AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhavani Devi: ಫೆನ್ಸಿಂಗ್​ನಲ್ಲಿ ಭಾರತಕ್ಕೆ ಮೊದಲ ಪದಕ: ಐತಿಹಾಸಿಕ ಸಾಧನೆ ಮಾಡಿದ ಭವಾನಿ ದೇವಿ

Asian Championships 2023: ವಿಶ್ವದ ನಂಬರ್ ಒನ್ ಆಟಗಾರ್ತಿ ಮಿಸಾಕಿ ಎಮುರಾ ಅವರನ್ನು 15-10 ಅಂಕಗಳಿಂದ ಸೋಲಿಸಿ ಭವಾನಿ ದೇವಿ ಸೆಮಿಫೈನಲ್ ಪ್ರವೇಶಿಸಿದ್ದರು.

Bhavani Devi: ಫೆನ್ಸಿಂಗ್​ನಲ್ಲಿ ಭಾರತಕ್ಕೆ ಮೊದಲ ಪದಕ: ಐತಿಹಾಸಿಕ ಸಾಧನೆ ಮಾಡಿದ ಭವಾನಿ ದೇವಿ
Bhavani Devi
TV9 Web
| Edited By: |

Updated on: Jun 19, 2023 | 6:53 PM

Share

Asian Championships 2023: ಚೀನಾದ ವುಕ್ಸಿಯಲ್ಲಿ ನಡೆದ ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್​ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಪೆನ್ಸರ್ ಭವಾನಿ ದೇವಿ (Bhavani Devi) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಮಿಸಾಕಿ ಎಮುರಾ ಅವರನ್ನು ಕ್ವಾರ್ಟರ್‌ಫೈನಲ್‌ನಲ್ಲಿ ಸೋಲಿಸಿ ಭವಾನಿ ದೇವಿ ಫೆನ್ಸಿಂಗ್‌ನಲ್ಲಿ (ಕತ್ತಿ ವರಸೆ) ಭಾರತಕ್ಕೆ ಮೊದಲ ಕಂಚಿನ ಪದಕ ತಂದುಕೊಟ್ಟಿದ್ದಾರೆ. ವಿಶ್ವದ ನಂಬರ್ ಒನ್ ಆಟಗಾರ್ತಿ ಮಿಸಾಕಿ ಎಮುರಾ ಅವರನ್ನು 15-10 ಅಂಕಗಳಿಂದ ಸೋಲಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದ ಭವಾನಿ ದೇವಿ ಸೆಮಿಫೈನಲ್ ಪ್ರವೇಶಿಸಿದ್ದರು.

ಆದರೆ ಸೆಮಿಫೈನಲ್‌ನಲ್ಲಿ ಉಜ್ಬೇಕಿಸ್ತಾನ್‌ನ ಝೈನಾಬ್ ದೈಬೆಕೋವಾ ವಿರುದ್ಧ ಭವಾನಿ 14-15 ಅಂತರದಿಂದ ಸೋಲನುಭವಿಸಿದರು. ಇದಾಗ್ಯೂ ಮೂರನೇ ಸ್ಥಾನ ಪಡೆಯುವ ಮೂಲಕ ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್​ನಲ್ಲಿ ಕಂಚಿನ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ದಾಖಲೆ ಬರೆದರು.

ಈ ಐತಿಹಾಸಿಕ ಸಾಧನೆಯನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಕೊಂಡಾಡಿದ್ದಾರೆ. ವಿಶ್ವದ ನಂಬರ್ 1 ಆಟಗಾರ್ತಿಯನ್ನು ಸೋಲಿಸಿ ಪದಕ ಗೆದ್ದಿರುವುದು ನಿಜಕ್ಕೂ ಶ್ಲಾಘನೀಯ. ಪ್ರತಿಯೊಂದು ಅಂತ್ಯಕ್ಕೂ ಒಂದು ಆರಂಭವಿದೆ. ಟೋಕಿಯೋ 2020 ಒಲಿಂಪಿಕ್ಸ್‌ನಲ್ಲಿ ನಿಮ್ಮ ಅದ್ಭುತ ಸಾಧನೆಗಳು ಮತ್ತು ಆ ದಿನ ನೀವು ತೆಗೆದುಕೊಂಡ ಪ್ರತಿಜ್ಞೆಯು ಭಾರತಕ್ಕಾಗಿ ಫೆನ್ಸಿಂಗ್ ಕ್ರೀಡೆಯಲ್ಲಿ ಕನಸನ್ನು ನನಸಾಗಿಸಲು ಮೆಟ್ಟಿಲುಗಳಾಗಿವೆ.

ನಿಮ್ಮ ಈ ಸಾಧನೆಯು ಸಹ ಕ್ರೀಡಾಪಟುಗಳಿಗೆ ಸ್ಫೂರ್ತಿ ಆಗಲಿದೆ. ಅಲ್ಲದೆ ಈ ಕ್ರೀಡೆಗೂ ಅರ್ಹವಾದ ಮನ್ನಣೆಗೆ ಸಿಗುವಂತೆ ಮಾಡಲಿದೆ. ನಿಮ್ಮ ಪ್ರಯಾಣವು ಭಾರತೀಯ ಫೆನ್ಸಿಂಗ್‌ನಲ್ಲಿ ಹೊಸ ಯುಗಕ್ಕೆ ನಾಂದಿಯಾಡಲಿದೆ. ಈ ಮಹೋನ್ನತ ಸಾಧನೆಗಾಗಿ ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು, ನೀವು ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಎತ್ತರಕ್ಕೆ ಏರುತ್ತಿರಲಿ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಟ್ವೀಟ್ ಮಾಡಿದ್ದಾರೆ.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​