AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಪತ್ನಿಯನ್ನು ಕೆಲವೇ ಪದಗಳಲ್ಲಿ ಬಣ್ಣಿಸಿ ಎಂದ Fanಗೆ ಭುವನೇಶ್ವರ್​ ಹೇಳಿದ್ದೇನು ಗೊತ್ತಾ?

ಟೀಮ್​ ಇಂಡಿಯಾದ ನುರಿತ ಬೌಲರ್​ಗಳಲ್ಲಿ ಭುವನೇಶ್ವರ್​ ಕುಮಾರ್ ಸಹ ಒಬ್ಬರು. ತಮ್ಮ ವೇಗದ ಬೌಲಿಂಗ್​ನಿಂದಲೇ ಎದುರಾಳಿ ತಂಡದ ಬ್ಯಾಟ್ಸ್​ಮನ್​ಗಳಿಗೆ ನಡುಕ ಉಂಟುಮಾಡುವ ಭುವನೇಶ್ವರ್ ಇದೀಗ ತಮ್ಮ ಹಾಸ್ಯ ಸ್ವಭಾವವನ್ನು ಸಹ ತೋರಿಸಿದ್ದಾರೆ. ಭುವನೇಶ್ವರ್ ಇಂದು ಟ್ವಿಟರ್​ನಲ್ಲಿ ತಮ್ಮ ಅಭಿಮಾನಿಗಳಿಗೋಸ್ಕರ ಆನ್​ಲೈನ್​ ಪ್ರಶ್ನೋತ್ತರ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದರು. ಈ ವೇಳೆ ಫ್ಯಾನ್ಸ್​ನಿಂದ ಬಂದ ಗೂಗ್ಲಿ ಪ್ರಶ್ನೆಗಳ ಸುರಿಮಳೆಗೆ ಪ್ರತಿಕ್ರಿಯಿಸುವ ವೇಳೆ ಸ್ವಲ್ಪ ತಮಾಷೆಯಾಗಿಯೇ ಉತ್ತರ ನೀಡಿದ್ದಾರೆ. ಪ್ರಶ್ನೋತ್ತರದ ವೇಳೆ ಅಭಿಮಾನಿಯೊಬ್ಬ ನಿಮ್ಮ ಪತ್ನಿ ನೂಪುರ್​ರನ್ನು ಕೆಲವೇ ಕೆಲವು ಪದಗಳಲ್ಲಿ ಬಣ್ಣಿಸಿ […]

ನಿಮ್ಮ ಪತ್ನಿಯನ್ನು ಕೆಲವೇ ಪದಗಳಲ್ಲಿ ಬಣ್ಣಿಸಿ ಎಂದ Fanಗೆ ಭುವನೇಶ್ವರ್​ ಹೇಳಿದ್ದೇನು ಗೊತ್ತಾ?
KUSHAL V
| Edited By: ಸಾಧು ಶ್ರೀನಾಥ್​|

Updated on:Jul 13, 2020 | 9:58 AM

Share

ಟೀಮ್​ ಇಂಡಿಯಾದ ನುರಿತ ಬೌಲರ್​ಗಳಲ್ಲಿ ಭುವನೇಶ್ವರ್​ ಕುಮಾರ್ ಸಹ ಒಬ್ಬರು. ತಮ್ಮ ವೇಗದ ಬೌಲಿಂಗ್​ನಿಂದಲೇ ಎದುರಾಳಿ ತಂಡದ ಬ್ಯಾಟ್ಸ್​ಮನ್​ಗಳಿಗೆ ನಡುಕ ಉಂಟುಮಾಡುವ ಭುವನೇಶ್ವರ್ ಇದೀಗ ತಮ್ಮ ಹಾಸ್ಯ ಸ್ವಭಾವವನ್ನು ಸಹ ತೋರಿಸಿದ್ದಾರೆ.

ಭುವನೇಶ್ವರ್ ಇಂದು ಟ್ವಿಟರ್​ನಲ್ಲಿ ತಮ್ಮ ಅಭಿಮಾನಿಗಳಿಗೋಸ್ಕರ ಆನ್​ಲೈನ್​ ಪ್ರಶ್ನೋತ್ತರ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದರು. ಈ ವೇಳೆ ಫ್ಯಾನ್ಸ್​ನಿಂದ ಬಂದ ಗೂಗ್ಲಿ ಪ್ರಶ್ನೆಗಳ ಸುರಿಮಳೆಗೆ ಪ್ರತಿಕ್ರಿಯಿಸುವ ವೇಳೆ ಸ್ವಲ್ಪ ತಮಾಷೆಯಾಗಿಯೇ ಉತ್ತರ ನೀಡಿದ್ದಾರೆ.

ಪ್ರಶ್ನೋತ್ತರದ ವೇಳೆ ಅಭಿಮಾನಿಯೊಬ್ಬ ನಿಮ್ಮ ಪತ್ನಿ ನೂಪುರ್​ರನ್ನು ಕೆಲವೇ ಕೆಲವು ಪದಗಳಲ್ಲಿ ಬಣ್ಣಿಸಿ ಎಂದು ಕೇಳಿದ್ದಾನೆ. ಅಭಿಮಾನಿಯ ಪ್ರಶ್ನೆಗೆ ಭುವನೇಶ್ವರ್ ನನ್ನ ಪತ್ನಿ ಅತ್ಯಂತ ಬುದ್ಧಿವಂತೆ, ಬಹುಕಾರ್ಯ ಚತುರೆ ಹಾಗೂ ಆಕೆಗೆ ಶ್ವಾನಗಳೆಂದರೆ ಹುಚ್ಚು ಪ್ರೀತಿ ಎಂದು ತಮ್ಮ ಟ್ವಿಟರ್​ನಲ್ಲಿ ಹೇಳಿಕೊಂಡಿದ್ದಾರೆ. ಜೊತೆಗೆ, ಕೆಲವು ಬಾರಿ ನನ್ನ ಪತ್ನಿ ತನ್ನ ಮುದ್ದಿನ ಶ್ವಾನಗಳಿಗೆ ನನಗಿಂತ ಹೆಚ್ಚು ಆದ್ಯತೆ ನೀಡುತ್ತಾಳೆ ಎಂದು ತಮ್ಮ ಹುಸಿಮುನಿಸನ್ನು ತೋಡಿಕೊಂಡಿದ್ದಾರೆ. ಅಭಿಮಾನಿಯ ಪ್ರಶ್ನೆಗೆ ಭುವನೇಶ್ವರ್​ ಈ ರೀತಿಯಾಗಿ ಪ್ರತಿಕ್ರಿಯೆ ನೀಡುವ ಮೂಲಕ ನಾನೇನು ಮಾಡ್ಲಿ ಸ್ವಾಮಿ ನನ್ನ ಹೆಂಡ್ತಿ ನಾಯಿಪ್ರೇಮಿ ಅಂತಾ ಕೊಂಚ ತಮಾಷೆಯಾಗಿ ಉತ್ತರಿಸಿದ್ದಾರೆ.

ಇದಲ್ಲದೆ, ನಿಮಗೆ ಅಲ್ಲಾದ್ದೀನ್​ ಬಳಿಯಿರುವ ಮ್ಯಾಜಿಕ್​ ದೀಪ ಸಿಕ್ಕರೆ ಅದರ ಜೀನಿ ಹತ್ತಿರ ಯಾವ ಮೂರು ವರಗಳನ್ನ ಕೇಳುವಿರಿ ಅಂತಾ ಮತ್ತೊಬ್ಬ ಫ್ಯಾನ್​ ಪ್ರಶ್ನೆ ಮಾಡಿದ್ದಾನೆ. ಅದಕ್ಕೆ ಭುವನೇಶ್ವರ್​ ನನ್ನ ಮೊದಲ ವರ ಈ ಜಗತ್ತನ್ನು ಕೊರೊನಾ ಪಿಡುಗಿನಿಂದ ಮುಕ್ತಿಗೊಳಿಸೋದು. ಎರಡನೇ ವರವನ್ನ ಕಷ್ಟಕಾಲದಲ್ಲಿ ಬಳಸಿಕೊಳ್ಳಲು ಇಟ್ಟುಕೊಳ್ಳುತ್ತೇನೆ ಹಾಗೂ ಮೂರನೆಯದನ್ನ ಜೀನಿಯನ್ನ ಬಂಧನದಿಂದ ಮುಕ್ತಗೊಳಿಸಲು ಬಳಸಿಕೊಳ್ತೀನಿ ಅಂತಾ ಹೇಳಿಕೊಂಡಿದ್ದಾರೆ. ಒಟ್ನಲ್ಲಿ ಇಂಥದ್ದೇ ತರಲೆ ಪ್ರಶ್ನೆಗಳಿಗೆ ತಮ್ಮ ಹಾಸ್ಯ ಸ್ವಭಾವವನ್ನ ಬಳಸಿಕೊಂಡು ತಮಾಷೆಯಾಗಿ ಉತ್ತರ ನೀಡಿದ್ದಾರೆ.

Published On - 6:19 pm, Sun, 12 July 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ