Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhavani Devi: ಫೆನ್ಸಿಂಗ್​ನಲ್ಲಿ ಭಾರತಕ್ಕೆ ಮೊದಲ ಪದಕ: ಐತಿಹಾಸಿಕ ಸಾಧನೆ ಮಾಡಿದ ಭವಾನಿ ದೇವಿ

Asian Championships 2023: ವಿಶ್ವದ ನಂಬರ್ ಒನ್ ಆಟಗಾರ್ತಿ ಮಿಸಾಕಿ ಎಮುರಾ ಅವರನ್ನು 15-10 ಅಂಕಗಳಿಂದ ಸೋಲಿಸಿ ಭವಾನಿ ದೇವಿ ಸೆಮಿಫೈನಲ್ ಪ್ರವೇಶಿಸಿದ್ದರು.

Bhavani Devi: ಫೆನ್ಸಿಂಗ್​ನಲ್ಲಿ ಭಾರತಕ್ಕೆ ಮೊದಲ ಪದಕ: ಐತಿಹಾಸಿಕ ಸಾಧನೆ ಮಾಡಿದ ಭವಾನಿ ದೇವಿ
Bhavani Devi
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 19, 2023 | 6:53 PM

Asian Championships 2023: ಚೀನಾದ ವುಕ್ಸಿಯಲ್ಲಿ ನಡೆದ ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್​ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಪೆನ್ಸರ್ ಭವಾನಿ ದೇವಿ (Bhavani Devi) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಮಿಸಾಕಿ ಎಮುರಾ ಅವರನ್ನು ಕ್ವಾರ್ಟರ್‌ಫೈನಲ್‌ನಲ್ಲಿ ಸೋಲಿಸಿ ಭವಾನಿ ದೇವಿ ಫೆನ್ಸಿಂಗ್‌ನಲ್ಲಿ (ಕತ್ತಿ ವರಸೆ) ಭಾರತಕ್ಕೆ ಮೊದಲ ಕಂಚಿನ ಪದಕ ತಂದುಕೊಟ್ಟಿದ್ದಾರೆ. ವಿಶ್ವದ ನಂಬರ್ ಒನ್ ಆಟಗಾರ್ತಿ ಮಿಸಾಕಿ ಎಮುರಾ ಅವರನ್ನು 15-10 ಅಂಕಗಳಿಂದ ಸೋಲಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದ ಭವಾನಿ ದೇವಿ ಸೆಮಿಫೈನಲ್ ಪ್ರವೇಶಿಸಿದ್ದರು.

ಆದರೆ ಸೆಮಿಫೈನಲ್‌ನಲ್ಲಿ ಉಜ್ಬೇಕಿಸ್ತಾನ್‌ನ ಝೈನಾಬ್ ದೈಬೆಕೋವಾ ವಿರುದ್ಧ ಭವಾನಿ 14-15 ಅಂತರದಿಂದ ಸೋಲನುಭವಿಸಿದರು. ಇದಾಗ್ಯೂ ಮೂರನೇ ಸ್ಥಾನ ಪಡೆಯುವ ಮೂಲಕ ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್​ನಲ್ಲಿ ಕಂಚಿನ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ದಾಖಲೆ ಬರೆದರು.

ಈ ಐತಿಹಾಸಿಕ ಸಾಧನೆಯನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಕೊಂಡಾಡಿದ್ದಾರೆ. ವಿಶ್ವದ ನಂಬರ್ 1 ಆಟಗಾರ್ತಿಯನ್ನು ಸೋಲಿಸಿ ಪದಕ ಗೆದ್ದಿರುವುದು ನಿಜಕ್ಕೂ ಶ್ಲಾಘನೀಯ. ಪ್ರತಿಯೊಂದು ಅಂತ್ಯಕ್ಕೂ ಒಂದು ಆರಂಭವಿದೆ. ಟೋಕಿಯೋ 2020 ಒಲಿಂಪಿಕ್ಸ್‌ನಲ್ಲಿ ನಿಮ್ಮ ಅದ್ಭುತ ಸಾಧನೆಗಳು ಮತ್ತು ಆ ದಿನ ನೀವು ತೆಗೆದುಕೊಂಡ ಪ್ರತಿಜ್ಞೆಯು ಭಾರತಕ್ಕಾಗಿ ಫೆನ್ಸಿಂಗ್ ಕ್ರೀಡೆಯಲ್ಲಿ ಕನಸನ್ನು ನನಸಾಗಿಸಲು ಮೆಟ್ಟಿಲುಗಳಾಗಿವೆ.

ನಿಮ್ಮ ಈ ಸಾಧನೆಯು ಸಹ ಕ್ರೀಡಾಪಟುಗಳಿಗೆ ಸ್ಫೂರ್ತಿ ಆಗಲಿದೆ. ಅಲ್ಲದೆ ಈ ಕ್ರೀಡೆಗೂ ಅರ್ಹವಾದ ಮನ್ನಣೆಗೆ ಸಿಗುವಂತೆ ಮಾಡಲಿದೆ. ನಿಮ್ಮ ಪ್ರಯಾಣವು ಭಾರತೀಯ ಫೆನ್ಸಿಂಗ್‌ನಲ್ಲಿ ಹೊಸ ಯುಗಕ್ಕೆ ನಾಂದಿಯಾಡಲಿದೆ. ಈ ಮಹೋನ್ನತ ಸಾಧನೆಗಾಗಿ ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು, ನೀವು ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಎತ್ತರಕ್ಕೆ ಏರುತ್ತಿರಲಿ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಟ್ವೀಟ್ ಮಾಡಿದ್ದಾರೆ.

ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!