AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಅರುಣ್ ಜೇಟ್ಲಿ ಪ್ರತಿಮೆ; ಸ್ಪಿನ್ ಮಾಂತ್ರಿಕ ಬಿಶನ್ ಸಿಂಗ್ ಬೇಡಿಗೆ ಬೇಸರ, ಕಾರಣವೇನು?

ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್‌ನ (ಡಿಡಿಸಿಎ) ಸಂಸ್ಕೃತಿಯನ್ನು ಖಂಡಿಸಿರುವ ಬಿಶನ್ ಸಿಂಗ್ ಬೇಡಿ, ಡಿಡಿಸಿಎ ಸ್ವಜನಪಕ್ಷಪಾತವನ್ನು ಉತ್ತೇಜಿಸುತ್ತಿದೆ ಜೊತೆಗೆ ನಿರ್ವಾಹಕರನ್ನು ಕ್ರಿಕೆಟಿಗರಿಗಿಂತ ಮುಂದಿಡುತ್ತಿದೆ ಎಂದು ಆರೋಪಿಸಿದ್ದಾರೆ.

ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಅರುಣ್ ಜೇಟ್ಲಿ ಪ್ರತಿಮೆ; ಸ್ಪಿನ್ ಮಾಂತ್ರಿಕ ಬಿಶನ್ ಸಿಂಗ್ ಬೇಡಿಗೆ ಬೇಸರ, ಕಾರಣವೇನು?
ಬಿಶನ್ ಸಿಂಗ್ ಬೇಡಿ ಮತ್ತು ಅರುಣ್ ಜೇಟ್ಲಿ
ಪೃಥ್ವಿಶಂಕರ
|

Updated on: Dec 23, 2020 | 1:39 PM

Share

ನವದೆಹಲಿ: ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ದಿವಂಗತ ಮಾಜಿ ಅಧ್ಯಕ್ಷ ಅರುಣ್ ಜೇಟ್ಲಿಯ ಪ್ರತಿಮೆ ಸ್ಥಾಪನೆಗೆ ಡಿಡಿಸಿಎ ವಿರುದ್ಧ ಸ್ಪಿನ್ ದಂತಕಥೆ ಬಿಶನ್ ಸಿಂಗ್ ಬೇಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ.. ಕೋಟ್ಲಾ ಮೈದಾನದಲ್ಲಿ 2017 ರಲ್ಲಿ ಪ್ರೇಕ್ಷಕರ ಸ್ಟಾಂಡ್​ಗೆ ತಮ್ಮ ಹೆಸರಿಡಲಾಗಿದ್ದು, ಅದನ್ನು ತೆಗೆದುಹಾಕುವಂತೆ ಸೂಚಿಸಿದ್ದಾರೆ.

DDCA ಸದಸ್ಯತ್ವವನ್ನೂ ತ್ಯಜಿಸುವೆ ಬಿಡಿ ಎಂದ ಬೇಡಿ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್‌ನ (ಡಿಡಿಸಿಎ) ಸಂಸ್ಕೃತಿಯನ್ನು ಖಂಡಿಸಿರುವ ಬಿಶನ್ ಸಿಂಗ್ ಬೇಡಿ, ಡಿಡಿಸಿಎ ಸ್ವಜನ ಪಕ್ಷಪಾತವನ್ನು ಉತ್ತೇಜಿಸುತ್ತಿದೆ. ಜೊತೆಗೆ ಆಡಳಿತ ನಿರ್ವಾಹಕರನ್ನು ಆಟಗಾರರಿಗಿಂತ ಹೆಚ್ಚು ಎಂದು ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ನನ್ನ ಡಿಡಿಸಿಎ ಸದಸ್ಯತ್ವವನ್ನೂ ನಾನು ತ್ಯಜಿಸುತ್ತೇನೆ ಎಂದು ಬೇಡಿ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

ತಾನು ಎಂದಿಗೂ ಅರುಣ್ ಜೇಟ್ಲಿ ಕಾರ್ಯಶೈಲಿಯ ಅಭಿಮಾನಿಯಲ್ಲ ಬೇಡಿ ಇನ್ನೂ ಮುಂದುವರೆದು, ತನ್ನ ನಿರ್ಧಾರವನ್ನು ಸಂದರ್ಭಕ್ಕೆ ತಕ್ಕಂತೆ ಹೇಳುವುದಾದರೆ.. ತಾನು ಎಂದಿಗೂ ಅರುಣ್ ಜೇಟ್ಲಿ ಕಾರ್ಯಶೈಲಿಯ ಅಭಿಮಾನಿಯಲ್ಲ ಮತ್ತು ನನಗೆ ಒಪ್ಪದ ಯಾವುದೇ ನಿರ್ಧಾರವನ್ನು ನಾನು ಯಾವಾಗಲೂ ವಿರೋಧಿಸುತ್ತೇನೆ ಎಂದಿದ್ದಾರೆ.

ದಿವಂಗತ ಅರುಣ್ ಜೇಟ್ಲಿ 1999 ರಿಂದ 2013 ರವರೆಗೆ ಅಂದರೆ 14 ವರ್ಷಗಳ ಕಾಲ ಡಿಡಿಸಿಎ ಅಧ್ಯಕ್ಷರಾಗಿದ್ದರು. ಅವರ ಸ್ಮರಣೆಯನ್ನು ಗೌರವಿಸಲು ಕೋಟ್ಲಾದಲ್ಲಿ ಆರು ಅಡಿ ಪ್ರತಿಮೆಯನ್ನು ಸ್ಥಾಪಿಸಲು ಡಿಡಿಸಿಎ ಯೋಜಿಸಿದೆ. ಈ ತೀರ್ಮಾನದಿಂದ ಕೋಪಗೊಂಡಿರುವ ಬಿಶನ್ ಸಿಂಗ್ ಬೇಡಿ ಪ್ರೇಕ್ಷಕರ ಗ್ಯಾಲರಿಯಲ್ಲಿರುವ ತಮ್ಮ ಹೆಸರನ್ನು ತೆಗೆಯುವಂತೆ ಡಿಡಿಸಿಎಗೆ ಇದೀಗ ಮನವಿ ಮಾಡಿದ್ದಾರೆ.

ಅರುಣ್ ಜೇಟ್ಲಿ ಮೈದಾನ ಉದಯ, ಭಾವುಕ ಪತ್ನಿ ಕಣ್ಣೀರು

ಫಿರೋಜ್ ಷಾ ಕೋಟ್ಲಾ ಇನ್ನು ಅರುಣ್ ಜೇಟ್ಲಿ ಸ್ಟೇಡಿಯಂ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ