಲ್ಲಿಂದ, ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಜೇಮೀ ಸ್ಮಿತ್ ಕ್ರೀಸ್‌ನಲ್ಲಿ ನೆಲೆಯೂರಿ, ಗಸ್ ಅಟ್ಕಿನ್ಸನ್ ಅವರೊಂದಿಗೆ ಬಲವಾದ ಪಾಲುದಾರಿಕೆಯನ್ನು ರೂಪಿಸಿದರು. ಈ ವೇಳೆ ಸ್ಮಿತ್ ತಮ್ಮ ಅರ್ಧಶತಕವನ್ನು ಪೂರೈಸಿದರು. ಆದರೆ ಎರಡನೇ ಸೆಷನ್ ಆರಂಭದಲ್ಲೇ ಇಂಗ್ಲೆಂಡ್‌ ತಂಡದ ವಿಕೆಟ್​ಗಳು ಬೀಳಲಾರಂಭಿಸಿದವು. ಇದರ ಪರಿಣಾಮವಾಗಿ ಇಂಗ್ಲೆಂಡ್‌ ತಂಡ 212 ರನ್‌ಗಳಿಗೆ ಆಲೌಟ್ ಆಯಿತು. ಸ್ಮಿತ್ 60 ರನ್ ಗಳಿಸಿ ಗರಿಷ್ಠ ಸ್ಕೋರರ್ ಗಳಿಸಿದರೆ, ಮಧ್ಯಮ ವೇಗಿ ಜ್ಯಾಕ್ ಫೋಕ್ಸ್ ನ್ಯೂಜಿಲೆಂಡ್ ಪರ ಮೂರು ವಿಕೆಟ್‌ಗಳನ್ನು ಪಡೆದರು.

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಇಂಗ್ಲೆಂಡ್‌ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ವಿದಾಯ

ಸೋಲಿನೊಂದಿಗೆ ವಿದಾಯ ಹೇಳಿದ ಸ್ಟೋಕ್ಸ್

ಈ ಗೆಲುವಿನೊಂದಿಗೆ, ನ್ಯೂಜಿಲೆಂಡ್ 2-1 ಅಂತರದಲ್ಲಿ ಸರಣಿಯನ್ನು ಗೆದ್ದಿರೆ, ಇತ್ತ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನ ನಿರಾಶೆಯಲ್ಲಿ ಕೊನೆಗೊಂಡಿತು. ಕಾಕತಾಳೀಯವಾಗಿ, ನಾಲ್ಕು ವರ್ಷಗಳ ಹಿಂದೆ, 2022 ರಲ್ಲಿ, ಬೆನ್ ಸ್ಟೋಕ್ಸ್ ಇಂಗ್ಲೆಂಡ್ ಟೆಸ್ಟ್ ತಂಡದ ಜವಾಬ್ದಾರಿಯನ್ನು ವಹಿಸಿಕೊಂಡಾಗ ಮತ್ತು ಬ್ರೆಂಡನ್ ಮೆಕಲಮ್ ತಂಡದ ಹೊಸ ತರಬೇತುದಾರರಾದಾಗ, ಮೊದಲ ಸರಣಿ ನ್ಯೂಜಿಲೆಂಡ್ ವಿರುದ್ಧವಾಗಿತ್ತು, ಅಲ್ಲಿ ಇಂಗ್ಲೆಂಡ್ ಸ್ಫೋಟಕ ಬ್ಯಾಟಿಂಗ್ ಮೂಲಕ ನ್ಯೂಜಿಲೆಂಡ್ ತಂಡವನ್ನು 3-0 ಅಂತರದಿಂದ ಸೋಲಿಸಿತ್ತು. ಈಗ, ನಾಲ್ಕು ವರ್ಷಗಳ ನಂತರ, ಅದೇ ಸ್ಟೋಕ್ಸ್-ಮೆಕಲಮ್ ಜೋಡಿ ಅದೇ ಸ್ಫೋಟಕ ಬ್ಯಾಟಿಂಗ್‌ನಿಂದಾಗಿ ನ್ಯೂಜಿಲೆಂಡ್ ವಿರುದ್ಧ ಸರಣಿಯನ್ನು ಕಳೆದುಕೊಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!