AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WFIನ ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆ: ನಾನು ಕುಸ್ತಿಯನ್ನು ತ್ಯಜಿಸುತ್ತೇನೆ ಎಂದ ಸಾಕ್ಷಿ ಮಲಿಕ್

ನೂತನ ಡಬ್ಲ್ಯುಎಫ್‌ಐ ಅಧ್ಯಕ್ಷರಾದ ಸಂಜಯ್ ಸಿಂಗ್ ಅವರು ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರ ಆಪ್ತರಾಗಿದ್ದು, ಈ ಕಾರಣದಿಂದಲ್ಲೇ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕುಸ್ತಿಯನ್ನು ತ್ಯಜಿಸುವುದಾಗಿ ಹೇಳಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಸಂಜಯ್ ಸಿಂಗ್ 47 ಮತಗಳಲ್ಲಿ 40 ಮತಗಳನ್ನು ಗಳಿಸಿದರು. ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆಯೊರನ್ ಅವರು ಕೇವಲ ಏಳು ಮತಗಳನ್ನು ಪಡೆದಿದ್ದಾರೆ.

WFIನ ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆ: ನಾನು ಕುಸ್ತಿಯನ್ನು ತ್ಯಜಿಸುತ್ತೇನೆ ಎಂದ ಸಾಕ್ಷಿ ಮಲಿಕ್
ಸಾಕ್ಷಿ ಮಲ್ಲಿಕ್
ಅಕ್ಷಯ್​ ಪಲ್ಲಮಜಲು​​
|

Updated on:Dec 21, 2023 | 6:09 PM

Share

ಭಾರತೀಯ ಕುಸ್ತಿ ಫೆಡರೇಷನ್ (WFI) ಚುನಾವಣೆಗೆ ಇಂದು (ಗುರುವಾರ) ಮತದಾನ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಸಂಜಯ್ ಸಿಂಗ್ ಆಯ್ಕೆ ಆಗಿದ್ದಾರೆ. ಈ ಹಿಂದೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದು ವಿವಾದಕ್ಕೀಡಾಗಿದ್ದ ಡಬ್ಲ್ಯುಎಫ್‌ಐನ ನಿರ್ಗಮಿತ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ಅವರ ಆಪ್ತರಾಗಿದ್ದ ಸಂಜಯ್ ಸಿಂಗ್ ಡಬ್ಲ್ಯುಎಫ್‌ಐ ಅಧ್ಯಕ್ಷರಾದ ಬೆನ್ನಲ್ಲೇ ಒಲಿಂಪಿಕ್ ಪದಕ ವಿಜೇತೆ ಮತ್ತು ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕುಸ್ತಿಯನ್ನು ತ್ಯಜಿಸುವುದಾಗಿ ಘೋಷಿಸಿದ್ದಾರೆ. ನೂತನ ಡಬ್ಲ್ಯುಎಫ್‌ಐ ಅಧ್ಯಕ್ಷರಾದ ಸಂಜಯ್ ಸಿಂಗ್ ಅವರು ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರ ಆಪ್ತರಾಗಿದ್ದು, ಈ ಕಾರಣದಿಂದಲ್ಲೇ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕುಸ್ತಿಯನ್ನು ತ್ಯಜಿಸುವುದಾಗಿ ಹೇಳಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಸಂಜಯ್ ಸಿಂಗ್ 47 ಮತಗಳಲ್ಲಿ 40 ಮತಗಳನ್ನು ಗಳಿಸಿದರು. ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆಯೊರನ್ ಅವರು ಕೇವಲ ಏಳು ಮತಗಳನ್ನು ಪಡೆದಿದ್ದಾರೆ.

ಈ ಫಲಿತಾಂಶ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರಿಗೆ ನಿರಾಸೆಯನ್ನು ತಂದಿದೆ. ಈ ಬಗ್ಗೆ ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ “ಸಂಜಯ್ ಸಿಂಗ್ ಫೆಡರೇಶನ್‌ನ ಮುಖ್ಯಸ್ಥರಾಗಿ ಆಯ್ಕೆಯಾದ ನಂತರ, ಮಹಿಳಾ ಕುಸ್ತಿಪಟುಗಳು ಕಿರುಕುಳವನ್ನು ಎದುರಿಸುತ್ತಲೇ ಇರುತ್ತಾರೆ. ಇಲ್ಲಿ ನಮಗೆ ನ್ಯಾಯ ಹೇಗೆ? ಮತ್ತು ಅದನ್ನು ಹೇಗೆ ಪಡೆದುಕೊಳ್ಳುವುದು ಎಂದು ಗೊತ್ತಾಗುತ್ತಿಲ್ಲ. ಈ ಘಟನೆಯಿಂದ ನಮ್ಮ ಕುಸ್ತಿ ವೃತ್ತಿಜೀವನದ ಭವಿಷ್ಯವು ಕತ್ತಲೆಯಲ್ಲಿದೆ. ಎಲ್ಲಿಗೆ ಹೋಗಬೇಕೆಂದು ನಮಗೆ ತಿಳಿದಿಲ್ಲ” ಎಂದು ಹೇಳಿದ್ದಾರೆ.

“ಸರ್ಕಾರವು ನಮಗೆ ನೀಡಿದ ಭರವಸೆಯನ್ನು ಈಡೇರಿಸದಿರುವುದು ದುರದೃಷ್ಟಕರ, ನಾವು ಯಾವುದೇ ಪಕ್ಷದೊಂದಿಗೆ ನಂಟು ಹೊಂದಿಲ್ಲ, ನಾವು ರಾಜಕೀಯಕ್ಕಾಗಿ ಇಲ್ಲಿಗೆ ಬಂದಿಲ್ಲ, ನಾವು ಸತ್ಯಕ್ಕಾಗಿ ಹೋರಾಡುತ್ತಿದ್ದೆವು, ಆದರೆ ಇಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಸಹಾಯಕ WFI ಅಧ್ಯಕ್ಷರಾಗಿದ್ದಾರೆ.” ಎಂದು ಮಾಧ್ಯಮಗಳೊಂದಿಗೆ ಒಲಂಪಿಕ್ ಕಂಚಿನ ಪದಕ ವಿಜೇತ ಪುನಿಯಾ ಹೇಳಿದ್ದಾರೆ.

ಕುಸ್ತಿ ಸಂಸ್ಥೆಯು ಮಹಿಳಾ ಮುಖ್ಯಸ್ಥರನ್ನು ಪಡೆಯಬೇಕೆಂಬ ಆಸೆ ಇತ್ತು, ಆದರೆ ಅದು ನಡೆಯಲಿಲ್ಲ. ಇದಕ್ಕಾಗಿ ನಾವು ಹೋರಾಟ ಮಾಡಿದ್ದೇವು ಆದರೆ ಇಂದು ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಆಪ್ತರೇ ಅಧ್ಯಕ್ಷರಾಗಿದ್ದಾರೆ. ನಾನು ಕುಸ್ತಿಯನ್ನು ತ್ಯಜಿಸುತ್ತೇನೆ ಎಂದು ಹೇಳಿ ಸಾಕ್ಷಿ ಮಲಿಕ್ ತುಂಬಾ ನೋವಿನಿಂದಲ್ಲೇ ತನ್ನ ಬೂಟುಗಳನ್ನು ಮೇಜಿನ ಮೇಲೆ ಇಟ್ಟರು.

ಇದನ್ನೂ ಓದಿ: ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆ

ಜಂತರ್ ಮಂತರ್‌ನಲ್ಲಿ ಈ ಆರೋಪಕ್ಕೆ ಸಂಬಂಧಿಸಿದಂತೆ ಭಾರೀ ದೊಡ್ಡ ಮಟ್ಟದಲ್ಲಿ ಹಲವು ಕುಸ್ತಿಪಟು ಪ್ರತಿಭಟನೆಯನ್ನು ನಡೆಸಿದ್ದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವಾರು ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಈ ಪ್ರತಿಭಟನೆಯನ್ನು ನಡೆಸಲಾಗಿತ್ತು. ಸರ್ಕಾರದ ಅವರ ಮೇಲೆ ತನಿಖೆಗೆ ಆದೇಶದ ನಂತರ ಈ ಪ್ರತಿಭಟನೆಯನ್ನು ಹಿಂಪಡೆದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಯಾವುದೇ ಸಹಾಯಕ ಅಥವಾ ಸಂಬಂಧಿ ಕುಸ್ತಿ ಸಂಸ್ಥೆಯ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂದು ಕುಸ್ತಿಪಟುಗಳಿಗೆ ಭರವಸೆ ನೀಡಲಾಯಿತು. ಬ್ರಿಜ್ ಭೂಷಣ್ ಅವರ ಪುತ್ರ ಪ್ರತೀಕ್ ಮತ್ತು ಅಳಿಯ ವಿಶಾಲ್ ಸಿಂಗ್ ಚುನಾವಣಾ ಸ್ಪರ್ಧೆಗೆ ಮಾಡುವ ಸಾಧ್ಯತೆಗಳು ಇತ್ತು. ಆದರೆ ಅವರ ಸಹಾಯಕ ಸಂಜಯ್ ಸಿಂಗ್ ಅವರು ಅಧ್ಯಕ್ಷರಾಗಿದ್ದಾರೆ.

ಸಂಜಯ್ ಸಿಂಗ್ ಈ ಹಿಂದೆ ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅವರು WFI ಯ ಕೊನೆಯ ಕಾರ್ಯಕಾರಿ ಮಂಡಳಿಯಲ್ಲಿ ಹಾಗೂ 2019 ರಿಂದ ಅದರ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನು ಚುನಾವಣೆಯಲ್ಲಿ ಗೆದ್ದ ನಂತರ ಇದು ಸುಳ್ಳಿನ ಮೇಲೆ ಸತ್ಯದ ಗೆಲುವು ಎಂದು ಸಂಜಯ್ ಸಿಂಗ್ ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:07 pm, Thu, 21 December 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್