AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಫುಟ್ಬಾಲ್ ಕ್ರೀಡಾಂಗಣದ ಬಳಿ ಬಾಂಬ್ ಸ್ಫೋಟ! ಪಂದ್ಯ ನಡೆಯುತ್ತಿರುವಾಗಲೇ ಸಂಭವಿಸಿದ ದುರ್ಘಟನೆ

Breaking news: ಪಾಕಿಸ್ತಾನದ ಫುಟ್ಬಾಲ್ ಕ್ರೀಡಾಂಗಣದ ಹೊರಗೆ ಬಾಂಬ್ ಸ್ಫೋಟಗೊಂಡಿದ್ದು, ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ.

ಪಾಕಿಸ್ತಾನದ ಫುಟ್ಬಾಲ್ ಕ್ರೀಡಾಂಗಣದ ಬಳಿ ಬಾಂಬ್ ಸ್ಫೋಟ! ಪಂದ್ಯ ನಡೆಯುತ್ತಿರುವಾಗಲೇ ಸಂಭವಿಸಿದ ದುರ್ಘಟನೆ
ಗ್ರೆನೇಡ್ ಸ್ಫೋಟ
TV9 Web
| Edited By: |

Updated on:Jul 31, 2022 | 4:06 PM

Share

ಪಾಕಿಸ್ತಾನದ ಫುಟ್ಬಾಲ್ ಕ್ರೀಡಾಂಗಣದ (football stadium) ಹೊರಗೆ ಬಾಂಬ್ ಸ್ಫೋಟಗೊಂಡಿದ್ದು, ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ (bomb exploded). ಪಾಕಿಸ್ತಾನದ ಪತ್ರಿಕೆ ಡಾನ್ ವರದಿ ಪ್ರಕಾರ, ಪಂದ್ಯವನ್ನು ದಕ್ಷಿಣದ ಅರೆಸೈನಿಕ ಪಡೆ ಫ್ರಾಂಟಿಯರ್ ಕಾರ್ಪ್ಸ್ ಆಯೋಜಿಸಿತ್ತು. ಆಯೋಜಕರ ಪ್ರಕಾರ, ಸ್ಫೋಟದಲ್ಲಿ ಯಾವುದೇ ಆಟಗಾರನಿಗೆ ಗಾಯವಾಗಿಲ್ಲ. ಆದರೆ, ಘಟನೆಯಲ್ಲಿ ಓರ್ವ ಪೊಲೀಸ್ ಸೇರಿದಂತೆ 3 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಫುಟ್ಬಾಲ್ ಕ್ರೀಡಾಂಗಣದ ಹೊರಗೆ ಶನಿವಾರ ಬಾಂಬ್ ದಾಳಿ ನಡೆದಿದೆ.

ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದಾಗ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಬ್ ಸ್ಪೋಟದಿಂದಾಗಿ ಸುತ್ತಮುತ್ತಲೆಲ್ಲಾ ಭೀತಿ ಆವರಿಸಿದೆ. ಪಂದ್ಯ ವೀಕ್ಷಿಸಲು ಬಂದಿದ್ದ ಪ್ರೇಕ್ಷಕರು ಹಾಗೂ ಆಟಗಾರರು ಭಯಭೀತರಾಗಿದ್ದರು. ಘಟನೆಯ ನಂತರ ಪ್ರೇಕ್ಷಕರನ್ನು ಕ್ರೀಡಾಂಗಣದಿಂದ ಹೊರಗೆ ಕರೆದೊಯ್ಯಲಾಗಿದೆ. ಈ ಘಟನೆಯಲ್ಲಿ ಗಾಯಗೊಂಡ ಮೂವರಲ್ಲಿ ಕ್ರೀಡಾಂಗಣದ ಗೇಟ್‌ನಲ್ಲಿದ್ದ ಒಬ್ಬ ಪೊಲೀಸ್ ಸಹ ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನಕ್ಕೂ ಮುನ್ನ ಅಫ್ಘಾನಿಸ್ತಾನದಲ್ಲೂ ಸ್ಫೋಟ

ಮೂರು ದಿನಗಳ ಹಿಂದೆ ಕಾಬೂಲ್‌ನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಶಪಗಿಜಾ ಕ್ರಿಕೆಟ್ ಲೀಗ್ ಪಂದ್ಯದ ವೇಳೆ ಇದೇ ರೀತಿಯ ಬಾಂಬ್ ಸ್ಫೋಟದ ಸುದ್ದಿ ಬಂದಿತ್ತು. ಅಫ್ಘಾನಿಸ್ತಾನದ ಮಾಧ್ಯಮಗಳ ವರದಿಯ ಪ್ರಕಾರ, ಒಬ್ಬ ಭಯೋತ್ಪಾದಕ ಅಲ್ಲಿ ನೆರೆದಿದ್ದ ಸಭಿಕರ ಜೊತೆ ಸೇರಿಕೊಂಡು, ತಾನು ಕಟ್ಟಿಕೊಂಡಿದ್ದ ಬಾಂಬ್‌ನಿಂದ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದ ಇದು ಕಾಲ್ತುಳಿತಕ್ಕೆ ಕಾರಣವಾಯಿತು. ಅಪಘಾತ ಸಂಭವಿಸಿದಾಗ ಆ ಲೀಗ್‌ನಲ್ಲಿ ಪಾಕಿಸ್ತಾನಿ ಆಟಗಾರರ ಉಪಸ್ಥಿತಿಯೂ ಕ್ರೀಡಾಂಗಣದಲ್ಲಿತ್ತು.

Published On - 3:41 pm, Sun, 31 July 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ