AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಮಿತ ಓವರ್​ ಸರಣಿಗಳಿಂದ ವಾರ್ನರ್ ಹೊರಗೆ, ಕಮ್ಮಿನ್ಸ್​ಗೆ ವಿಶ್ರಾಂತಿ

ಎರಡನೆ ಒಂದು ದಿನದ ಅಂತರರಾಷ್ಟ್ರೀಯ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ತೊಡೆಸಂದಿ ಗಾಯಕ್ಕೊಳಗಾಗಿರುವ ಆಸ್ಟ್ರೇಲಿಯಾದ ಆರಂಭ ಆಟಗಾರ ಡೇವಿಡ್ ವಾರ್ನರ್ ಚೇತರಿಸಿಕೊಳ್ಳಲು ಕನಿಷ್ಠ 2-3 ವಾರ ಬೇಕು ಎಂದು ಕ್ರಿಕೆಟ್​ ಆಸ್ಟ್ರೇಲಿಯ ತಿಳಿಸಿದೆ.

ಸೀಮಿತ ಓವರ್​ ಸರಣಿಗಳಿಂದ ವಾರ್ನರ್ ಹೊರಗೆ, ಕಮ್ಮಿನ್ಸ್​ಗೆ ವಿಶ್ರಾಂತಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 30, 2020 | 8:32 PM

Share

ಅಸ್ಟ್ರೇಲಿಯ ವಿರುದ್ಧ ಮೊದಲೆರಡು ಪಂದ್ಯಗಳನ್ನು ಹೀನಾಯವಾಗಿ ಸೋತಿರುವ ಭಾರತೀಯ ಟೀಮಿಗೆ ಒಂದು ಸಂತೋಷದ ಸಂಗತಿ ಸಿಕ್ಕಿದೆ. ರವಿವಾರದಂದು ಸಿಡ್ನಿಯಲ್ಲಿ ನಡೆದ ಎರಡನೆ ಒಂದು ದಿನದ ಪಂದ್ಯದಲ್ಲಿ ಫೀಲ್ಡ್ ಮಾಡುವಾಗ ತೊಡೆಸಂದಿ ನೋವಿಗೀಡಾದ ಸ್ಫೋಟಕ ಆರಂಭ ಆಟಗಾರ ಡೇವಿಡ್ ವಾರ್ನರ್ ಬುಧವಾರ ನಡೆಯಬೇಕಿರುವ ಮೂರನೆ ಒಂದು ದಿನದ ಪಂದ್ಯ ಮತ್ತು ಅದಾದ ನಂತರ ನಡೆಯುವ ಮೂರು ಟಿ20 ಪಂದ್ಯಗಳನ್ನು ಆಡಲಾರರು. ಡಿಸೆಂಬರ್ 17ರಂದು ಆರಂಭವಾಗಲಿರುವ ಮೊದಲ ಟೆಸ್ಟ್​ ಪಂದ್ಯದಲ್ಲಿ ಅವರು ಭಾಗಿಯಾಗುವುದು ಕೂಡ ಅನುಮಾನಾಸ್ಪದವಾಗಿದೆ ಎಂದು ಕ್ರಿಕೆಟ್​ ಆಸ್ಟ್ರೇಲಿಯ (ಸಿಎ) ತಿಳಿಸಿದೆ.

ಪ್ಯಾಟ್ ಕಮ್ಮಿನ್ಸ್

ಓದುಗರಿಗೆ ಗೊತ್ತಿರುವಂತೆ ರವಿವಾರದಂದು ಭಾರತ ಬ್ಯಾಟ್ ಮಾಡುತ್ತಿದ್ದಾಗ, ನಾಲ್ಕನೆ ಓವರ್​ನಲ್ಲಿ ಶಿಖರ್ ಧವನ್ ಬಾರಿಸಿದ ಚೆಂಡನ್ನು ಫೀಲ್ಡ್ ಮಾಡುವ ಪ್ರಯತ್ನದಲ್ಲಿ ಡೈವ್ ಮಾಡಿದ ವಾರ್ನರ್ ತೊಡೆಸಂದಿ ನೋವಿಗೊಳಗಾಗಿ ಜೊತೆ ಆಟಗಾರರ ಸಹಾಯದಿಂದ ಮೈದಾನದಿಂದಾಚೆ ಬರಬೇಕಾಯಿತು. ಅವರಿಗಾಗಿರುವ ಗಾಯ ತೀವ್ರ ಸ್ವರೂಪದ್ದೆಂದು ಸಿಎ ಹೇಳಿದ್ದು ಅವರ ಗುಣಮುಖರಾಗಲು 2-3 ವಾರ ಬೇಕಾಗಬಹುದೆಂದು ಗೊತ್ತಾಗಿದೆ. ಈ ಪಂದ್ಯದಲ್ಲಿ ಅವರು 77 ಎಸೆತಗಳಲ್ಲಿ 83 ರನ್ ಬಾರಿಸಿ ನಾಯಕ ಆರನ್ ಫಿಂಚ್​ ಅವರೊಂದಿಗೆ ಮತ್ತೊಂದು ಶತಕದ ಜೊತೆಯಾಟದಲ್ಲಿ ಪಾಲ್ಗೊಂಡಿದ್ದರು.

ಏತನ್ಮಧ್ಯೆ, ಟೆಸ್ಟ್ ಪಂದ್ಯಗಳು ಶುರುವಾಗುವ ಮೊದಲು ವಿಶ್ರಾಂತಿ ಪಡೆಯುವುದಕ್ಕೋಸ್ಕರ ವೇಗದ ಬೌಲರ್ ಪ್ಯಾಟ್​ ಕಮ್ಮಿನ್ಸ್ ಅವರನ್ನು ತಂಡದಿಂದ ಕೈಬಿಡಲಾಗಿದೆಯೆಂದು ಸಿಎ ತಿಳಿಸಿದೆ. ಟಿ20 ಪಂದ್ಯಗಳಲ್ಲಿ ಆಡಲಿರುವ ಅತಿಥೇಯರ ತಂಡಕ್ಕೆ ಡಾರ್ಸಿ ಶಾರ್ಟ್​ ಅವರನ್ನು ಸೇರ್ಪಡೆ ಮಾಡಿಕೊಳ್ಳಲಾಗಿದೆ.

ಭಾರತ ಮತ್ತು ಆಸ್ಟ್ರೇಲಿಯ ನಡುವೆ ಮೂರನೆ ಹಾಗೂ ಕೊನೆಯ ಒಂದು ದಿನದ ಅಂತರರಾಷ್ಟ್ರೀಯ ಪಂದ್ಯ ಬುಧವಾರದಂದು ಕ್ಯಾನ್​ಬೆರಾದಲ್ಲಿ ನಡೆಯಲಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ