Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಕ್ರೀಡಾ ಸಚಿವರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ 31 ಜಿಲ್ಲೆಗಳಲ್ಲಿ ಖೇಲೊ ಇಂಡಿಯಾ ಕೇಂದ್ರಗಳ ಸ್ಥಾಪನೆಗೆ ಅಸ್ತು!

ಕ್ರೀಡಾಪಟುಗಳ ಆಯ್ಕೆ ಮತ್ತು ಗುಣಮಟ್ಟದ ತರಬೇತಿ ನೀಡುವ ಉದ್ದೇಶದಿಂದ ಈ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಮಾಜಿ ಚಾಂಪಿಯನ್​ಗಳು ಸದರಿ ಕೇಂದ್ರದಲ್ಲಿ ತರಬೇತುದಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.

ರಾಜ್ಯ ಕ್ರೀಡಾ ಸಚಿವರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ 31 ಜಿಲ್ಲೆಗಳಲ್ಲಿ ಖೇಲೊ ಇಂಡಿಯಾ ಕೇಂದ್ರಗಳ ಸ್ಥಾಪನೆಗೆ ಅಸ್ತು!
ಖೇಲೊ ಇಂಡಿಯಾ
Follow us
ಅರುಣ್​ ಕುಮಾರ್​ ಬೆಳ್ಳಿ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: May 25, 2021 | 8:16 PM

ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಆಗಮಿಸಿದ್ದಾಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಅನುಕೂಲವಾಗುವಂತೆ ಎಲ್ಲ 31 ಜಿಲ್ಲೆಗಳಲ್ಲಿ ಖೇಲೊ ಇಂಡಿಯಾದ ಕೇಂದ್ರಗಳನ್ನು ಸ್ಥಾಪಿಸುವಂತೆ ಮನವಿ ಮಾಡಿದ್ದರು. ಸಚಿವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ಖೇಲೊ ಇಂಡಿಯಾದ ಕೇಂದ್ರಗಳನ್ನು ಸ್ಥಾಪಿಸಲು ಅನುಮೋದನೆ ನೀಡಿದೆ. ಇದು ನಿಜಕ್ಕೂ ರಾಜ್ಯದ ಕ್ರೀಡಾಪಟುಗಳಿಗೆ ಸಂತಸದ ಸುದ್ದಿ, ಇದರ ಲಾಭವನ್ನು ಪ್ರತಿಯೊಬ್ಬ ಕ್ರೀಡಾಪಟುವು ಪಡೆದುಕೊಳ್ಳಬೇಕು ಎಂದು ಸಚಿವ ಡಾ. ನಾರಾಯಣಗೌಡ ಸಲಹೆ ಮಾಡಿದ್ದಾರೆ.

‘ಒಂದು ಜಿಲ್ಲೆ ಒಂದು ಕ್ರೀಡೆ’ ಎಂಬ ಪರಿಕಲ್ಪನೆ ಅಡಿಯಲ್ಲಿ ಕ್ರೀಡೆ ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಖೇಲೊ ಇಂಡಿಯಾ ಯೋಜನೆ ಅಡಿಯಲ್ಲಿ ಪ್ರತಿ ಜಿಲ್ಲೆಯಲ್ಲೂ ಖೇಲೊ ಇಂಡಿಯಾ ಕೇಂದ್ರ ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಕೇಂದ್ರದ ಕ್ರೀಡಾ ಸಚಿವ ಕಿರಣ್ ರಿಜಿಜು ಬೆಂಗಳೂರಿಗೆ ಆಗಮಿಸಿದ್ದಾಗ, ಸಚಿವ ಡಾ. ನಾರಾಯಣ ಗೌಡ ವಿಷಯದ ಬಗ್ಗೆ ಸಮಗ್ರವಾಗಿ ಚರ್ಚಿಸಿ ರಾಜ್ಯದ 31 ಜಿಲ್ಲೆಗಳಲ್ಲೂ ಖೇಲೊ ಇಂಡಿಯಾ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಅನುದಾನ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು. ಅಂದು ಸಚಿವರಿಗೆ ನೀಡಿದ ಭರವಸೆಯಂತೆ ಕೇಂದ್ರಗಳ ಸ್ಥಾಪನೆಗೆ ಅನುಮೋದನೆ ನೀಡಿ, ಅನುದಾನ ಬಿಡುಗಡೆ ಮಾಡುವ ಅಧಿಸೂಚನೆ ಹೊರಡಿಸಿದೆ.

ಕ್ರೀಡಾಪಟುಗಳ ಆಯ್ಕೆ ಮತ್ತು ಗುಣಮಟ್ಟದ ತರಬೇತಿ ನೀಡುವ ಉದ್ದೇಶದಿಂದ ಈ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಮಾಜಿ ಚಾಂಪಿಯನ್​ಗಳು ಸದರಿ ಕೇಂದ್ರದಲ್ಲಿ ತರಬೇತುದಾರರಾಗಿ ಕಾರ್ಯನಿರ್ವಹಿಸಲಿದ್ದಾರೆ. ಕ್ರೀಡಾಪಟುಗಳನ್ನು ಗುರುತಿಸಿ ಆಯ್ಕೆ ಮಾಡುವ ಜವಾಬ್ದಾರಿ ಅವರ ಮೇಲಿರಲಿದೆ. ಕೇಂದ್ರದ ಹಲವು ಮಾರ್ಗಸೂಚಿಗಳಂತೆ ತರಬೇತುದಾರರು ಕಾರ್ಯನಿರ್ವಹಿಸಬೇಕು. ಅಲ್ಲದೆ ಪ್ರತಿ ಕೇಂದ್ರದಲ್ಲಿ ಪುರುಷ ಹಾಗೂ ಮಹಿಳಾ ತರಬೇತುದಾರರು ಕಡ್ಡಾಯವಾಗಿ ಇರಬೇಕು.

ಖೇಲೋ ಇಂಡಿಯಾ ಕೇಂದ್ರಗಳನ್ನು ಸ್ಥಾಪಿಸಲು ಹಾಗೂ ಕ್ರೀಡಾ ಸೌಕರ್ಯಗಳ ಉನ್ನತೀಕರಣಕ್ಕಾಗಿ 5 ಲಕ್ಷ ರೂ ಮತ್ತು ತರಬೇತುದಾರರು ತಾಂತ್ರಿಕ ಸಿಬ್ಬಂದಿಗಳ ಗೌರವಧನಕ್ಕಾಗಿ ಮತ್ತು ಕ್ರೀಡಾ ಉಪಕರಣಗಳ ಪೂರೈಕೆಗೆ ವಾರ್ಷಿಕ 5 ಲಕ್ಷ ರೂ.ಗಳನ್ನು ನೀಡಲಿದೆ. ಈ ಯೋಜನೆಯು ಮುಂದಿನ 4 ವರ್ಷಗಳ ಅವಧಿಗೆ ಜಾರಿಯಲ್ಲಿರಲಿದೆ.

ಈ ಕೇಂದ್ರದ ಮೂಲಕ ಕ್ರೀಡಾಪಟುಗಳು ಉತ್ತಮ ತರಬೇತಿ ಪಡೆದು, ಸಾಧನೆ ಮಾಡಲು ಅವಕಾಶ ಇದೆ. ಕ್ರೀಡಾಪಟುಗಳು ಇದನ್ನು ಸದುಪಯೋಗಪಡಿಸಿಕೊಂಡು ರಾಜ್ಯಕ್ಕೆ, ದೇಶಕ್ಕೆ ಕೀರ್ತಿ ತರಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಮನವಿ ಮಾಡಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಖೇಲೋ ಇಂಡಿಯಾ ಕೇಂದ್ರಗಳನ್ನು ಪ್ರಾರಂಭಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರಿಗು, ಕೇಂದ್ರ ಕ್ರೀಡಾ ಸಚಿವ ಕಿರಣ ರಿಜಿಜು, ಕೇಂದ್ರದಲ್ಲಿ ಸಚಿವರಾಗಿರುವ ಕರ್ನಾಟಕಕದ ಪ್ರಹ್ಲಾದ್ ಜೋಶಿ, ಡಿ.ವಿ. ಸದಾನಂದಗೌಡ ಅವರನ್ನು ಸಚಿವರು ಅಭಿನಂದಿಸಿದ್ದಾರೆ.

ಇದನ್ನೂ ಓದಿ: Virat Kohli: ವಿರಾಟ್​ ಕೊಯ್ಲಿಗೆ ‘ಮನಿ ಹೈಸ್ಟ್​’ ಪ್ರೊಫೆಸರ್ ಪಾತ್ರ? ವೈರಲ್​ ಆಯ್ತು ಹೊಸ ಲುಕ್​

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ