AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhavani Devi: ಫೆನ್ಸಿಂಗ್​ನಲ್ಲಿ ಭಾರತಕ್ಕೆ ಮೊದಲ ಪದಕ: ಐತಿಹಾಸಿಕ ಸಾಧನೆ ಮಾಡಿದ ಭವಾನಿ ದೇವಿ

Asian Championships 2023: ವಿಶ್ವದ ನಂಬರ್ ಒನ್ ಆಟಗಾರ್ತಿ ಮಿಸಾಕಿ ಎಮುರಾ ಅವರನ್ನು 15-10 ಅಂಕಗಳಿಂದ ಸೋಲಿಸಿ ಭವಾನಿ ದೇವಿ ಸೆಮಿಫೈನಲ್ ಪ್ರವೇಶಿಸಿದ್ದರು.

Bhavani Devi: ಫೆನ್ಸಿಂಗ್​ನಲ್ಲಿ ಭಾರತಕ್ಕೆ ಮೊದಲ ಪದಕ: ಐತಿಹಾಸಿಕ ಸಾಧನೆ ಮಾಡಿದ ಭವಾನಿ ದೇವಿ
Bhavani Devi
TV9 Web
| Edited By: |

Updated on: Jun 19, 2023 | 6:53 PM

Share

Asian Championships 2023: ಚೀನಾದ ವುಕ್ಸಿಯಲ್ಲಿ ನಡೆದ ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್​ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಪೆನ್ಸರ್ ಭವಾನಿ ದೇವಿ (Bhavani Devi) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಮಿಸಾಕಿ ಎಮುರಾ ಅವರನ್ನು ಕ್ವಾರ್ಟರ್‌ಫೈನಲ್‌ನಲ್ಲಿ ಸೋಲಿಸಿ ಭವಾನಿ ದೇವಿ ಫೆನ್ಸಿಂಗ್‌ನಲ್ಲಿ (ಕತ್ತಿ ವರಸೆ) ಭಾರತಕ್ಕೆ ಮೊದಲ ಕಂಚಿನ ಪದಕ ತಂದುಕೊಟ್ಟಿದ್ದಾರೆ. ವಿಶ್ವದ ನಂಬರ್ ಒನ್ ಆಟಗಾರ್ತಿ ಮಿಸಾಕಿ ಎಮುರಾ ಅವರನ್ನು 15-10 ಅಂಕಗಳಿಂದ ಸೋಲಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದ ಭವಾನಿ ದೇವಿ ಸೆಮಿಫೈನಲ್ ಪ್ರವೇಶಿಸಿದ್ದರು.

ಆದರೆ ಸೆಮಿಫೈನಲ್‌ನಲ್ಲಿ ಉಜ್ಬೇಕಿಸ್ತಾನ್‌ನ ಝೈನಾಬ್ ದೈಬೆಕೋವಾ ವಿರುದ್ಧ ಭವಾನಿ 14-15 ಅಂತರದಿಂದ ಸೋಲನುಭವಿಸಿದರು. ಇದಾಗ್ಯೂ ಮೂರನೇ ಸ್ಥಾನ ಪಡೆಯುವ ಮೂಲಕ ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್​ನಲ್ಲಿ ಕಂಚಿನ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ದಾಖಲೆ ಬರೆದರು.

ಈ ಐತಿಹಾಸಿಕ ಸಾಧನೆಯನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಕೊಂಡಾಡಿದ್ದಾರೆ. ವಿಶ್ವದ ನಂಬರ್ 1 ಆಟಗಾರ್ತಿಯನ್ನು ಸೋಲಿಸಿ ಪದಕ ಗೆದ್ದಿರುವುದು ನಿಜಕ್ಕೂ ಶ್ಲಾಘನೀಯ. ಪ್ರತಿಯೊಂದು ಅಂತ್ಯಕ್ಕೂ ಒಂದು ಆರಂಭವಿದೆ. ಟೋಕಿಯೋ 2020 ಒಲಿಂಪಿಕ್ಸ್‌ನಲ್ಲಿ ನಿಮ್ಮ ಅದ್ಭುತ ಸಾಧನೆಗಳು ಮತ್ತು ಆ ದಿನ ನೀವು ತೆಗೆದುಕೊಂಡ ಪ್ರತಿಜ್ಞೆಯು ಭಾರತಕ್ಕಾಗಿ ಫೆನ್ಸಿಂಗ್ ಕ್ರೀಡೆಯಲ್ಲಿ ಕನಸನ್ನು ನನಸಾಗಿಸಲು ಮೆಟ್ಟಿಲುಗಳಾಗಿವೆ.

ನಿಮ್ಮ ಈ ಸಾಧನೆಯು ಸಹ ಕ್ರೀಡಾಪಟುಗಳಿಗೆ ಸ್ಫೂರ್ತಿ ಆಗಲಿದೆ. ಅಲ್ಲದೆ ಈ ಕ್ರೀಡೆಗೂ ಅರ್ಹವಾದ ಮನ್ನಣೆಗೆ ಸಿಗುವಂತೆ ಮಾಡಲಿದೆ. ನಿಮ್ಮ ಪ್ರಯಾಣವು ಭಾರತೀಯ ಫೆನ್ಸಿಂಗ್‌ನಲ್ಲಿ ಹೊಸ ಯುಗಕ್ಕೆ ನಾಂದಿಯಾಡಲಿದೆ. ಈ ಮಹೋನ್ನತ ಸಾಧನೆಗಾಗಿ ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು, ನೀವು ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಎತ್ತರಕ್ಕೆ ಏರುತ್ತಿರಲಿ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಟ್ವೀಟ್ ಮಾಡಿದ್ದಾರೆ.

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?