AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಮಿತ ಓವರ್​ ಸರಣಿಗಳಿಂದ ವಾರ್ನರ್ ಹೊರಗೆ, ಕಮ್ಮಿನ್ಸ್​ಗೆ ವಿಶ್ರಾಂತಿ

ಎರಡನೆ ಒಂದು ದಿನದ ಅಂತರರಾಷ್ಟ್ರೀಯ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ತೊಡೆಸಂದಿ ಗಾಯಕ್ಕೊಳಗಾಗಿರುವ ಆಸ್ಟ್ರೇಲಿಯಾದ ಆರಂಭ ಆಟಗಾರ ಡೇವಿಡ್ ವಾರ್ನರ್ ಚೇತರಿಸಿಕೊಳ್ಳಲು ಕನಿಷ್ಠ 2-3 ವಾರ ಬೇಕು ಎಂದು ಕ್ರಿಕೆಟ್​ ಆಸ್ಟ್ರೇಲಿಯ ತಿಳಿಸಿದೆ.

ಸೀಮಿತ ಓವರ್​ ಸರಣಿಗಳಿಂದ ವಾರ್ನರ್ ಹೊರಗೆ, ಕಮ್ಮಿನ್ಸ್​ಗೆ ವಿಶ್ರಾಂತಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 30, 2020 | 8:32 PM

Share

ಅಸ್ಟ್ರೇಲಿಯ ವಿರುದ್ಧ ಮೊದಲೆರಡು ಪಂದ್ಯಗಳನ್ನು ಹೀನಾಯವಾಗಿ ಸೋತಿರುವ ಭಾರತೀಯ ಟೀಮಿಗೆ ಒಂದು ಸಂತೋಷದ ಸಂಗತಿ ಸಿಕ್ಕಿದೆ. ರವಿವಾರದಂದು ಸಿಡ್ನಿಯಲ್ಲಿ ನಡೆದ ಎರಡನೆ ಒಂದು ದಿನದ ಪಂದ್ಯದಲ್ಲಿ ಫೀಲ್ಡ್ ಮಾಡುವಾಗ ತೊಡೆಸಂದಿ ನೋವಿಗೀಡಾದ ಸ್ಫೋಟಕ ಆರಂಭ ಆಟಗಾರ ಡೇವಿಡ್ ವಾರ್ನರ್ ಬುಧವಾರ ನಡೆಯಬೇಕಿರುವ ಮೂರನೆ ಒಂದು ದಿನದ ಪಂದ್ಯ ಮತ್ತು ಅದಾದ ನಂತರ ನಡೆಯುವ ಮೂರು ಟಿ20 ಪಂದ್ಯಗಳನ್ನು ಆಡಲಾರರು. ಡಿಸೆಂಬರ್ 17ರಂದು ಆರಂಭವಾಗಲಿರುವ ಮೊದಲ ಟೆಸ್ಟ್​ ಪಂದ್ಯದಲ್ಲಿ ಅವರು ಭಾಗಿಯಾಗುವುದು ಕೂಡ ಅನುಮಾನಾಸ್ಪದವಾಗಿದೆ ಎಂದು ಕ್ರಿಕೆಟ್​ ಆಸ್ಟ್ರೇಲಿಯ (ಸಿಎ) ತಿಳಿಸಿದೆ.

ಪ್ಯಾಟ್ ಕಮ್ಮಿನ್ಸ್

ಓದುಗರಿಗೆ ಗೊತ್ತಿರುವಂತೆ ರವಿವಾರದಂದು ಭಾರತ ಬ್ಯಾಟ್ ಮಾಡುತ್ತಿದ್ದಾಗ, ನಾಲ್ಕನೆ ಓವರ್​ನಲ್ಲಿ ಶಿಖರ್ ಧವನ್ ಬಾರಿಸಿದ ಚೆಂಡನ್ನು ಫೀಲ್ಡ್ ಮಾಡುವ ಪ್ರಯತ್ನದಲ್ಲಿ ಡೈವ್ ಮಾಡಿದ ವಾರ್ನರ್ ತೊಡೆಸಂದಿ ನೋವಿಗೊಳಗಾಗಿ ಜೊತೆ ಆಟಗಾರರ ಸಹಾಯದಿಂದ ಮೈದಾನದಿಂದಾಚೆ ಬರಬೇಕಾಯಿತು. ಅವರಿಗಾಗಿರುವ ಗಾಯ ತೀವ್ರ ಸ್ವರೂಪದ್ದೆಂದು ಸಿಎ ಹೇಳಿದ್ದು ಅವರ ಗುಣಮುಖರಾಗಲು 2-3 ವಾರ ಬೇಕಾಗಬಹುದೆಂದು ಗೊತ್ತಾಗಿದೆ. ಈ ಪಂದ್ಯದಲ್ಲಿ ಅವರು 77 ಎಸೆತಗಳಲ್ಲಿ 83 ರನ್ ಬಾರಿಸಿ ನಾಯಕ ಆರನ್ ಫಿಂಚ್​ ಅವರೊಂದಿಗೆ ಮತ್ತೊಂದು ಶತಕದ ಜೊತೆಯಾಟದಲ್ಲಿ ಪಾಲ್ಗೊಂಡಿದ್ದರು.

ಏತನ್ಮಧ್ಯೆ, ಟೆಸ್ಟ್ ಪಂದ್ಯಗಳು ಶುರುವಾಗುವ ಮೊದಲು ವಿಶ್ರಾಂತಿ ಪಡೆಯುವುದಕ್ಕೋಸ್ಕರ ವೇಗದ ಬೌಲರ್ ಪ್ಯಾಟ್​ ಕಮ್ಮಿನ್ಸ್ ಅವರನ್ನು ತಂಡದಿಂದ ಕೈಬಿಡಲಾಗಿದೆಯೆಂದು ಸಿಎ ತಿಳಿಸಿದೆ. ಟಿ20 ಪಂದ್ಯಗಳಲ್ಲಿ ಆಡಲಿರುವ ಅತಿಥೇಯರ ತಂಡಕ್ಕೆ ಡಾರ್ಸಿ ಶಾರ್ಟ್​ ಅವರನ್ನು ಸೇರ್ಪಡೆ ಮಾಡಿಕೊಳ್ಳಲಾಗಿದೆ.

ಭಾರತ ಮತ್ತು ಆಸ್ಟ್ರೇಲಿಯ ನಡುವೆ ಮೂರನೆ ಹಾಗೂ ಕೊನೆಯ ಒಂದು ದಿನದ ಅಂತರರಾಷ್ಟ್ರೀಯ ಪಂದ್ಯ ಬುಧವಾರದಂದು ಕ್ಯಾನ್​ಬೆರಾದಲ್ಲಿ ನಡೆಯಲಿದೆ.

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!