AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಟ್ವಿಟರ್​ನಲ್ಲಿ ಚೆನ್ನೈ ಸೂಪರ್​ಕಿಂಗ್ಸ್​ ಎಡವಟ್ಟು; Well Payed KKR ಎಂದ ಧೋನಿ ಟೀಂ!

ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿದ ಚೆನ್ನೈ ಅದ್ಭುತ ಆರಂಭ ಕಂಡಿತ್ತು. ತಮ್ಮ ಹೊಡಿಬಡಿ ಆಟದ ಮೂಲಕ ಚೆನ್ನೈ 220 ರನ್​ ಕಲೆ ಹಾಕಿತ್ತು. ಇದನ್ನು ಬೆನ್ನು ಹತ್ತಿದ್ದ ಕೆಕೆಆರ್​ಗೆ ಆರಂಭಿಕ ಆಘಾತ ಎದುರಾಗಿತ್ತು

IPL 2021: ಟ್ವಿಟರ್​ನಲ್ಲಿ ಚೆನ್ನೈ ಸೂಪರ್​ಕಿಂಗ್ಸ್​ ಎಡವಟ್ಟು; Well Payed KKR ಎಂದ ಧೋನಿ ಟೀಂ!
ಧೋನಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 22, 2021 | 3:07 PM

Share

ಚೆನ್ನೈ ಸೂಪರ್​ ಕಿಂಗ್ಸ್​ ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್​ ನಡುವೆ ನಡೆದ ಪಂದ್ಯ ರೋಚಕತೆ ಪಡೆದುಕೊಂಡಿತ್ತು. ಸೋಲುವ ಹಂತಕ್ಕೆ ತಲುಪಿದ್ದ ಪಂದ್ಯವನ್ನು ರಸೆಲ್​, ದಿನೇಶ್​ ಕಾರ್ತಿಕ್​ ಹಾಗೂ ಪ್ಯಾಟ್​ ಕಮ್ಮಿನ್ಸ್​ ಅದ್ಭುತ ಪ್ರದರ್ಶನದಿಂದ ಗೆಲುವಿನ ಹಂತಕ್ಕೆ ಹೋಗಿತ್ತು. ಆದರೆ, ಈ ಮೂವರ ಹೋರಾಟವೂ ವ್ಯರ್ಥವಾಗಿದ್ದು, ಕೆಕೆಆರ್​ 18 ರನ್​ಗಳಿಂದ ಸೋತಿತ್ತು. ಆದರೆ, ಅವರು ನೀಡಿದ ಅದ್ಭುತ ಪ್ರದರ್ಶನ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಮಧ್ಯೆ ಚೆನ್ನೈ ಮಾಡಿದ ಟ್ವೀಟ್​ ಒಂದು ಸಾಕಷ್ಟು ವೈರಲ್​ ಆಗಿದೆ.

ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿದ ಚೆನ್ನೈ ಅದ್ಭುತ ಆರಂಭ ಕಂಡಿತ್ತು. ತಮ್ಮ ಹೊಡಿಬಡಿ ಆಟದ ಮೂಲಕ ಚೆನ್ನೈ 220 ರನ್​ ಕಲೆ ಹಾಕಿತ್ತು. ಇದನ್ನು ಬೆನ್ನು ಹತ್ತಿದ್ದ ಕೆಕೆಆರ್​ಗೆ ಆರಂಭಿಕ ಆಘಾತ ಎದುರಾಗಿತ್ತು. ಶುಭ್​ಮನ್​ಗಿಲ್​ ಮೊದಲನೇ ಓವರ್​ನಲ್ಲಿ ಔಟ್​ ಆದರು. ನಿತೀಶ್​ ರಾಣಾ ಮೂರನೇ ಓವರ್​ಗೆ ಪೆವಿಲಿಯನ್​ ಸೇರಿದರು. ರಾಹುಲ್​ ತ್ರಿಪಾಟಿ, ಮೊರ್ಗನ್​, ಸುನೀಲ್​ ನರೇನ್​ ಕೂಡ ಬಹುಬೇಗ ಪೆವಿಲಿಯನ್​ ಹಾದಿ ಹಿಡಿದರು. ನಂತರ ದಿನೇಶ್​ ಕಾರ್ತಿಕ್​, ರಸೆಲ್​ ಹಾಗೂ ಕಮ್ಮಿನ್ಸ್ ಅದ್ಭುತ ಆಟ ತೋರಿದರು. ಈ ಮ್ಯಾಚ್​ ತುಂಬಾನೇ ಥ್ರಿಲ್​ ನೀಡಿತ್ತು.

ಪಂದ್ಯ ಮುಗಿದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್​ ಟ್ವೀಟ್ ಒಂದನ್ನು ಮಾಡಿದೆ. ಈ ಟ್ವೀಟ್​ ಮಾಡುವಾಗ ಎಡವಟ್ಟೊಂದು ಸಂಭವಿಸಿದೆ. ಉತ್ತಮವಾಗಿ ಆಡಿದ್ದೀರಿ ಎಂದು ಹೇಳುವ ಬದಲು ಉತ್ತಮವಾಗಿ ಪಾವತಿಸಿದ್ದೀರಿ ಎಂದು ಹೇಳುವ ಅರ್ಥದಲ್ಲಿ ಚೆನ್ನೈ ಟ್ವೀಟ್​ ಬಂದಿದೆ. Well payed KKR ಎಂದು ಟ್ವೀಟ್​ ಮಾಡಲಾಗಿದೆ.

ಆದರೆ, ಅದು Well played KKR ಎಂದಾಗಬೇಕಿತ್ತು. ಚೆನ್ನೈ ಸ್ಪಾಟ್​​ ಫಿಕ್ಸಿಂಗ್​ ಪ್ರಕರಣಕ್ಕೆ ಸಿಲುಕಿ ಎರಡು ವರ್ಷ ಬ್ಯಾನ್​ ಆಗಿತ್ತು. ಈ ಕಪ್ಪು ಚುಕ್ಕಿ ಇನ್ನೂ ಮಾಸಿಲ್ಲ. ಹೀಗಾಗಿ, ಅನೇಕರು ಈ ಟ್ವೀಟ್​ಅನ್ನು ಹಳೆಯ ಘಟನೆಗೆ ತಳುಕು ಹಾಕಿದ್ದಾರೆ.

ಇದನ್ನೂ ಓದಿ: IPL 2021: ಚೆನ್ನೈನಲ್ಲಿ ಕ್ಲೀನ್ ಸ್ವೀಪ್ ಮಾಡಿದ್ದೇವೆ, ಮುಂಬೈನಲ್ಲೂ ಕ್ಲೀನ್ ಸ್ವೀಪ್ ಮಾಡ್ತೀವಿ; ಗ್ಲೆನ್ ಮ್ಯಾಕ್ಸ್​ವೆಲ್

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್