AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಖಾಸುಮ್ಮನೆ ವದಂತಿ ಹರಡಬೇಡಿ; ಟೆಸ್ಟ್‌ ವೃತ್ತಿ ಬದುಕಿನ ಗಾಳಿಸುದ್ದಿಗೆ ಖಾರವಾಗಿ ಪ್ರತಿಕ್ರಿಯಿಸಿದ ಭುವನೇಶ್ವರ್

ನಿಮಗೊಂದು ಸಲಹೆ; ದಯವಿಟ್ಟು ನಿಮ್ಮ ಊಹೆಗಳನ್ನು ಆಧರಿಸಿ ವರದಿಗಳನ್ನು ಬರೆಯಬೇಡಿ ಎಂದು ಬರೆದುಕೊಂಡಿದ್ದಾರೆ.

ಸುಖಾಸುಮ್ಮನೆ ವದಂತಿ ಹರಡಬೇಡಿ; ಟೆಸ್ಟ್‌ ವೃತ್ತಿ ಬದುಕಿನ ಗಾಳಿಸುದ್ದಿಗೆ ಖಾರವಾಗಿ ಪ್ರತಿಕ್ರಿಯಿಸಿದ ಭುವನೇಶ್ವರ್
ಭುವನೇಶ್ವರ್ ಕುಮಾರ್
ಪೃಥ್ವಿಶಂಕರ
|

Updated on: May 16, 2021 | 2:50 PM

Share

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗಾಗಿ ತಂಡದಲ್ಲಿ ಭುವನೇಶ್ವರ್ ಕುಮಾರ್ ಅವರನ್ನು ಬಿಸಿಸಿಐ ಆಯ್ಕೆ ಮಾಡದ ಕಾರಣ ಹಲವು ವದಂತಿಗಳು ಬರುತ್ತಿವೆ. ಈ ನಿರ್ಧಾರದ ಹಿಂದಿನ ಕಾರಣ ಭುವಿಯ ಫಿಟ್‌ನೆಸ್‌ ಕಾರಣ ಎಂದು ಬಿಸಿಸಿಐ ಉಲ್ಲೇಖಿಸಿದರೆ, ಕೆಲವು ವರದಿಗಳು ಭುವಿ ಇನ್ನು ಮುಂದೆ ಟೆಸ್ಟ್ ಆಡಲು ಬಯಸುವುದಿಲ್ಲ ಮತ್ತು ಅದಕ್ಕಾಗಿಯೇ ಅವರಿಗೆ ಅವಕಾಶ ಸಿಗಲಿಲ್ಲ ಎಂದು ಹೇಳಿದ್ದಾರೆ. ಈಗ ಈ ವಿಷಯದ ಬಗ್ಗೆ ಭುವನೇಶ್ವರ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಎಲ್ಲ ಸಂಗತಿಗಳನ್ನು ತಳ್ಳಿಹಾಕುವ ಮೂಲಕ ಅವರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.

ಭುವಿ ಈಗ ತನ್ನ ಎಲ್ಲ ಗಮನವನ್ನು ಸೀಮಿತ ಓವರ್‌ಗಳ ಸ್ವರೂಪಕ್ಕೆ ಕೇಂದ್ರೀಕರಿಸಲು ಬಯಸುತ್ತಾರೆ ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ ಆಡಲು ಸಿದ್ಧರಿಲ್ಲ ಎಂದು ಗಾಸಿಪ್​ಗಳು ಹರಿದಾಡಿದ್ದವು. ಕೆಲವು ಸಮಯದಿಂದ ಅವರ ಕೆಲಸದ ಡ್ರಿಲ್‌ನಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ ಮತ್ತು ಅವರ ಆಪ್ತರಿಗೆ ಈ ಬಗ್ಗೆ ಚೆನ್ನಾಗಿ ತಿಳಿದಿದೆ. ಇದಲ್ಲದೆ, ಅವರು ದೀರ್ಘಕಾಲದವರೆಗೆ ಟೆಸ್ಟ್ ಕ್ರಿಕೆಟ್‌ನಿಂದ ಹೊರಗುಳಿದಿದ್ದಾರೆ ಮತ್ತು ವೈಟ್ ಬಾಲ್ ಕ್ರಿಕೆಟ್‌ನ ಮೆಲೆ ಹೆಚ್ಚು ಗಮನ ಹರಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಭುವಿ ಈ ಎಲ್ಲಾ ಗಾಸಿಪ್​ಗಳಿಗೆ ತೆರೆ ಎಳಿದಿದ್ದು ನನಗೆ ಟೆಸ್ಟ್ ಕ್ರಿಕೆಟ್ ಬಿಡುವ ಯಾವುದೇ ಆಲೋಚನೆ ಇಲ್ಲ ಎಂದು ಹೇಳಿದ್ದಾರೆ.

ಭುವಿ ಟ್ವೀಟ್ ಮಾಡುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಸ್ಪಷ್ಟೀಕರಣ ನೀಡಿ ಭುವಿ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‌ನಲ್ಲಿ ಜನರು ತಮ್ಮ ಬಗ್ಗೆ ತಪ್ಪು ಸಂದೇಶಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಬರೆಯುತ್ತಿದ್ದಾರೆ. ಈಗಾಗಲೇ ಇಂತಹ ಅನೇಕ ಲೇಖನಗಳನ್ನು ಬರೆಯಲಾಗಿದೆ, ಅದರಲ್ಲಿ ನಾನು ಇನ್ನು ಮುಂದೆ ಟೆಸ್ಟ್ ಕ್ರಿಕೆಟ್ ಆಡಲು ಬಯಸುವುದಿಲ್ಲ ಎಂದು ಹೇಳಲಾಗಿದೆ. ಆದರೆ ಎಲ್ಲಾ ಮೂರು ಸ್ವರೂಪಗಳಿಗೆ ನಾನು ನನ್ನನ್ನು ಸಿದ್ಧಪಡಿಸುತ್ತೇನೆ ಮತ್ತು ಅದನ್ನು ಮುಂದುವರಿಸುತ್ತೇನೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ನಿಮಗೊಂದು ಸಲಹೆ; ದಯವಿಟ್ಟು ನಿಮ್ಮ ಊಹೆಗಳನ್ನು ಆಧರಿಸಿ ವರದಿಗಳನ್ನು ಬರೆಯಬೇಡಿ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿ ಕೂಡ ಚರ್ಚೆಗೆ ಗ್ರಾಸವಾಗಿತ್ತು. ಏಕೆಂದರೆ ಭುವಿ ಭಾರತಕ್ಕಾಗಿ ಜೋಹಾನ್ಸ್‌ಬರ್ಗ್‌ನಲ್ಲಿ 2018 ರಲ್ಲಿ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಇದರ ನಂತರ ಅವರಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅವಕಾಶ ಸಿಗಲಿಲ್ಲ, ಜೊತೆಗೆ ಶಸ್ತ್ರಚಿಕಿತ್ಸೆಯ ನಂತರ ಇದು ಅವರ ಫಿಟ್‌ನೆಸ್‌ ಮೇಲೂ ಪರಿಣಾಮ ಬೀರಿತು.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!