AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಟ್ವಿಟರ್​ನಲ್ಲಿ ಚೆನ್ನೈ ಸೂಪರ್​ಕಿಂಗ್ಸ್​ ಎಡವಟ್ಟು; Well Payed KKR ಎಂದ ಧೋನಿ ಟೀಂ!

ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿದ ಚೆನ್ನೈ ಅದ್ಭುತ ಆರಂಭ ಕಂಡಿತ್ತು. ತಮ್ಮ ಹೊಡಿಬಡಿ ಆಟದ ಮೂಲಕ ಚೆನ್ನೈ 220 ರನ್​ ಕಲೆ ಹಾಕಿತ್ತು. ಇದನ್ನು ಬೆನ್ನು ಹತ್ತಿದ್ದ ಕೆಕೆಆರ್​ಗೆ ಆರಂಭಿಕ ಆಘಾತ ಎದುರಾಗಿತ್ತು

IPL 2021: ಟ್ವಿಟರ್​ನಲ್ಲಿ ಚೆನ್ನೈ ಸೂಪರ್​ಕಿಂಗ್ಸ್​ ಎಡವಟ್ಟು; Well Payed KKR ಎಂದ ಧೋನಿ ಟೀಂ!
ಧೋನಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 22, 2021 | 3:07 PM

Share

ಚೆನ್ನೈ ಸೂಪರ್​ ಕಿಂಗ್ಸ್​ ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್​ ನಡುವೆ ನಡೆದ ಪಂದ್ಯ ರೋಚಕತೆ ಪಡೆದುಕೊಂಡಿತ್ತು. ಸೋಲುವ ಹಂತಕ್ಕೆ ತಲುಪಿದ್ದ ಪಂದ್ಯವನ್ನು ರಸೆಲ್​, ದಿನೇಶ್​ ಕಾರ್ತಿಕ್​ ಹಾಗೂ ಪ್ಯಾಟ್​ ಕಮ್ಮಿನ್ಸ್​ ಅದ್ಭುತ ಪ್ರದರ್ಶನದಿಂದ ಗೆಲುವಿನ ಹಂತಕ್ಕೆ ಹೋಗಿತ್ತು. ಆದರೆ, ಈ ಮೂವರ ಹೋರಾಟವೂ ವ್ಯರ್ಥವಾಗಿದ್ದು, ಕೆಕೆಆರ್​ 18 ರನ್​ಗಳಿಂದ ಸೋತಿತ್ತು. ಆದರೆ, ಅವರು ನೀಡಿದ ಅದ್ಭುತ ಪ್ರದರ್ಶನ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಮಧ್ಯೆ ಚೆನ್ನೈ ಮಾಡಿದ ಟ್ವೀಟ್​ ಒಂದು ಸಾಕಷ್ಟು ವೈರಲ್​ ಆಗಿದೆ.

ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿದ ಚೆನ್ನೈ ಅದ್ಭುತ ಆರಂಭ ಕಂಡಿತ್ತು. ತಮ್ಮ ಹೊಡಿಬಡಿ ಆಟದ ಮೂಲಕ ಚೆನ್ನೈ 220 ರನ್​ ಕಲೆ ಹಾಕಿತ್ತು. ಇದನ್ನು ಬೆನ್ನು ಹತ್ತಿದ್ದ ಕೆಕೆಆರ್​ಗೆ ಆರಂಭಿಕ ಆಘಾತ ಎದುರಾಗಿತ್ತು. ಶುಭ್​ಮನ್​ಗಿಲ್​ ಮೊದಲನೇ ಓವರ್​ನಲ್ಲಿ ಔಟ್​ ಆದರು. ನಿತೀಶ್​ ರಾಣಾ ಮೂರನೇ ಓವರ್​ಗೆ ಪೆವಿಲಿಯನ್​ ಸೇರಿದರು. ರಾಹುಲ್​ ತ್ರಿಪಾಟಿ, ಮೊರ್ಗನ್​, ಸುನೀಲ್​ ನರೇನ್​ ಕೂಡ ಬಹುಬೇಗ ಪೆವಿಲಿಯನ್​ ಹಾದಿ ಹಿಡಿದರು. ನಂತರ ದಿನೇಶ್​ ಕಾರ್ತಿಕ್​, ರಸೆಲ್​ ಹಾಗೂ ಕಮ್ಮಿನ್ಸ್ ಅದ್ಭುತ ಆಟ ತೋರಿದರು. ಈ ಮ್ಯಾಚ್​ ತುಂಬಾನೇ ಥ್ರಿಲ್​ ನೀಡಿತ್ತು.

ಪಂದ್ಯ ಮುಗಿದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್​ ಟ್ವೀಟ್ ಒಂದನ್ನು ಮಾಡಿದೆ. ಈ ಟ್ವೀಟ್​ ಮಾಡುವಾಗ ಎಡವಟ್ಟೊಂದು ಸಂಭವಿಸಿದೆ. ಉತ್ತಮವಾಗಿ ಆಡಿದ್ದೀರಿ ಎಂದು ಹೇಳುವ ಬದಲು ಉತ್ತಮವಾಗಿ ಪಾವತಿಸಿದ್ದೀರಿ ಎಂದು ಹೇಳುವ ಅರ್ಥದಲ್ಲಿ ಚೆನ್ನೈ ಟ್ವೀಟ್​ ಬಂದಿದೆ. Well payed KKR ಎಂದು ಟ್ವೀಟ್​ ಮಾಡಲಾಗಿದೆ.

ಆದರೆ, ಅದು Well played KKR ಎಂದಾಗಬೇಕಿತ್ತು. ಚೆನ್ನೈ ಸ್ಪಾಟ್​​ ಫಿಕ್ಸಿಂಗ್​ ಪ್ರಕರಣಕ್ಕೆ ಸಿಲುಕಿ ಎರಡು ವರ್ಷ ಬ್ಯಾನ್​ ಆಗಿತ್ತು. ಈ ಕಪ್ಪು ಚುಕ್ಕಿ ಇನ್ನೂ ಮಾಸಿಲ್ಲ. ಹೀಗಾಗಿ, ಅನೇಕರು ಈ ಟ್ವೀಟ್​ಅನ್ನು ಹಳೆಯ ಘಟನೆಗೆ ತಳುಕು ಹಾಕಿದ್ದಾರೆ.

ಇದನ್ನೂ ಓದಿ: IPL 2021: ಚೆನ್ನೈನಲ್ಲಿ ಕ್ಲೀನ್ ಸ್ವೀಪ್ ಮಾಡಿದ್ದೇವೆ, ಮುಂಬೈನಲ್ಲೂ ಕ್ಲೀನ್ ಸ್ವೀಪ್ ಮಾಡ್ತೀವಿ; ಗ್ಲೆನ್ ಮ್ಯಾಕ್ಸ್​ವೆಲ್

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು