AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಗಾಪುರ್ ಓಪನ್ ರದ್ದು; ಸ್ಟಾರ್ ಶಟ್ಲರ್ ಸೈನಾ ನೆಹ್ವಾಲ್, ಕಿಡಾಂಬಿ ಶ್ರೀಕಾಂತ್ ಟೋಕಿಯೊ ಒಲಿಂಪಿಕ್​ ಕನಸಿಗೆ ಹಿನ್ನೆಡೆ

ಎಲ್ಲಾ ಆಟಗಾರರು, ಪಂದ್ಯಾವಳಿ ಸಿಬ್ಬಂದಿ ಮತ್ತು ಸ್ಥಳೀಯ ಸಮುದಾಯದ ಆರೋಗ್ಯ ಮತ್ತು ಸುರಕ್ಷತೆಗೆ ಸಂಬಂಧಿಸಿದ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಪಂದ್ಯಾವಳಿಯನ್ನು ರದ್ದುಪಡಿಸಲಾಗಿದೆ ಎಂದು ಬಿಡಬ್ಲ್ಯೂಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಸಿಂಗಾಪುರ್ ಓಪನ್ ರದ್ದು; ಸ್ಟಾರ್ ಶಟ್ಲರ್ ಸೈನಾ ನೆಹ್ವಾಲ್, ಕಿಡಾಂಬಿ ಶ್ರೀಕಾಂತ್ ಟೋಕಿಯೊ ಒಲಿಂಪಿಕ್​ ಕನಸಿಗೆ ಹಿನ್ನೆಡೆ
ಸೈನಾ ನೆಹ್ವಾಲ್
ಪೃಥ್ವಿಶಂಕರ
|

Updated on: May 12, 2021 | 8:36 PM

Share

ಈ ವರ್ಷದ ಟೋಕಿಯೊ ಒಲಿಂಪಿಕ್​ಗೆ ಭಾರತದ ಸ್ಟಾರ್ ಶಟ್ಲರ್ ಸೈನಾ ನೆಹ್ವಾಲ್ ಮತ್ತು ಪುರುಷ ಆಟಗಾರ ಕಿಡಾಂಬಿ ಶ್ರೀಕಾಂತ್ ಅವರು ಕ್ರೀಡಾಕೂಟಕ್ಕೆ ಅರ್ಹತೆ ಪಡೆಯುವ ಭರವಸೆಗೆ ದೊಡ್ಡ ಹಿನ್ನೆಡೆಯಾಗಿದೆ. ಬಿಡಬ್ಲ್ಯುಎಫ್‌ನ ಈ ನಿರ್ಧಾರದ ನಂತರ, ಇಬ್ಬರೂ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ಭರವಸೆಯು ಬಹುತೇಕ ಮಾಯವಾಗಿದೆ. ಕೊರೊನಾ ವೈರಸ್‌ಗೆ ಸಂಬಂಧಿಸಿದ ಪ್ರಯಾಣದ ನಿರ್ಬಂಧದಿಂದಾಗಿ ಸಿಂಗಾಪುರದಲ್ಲಿ ಒಲಿಂಪಿಕ್ಸ್‌ನ ಅಂತಿಮ ಅರ್ಹತಾ ಪಂದ್ಯಾವಳಿಯನ್ನು ಬಿಡಬ್ಲ್ಯೂಎಫ್ ಬುಧವಾರ ರದ್ದುಗೊಳಿಸಿದೆ. ಜೂನ್ 1ರಿಂದ6 ನಡೆಯಬೇಕಿದ್ದ ಸಿಂಗಾಪುರ್ ಓಪನ್ ಅನ್ನು ರದ್ದುಗೊಳಿಸಲು ಸಿಂಗಾಪುರ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ​​(ಎಸ್‌ಬಿಎ) ಮತ್ತು ಪಂದ್ಯಾವಳಿಯ ಸಂಘಟಕರಾದ ಬಿಡಬ್ಲ್ಯೂಎಫ್ ಜಂಟಿಯಾಗಿ ಒಪ್ಪಿಕೊಂಡಿವೆ.

BWF ವಿಶ್ವ ಪ್ರವಾಸದ ಸೂಪರ್ 500 ಪಂದ್ಯಾವಳಿ ಸಿಂಗಾಪುರ್ ಓಪನ್, ಒಲಿಂಪಿಕ್​ಗೆ ಅರ್ಹತೆ ಪಡೆಯಲು ಕೊನೆಯ ಪಂದ್ಯಾವಳಿ ಆಗಿದೆ. ಟೋಕಿಯೊ ಒಲಿಂಪಿಕ್ ಅರ್ಹತಾ ಬಗ್ಗೆ ಹೇಳಿಕೆ ನೀಡುವುದಾಗಿ ಬಿಡಬ್ಲ್ಯೂಎಫ್ ಹೇಳಿದೆ. ಎಲ್ಲಾ ಆಟಗಾರರು, ಪಂದ್ಯಾವಳಿ ಸಿಬ್ಬಂದಿ ಮತ್ತು ಸ್ಥಳೀಯ ಸಮುದಾಯದ ಆರೋಗ್ಯ ಮತ್ತು ಸುರಕ್ಷತೆಗೆ ಸಂಬಂಧಿಸಿದ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಪಂದ್ಯಾವಳಿಯನ್ನು ರದ್ದುಪಡಿಸಲಾಗಿದೆ ಎಂದು ಬಿಡಬ್ಲ್ಯೂಎಫ್ ಹೇಳಿಕೆಯಲ್ಲಿ ತಿಳಿಸಿದೆ. ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಡಬ್ಲ್ಯೂಎಫ್ ಖಚಿತಪಡಿಸಿದೆ.

ಸಂಘಟಿಸಲು ಪ್ರಯತ್ನ ಪಂದ್ಯಾವಳಿಯನ್ನು ನಡೆಸಲು ಸಾಕಷ್ಟು ಪ್ರಯತ್ನಗಳನ್ನು ಮಾಡಿದರು ಆದರೆ ಅದು ಯಶಸ್ವಿಯಾಗಲು ಸಾಧ್ಯವಾಗಲಿಲ್ಲ ಎಂದು ಫೆಡರೇಶನ್ ಹೇಳಿದೆ. ಹೇಳಿಕೆಯ ಪ್ರಕಾರ ಸಂಘಟಕರು ಮತ್ತು ಬಿಡಬ್ಲ್ಯೂಎಫ್, ಭಾಗವಹಿಸುವ ಎಲ್ಲರಿಗೂ ಸುರಕ್ಷಿತ ವಾತಾವರಣವನ್ನು ಒದಗಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಿದರು. ಆದಾಗ್ಯೂ, ವಿಶ್ವದಾದ್ಯಂತ ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ, ಇಲ್ಲಿಗೆ ಬರುವ ಪ್ರಯಾಣಿಕರಿಗೆ ಸಂಕೀರ್ಣ ಸವಾಲುಗಳು ಎದುರಾಗಿದ್ದವು ಹಾಗಾಗಿ ಪಂದ್ಯಾವಳಿಯನ್ನು ರದ್ದುಪಡಿಸಲಾಗಿದೆ ಎಂದು ಬಿಡಬ್ಲ್ಯೂಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಸೈನಾ, ಶ್ರೀಕಾಂತ್‌ಗೆ ಕಷ್ಟ ಮಲೇಷ್ಯಾ ಓಪನ್ (ಮೇ 25-30) ಸಹ ಮೇ 7 ಕ್ಕೆ ಮುಂದೂಡಲ್ಪಟ್ಟಿದ್ದರಿಂದ ಲಂಡನ್ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸೈನಾ ಮತ್ತು ಶ್ರೀಕಾಂತ್ ಸಿಂಗಾಪುರ್ ಓಪನ್ ಫಲಿತಾಂಶವನ್ನು ಅವಲಂಬಿಸಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ತವಕದಲ್ಲಿದ್ದರು.

ಭಾರತದಿಂದ ಬರುವ ಎಲ್ಲಾ ವಿಮಾನಗಳನ್ನು ಸಿಂಗಾಪುರ ನಿಷೇಧಿಸಿದ್ದು, ಅಂತಿಮ ಅರ್ಹತಾ ಪಂದ್ಯಕ್ಕಾಗಿ ಭಾರತೀಯ ಆಟಗಾರರು ಈ ದೇಶಕ್ಕೆ ಹೋಗುವುದು ತುಂಬಾ ಕಷ್ಟಕರವಾಗಿದೆ. ಭಾರತಕ್ಕಾಗಿ, ಮಹಿಳಾ ಸಿಂಗಲ್ಸ್‌ನಲ್ಲಿ ಪಿ.ವಿ ಸಿಂಧು, ಪುರುಷರ ಸಿಂಗಲ್ಸ್‌ನಲ್ಲಿ ಬಿ.ಸಾಯಿ ಪ್ರಣೀತ್ ಮತ್ತು ಪುರುಷರ ಡಬಲ್ಸ್ ಜೋಡಿ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕೈರಾಜ್ ರಣಿರೇಡ್ಡಿ ಈಗಾಗಲೇ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!