AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಫುಟ್ಬಾಲ್ ಕ್ರೀಡಾಂಗಣದ ಬಳಿ ಬಾಂಬ್ ಸ್ಫೋಟ! ಪಂದ್ಯ ನಡೆಯುತ್ತಿರುವಾಗಲೇ ಸಂಭವಿಸಿದ ದುರ್ಘಟನೆ

Breaking news: ಪಾಕಿಸ್ತಾನದ ಫುಟ್ಬಾಲ್ ಕ್ರೀಡಾಂಗಣದ ಹೊರಗೆ ಬಾಂಬ್ ಸ್ಫೋಟಗೊಂಡಿದ್ದು, ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ.

ಪಾಕಿಸ್ತಾನದ ಫುಟ್ಬಾಲ್ ಕ್ರೀಡಾಂಗಣದ ಬಳಿ ಬಾಂಬ್ ಸ್ಫೋಟ! ಪಂದ್ಯ ನಡೆಯುತ್ತಿರುವಾಗಲೇ ಸಂಭವಿಸಿದ ದುರ್ಘಟನೆ
ಗ್ರೆನೇಡ್ ಸ್ಫೋಟ
TV9 Web
| Edited By: |

Updated on:Jul 31, 2022 | 4:06 PM

Share

ಪಾಕಿಸ್ತಾನದ ಫುಟ್ಬಾಲ್ ಕ್ರೀಡಾಂಗಣದ (football stadium) ಹೊರಗೆ ಬಾಂಬ್ ಸ್ಫೋಟಗೊಂಡಿದ್ದು, ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ (bomb exploded). ಪಾಕಿಸ್ತಾನದ ಪತ್ರಿಕೆ ಡಾನ್ ವರದಿ ಪ್ರಕಾರ, ಪಂದ್ಯವನ್ನು ದಕ್ಷಿಣದ ಅರೆಸೈನಿಕ ಪಡೆ ಫ್ರಾಂಟಿಯರ್ ಕಾರ್ಪ್ಸ್ ಆಯೋಜಿಸಿತ್ತು. ಆಯೋಜಕರ ಪ್ರಕಾರ, ಸ್ಫೋಟದಲ್ಲಿ ಯಾವುದೇ ಆಟಗಾರನಿಗೆ ಗಾಯವಾಗಿಲ್ಲ. ಆದರೆ, ಘಟನೆಯಲ್ಲಿ ಓರ್ವ ಪೊಲೀಸ್ ಸೇರಿದಂತೆ 3 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಫುಟ್ಬಾಲ್ ಕ್ರೀಡಾಂಗಣದ ಹೊರಗೆ ಶನಿವಾರ ಬಾಂಬ್ ದಾಳಿ ನಡೆದಿದೆ.

ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದಾಗ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಬ್ ಸ್ಪೋಟದಿಂದಾಗಿ ಸುತ್ತಮುತ್ತಲೆಲ್ಲಾ ಭೀತಿ ಆವರಿಸಿದೆ. ಪಂದ್ಯ ವೀಕ್ಷಿಸಲು ಬಂದಿದ್ದ ಪ್ರೇಕ್ಷಕರು ಹಾಗೂ ಆಟಗಾರರು ಭಯಭೀತರಾಗಿದ್ದರು. ಘಟನೆಯ ನಂತರ ಪ್ರೇಕ್ಷಕರನ್ನು ಕ್ರೀಡಾಂಗಣದಿಂದ ಹೊರಗೆ ಕರೆದೊಯ್ಯಲಾಗಿದೆ. ಈ ಘಟನೆಯಲ್ಲಿ ಗಾಯಗೊಂಡ ಮೂವರಲ್ಲಿ ಕ್ರೀಡಾಂಗಣದ ಗೇಟ್‌ನಲ್ಲಿದ್ದ ಒಬ್ಬ ಪೊಲೀಸ್ ಸಹ ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನಕ್ಕೂ ಮುನ್ನ ಅಫ್ಘಾನಿಸ್ತಾನದಲ್ಲೂ ಸ್ಫೋಟ

ಮೂರು ದಿನಗಳ ಹಿಂದೆ ಕಾಬೂಲ್‌ನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಶಪಗಿಜಾ ಕ್ರಿಕೆಟ್ ಲೀಗ್ ಪಂದ್ಯದ ವೇಳೆ ಇದೇ ರೀತಿಯ ಬಾಂಬ್ ಸ್ಫೋಟದ ಸುದ್ದಿ ಬಂದಿತ್ತು. ಅಫ್ಘಾನಿಸ್ತಾನದ ಮಾಧ್ಯಮಗಳ ವರದಿಯ ಪ್ರಕಾರ, ಒಬ್ಬ ಭಯೋತ್ಪಾದಕ ಅಲ್ಲಿ ನೆರೆದಿದ್ದ ಸಭಿಕರ ಜೊತೆ ಸೇರಿಕೊಂಡು, ತಾನು ಕಟ್ಟಿಕೊಂಡಿದ್ದ ಬಾಂಬ್‌ನಿಂದ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದ ಇದು ಕಾಲ್ತುಳಿತಕ್ಕೆ ಕಾರಣವಾಯಿತು. ಅಪಘಾತ ಸಂಭವಿಸಿದಾಗ ಆ ಲೀಗ್‌ನಲ್ಲಿ ಪಾಕಿಸ್ತಾನಿ ಆಟಗಾರರ ಉಪಸ್ಥಿತಿಯೂ ಕ್ರೀಡಾಂಗಣದಲ್ಲಿತ್ತು.

Published On - 3:41 pm, Sun, 31 July 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ