AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಟ್ವಿಟರ್​ನಲ್ಲಿ ಚೆನ್ನೈ ಸೂಪರ್​ಕಿಂಗ್ಸ್​ ಎಡವಟ್ಟು; Well Payed KKR ಎಂದ ಧೋನಿ ಟೀಂ!

ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿದ ಚೆನ್ನೈ ಅದ್ಭುತ ಆರಂಭ ಕಂಡಿತ್ತು. ತಮ್ಮ ಹೊಡಿಬಡಿ ಆಟದ ಮೂಲಕ ಚೆನ್ನೈ 220 ರನ್​ ಕಲೆ ಹಾಕಿತ್ತು. ಇದನ್ನು ಬೆನ್ನು ಹತ್ತಿದ್ದ ಕೆಕೆಆರ್​ಗೆ ಆರಂಭಿಕ ಆಘಾತ ಎದುರಾಗಿತ್ತು

IPL 2021: ಟ್ವಿಟರ್​ನಲ್ಲಿ ಚೆನ್ನೈ ಸೂಪರ್​ಕಿಂಗ್ಸ್​ ಎಡವಟ್ಟು; Well Payed KKR ಎಂದ ಧೋನಿ ಟೀಂ!
ಧೋನಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 22, 2021 | 3:07 PM

Share

ಚೆನ್ನೈ ಸೂಪರ್​ ಕಿಂಗ್ಸ್​ ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್​ ನಡುವೆ ನಡೆದ ಪಂದ್ಯ ರೋಚಕತೆ ಪಡೆದುಕೊಂಡಿತ್ತು. ಸೋಲುವ ಹಂತಕ್ಕೆ ತಲುಪಿದ್ದ ಪಂದ್ಯವನ್ನು ರಸೆಲ್​, ದಿನೇಶ್​ ಕಾರ್ತಿಕ್​ ಹಾಗೂ ಪ್ಯಾಟ್​ ಕಮ್ಮಿನ್ಸ್​ ಅದ್ಭುತ ಪ್ರದರ್ಶನದಿಂದ ಗೆಲುವಿನ ಹಂತಕ್ಕೆ ಹೋಗಿತ್ತು. ಆದರೆ, ಈ ಮೂವರ ಹೋರಾಟವೂ ವ್ಯರ್ಥವಾಗಿದ್ದು, ಕೆಕೆಆರ್​ 18 ರನ್​ಗಳಿಂದ ಸೋತಿತ್ತು. ಆದರೆ, ಅವರು ನೀಡಿದ ಅದ್ಭುತ ಪ್ರದರ್ಶನ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಮಧ್ಯೆ ಚೆನ್ನೈ ಮಾಡಿದ ಟ್ವೀಟ್​ ಒಂದು ಸಾಕಷ್ಟು ವೈರಲ್​ ಆಗಿದೆ.

ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿದ ಚೆನ್ನೈ ಅದ್ಭುತ ಆರಂಭ ಕಂಡಿತ್ತು. ತಮ್ಮ ಹೊಡಿಬಡಿ ಆಟದ ಮೂಲಕ ಚೆನ್ನೈ 220 ರನ್​ ಕಲೆ ಹಾಕಿತ್ತು. ಇದನ್ನು ಬೆನ್ನು ಹತ್ತಿದ್ದ ಕೆಕೆಆರ್​ಗೆ ಆರಂಭಿಕ ಆಘಾತ ಎದುರಾಗಿತ್ತು. ಶುಭ್​ಮನ್​ಗಿಲ್​ ಮೊದಲನೇ ಓವರ್​ನಲ್ಲಿ ಔಟ್​ ಆದರು. ನಿತೀಶ್​ ರಾಣಾ ಮೂರನೇ ಓವರ್​ಗೆ ಪೆವಿಲಿಯನ್​ ಸೇರಿದರು. ರಾಹುಲ್​ ತ್ರಿಪಾಟಿ, ಮೊರ್ಗನ್​, ಸುನೀಲ್​ ನರೇನ್​ ಕೂಡ ಬಹುಬೇಗ ಪೆವಿಲಿಯನ್​ ಹಾದಿ ಹಿಡಿದರು. ನಂತರ ದಿನೇಶ್​ ಕಾರ್ತಿಕ್​, ರಸೆಲ್​ ಹಾಗೂ ಕಮ್ಮಿನ್ಸ್ ಅದ್ಭುತ ಆಟ ತೋರಿದರು. ಈ ಮ್ಯಾಚ್​ ತುಂಬಾನೇ ಥ್ರಿಲ್​ ನೀಡಿತ್ತು.

ಪಂದ್ಯ ಮುಗಿದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್​ ಟ್ವೀಟ್ ಒಂದನ್ನು ಮಾಡಿದೆ. ಈ ಟ್ವೀಟ್​ ಮಾಡುವಾಗ ಎಡವಟ್ಟೊಂದು ಸಂಭವಿಸಿದೆ. ಉತ್ತಮವಾಗಿ ಆಡಿದ್ದೀರಿ ಎಂದು ಹೇಳುವ ಬದಲು ಉತ್ತಮವಾಗಿ ಪಾವತಿಸಿದ್ದೀರಿ ಎಂದು ಹೇಳುವ ಅರ್ಥದಲ್ಲಿ ಚೆನ್ನೈ ಟ್ವೀಟ್​ ಬಂದಿದೆ. Well payed KKR ಎಂದು ಟ್ವೀಟ್​ ಮಾಡಲಾಗಿದೆ.

ಆದರೆ, ಅದು Well played KKR ಎಂದಾಗಬೇಕಿತ್ತು. ಚೆನ್ನೈ ಸ್ಪಾಟ್​​ ಫಿಕ್ಸಿಂಗ್​ ಪ್ರಕರಣಕ್ಕೆ ಸಿಲುಕಿ ಎರಡು ವರ್ಷ ಬ್ಯಾನ್​ ಆಗಿತ್ತು. ಈ ಕಪ್ಪು ಚುಕ್ಕಿ ಇನ್ನೂ ಮಾಸಿಲ್ಲ. ಹೀಗಾಗಿ, ಅನೇಕರು ಈ ಟ್ವೀಟ್​ಅನ್ನು ಹಳೆಯ ಘಟನೆಗೆ ತಳುಕು ಹಾಕಿದ್ದಾರೆ.

ಇದನ್ನೂ ಓದಿ: IPL 2021: ಚೆನ್ನೈನಲ್ಲಿ ಕ್ಲೀನ್ ಸ್ವೀಪ್ ಮಾಡಿದ್ದೇವೆ, ಮುಂಬೈನಲ್ಲೂ ಕ್ಲೀನ್ ಸ್ವೀಪ್ ಮಾಡ್ತೀವಿ; ಗ್ಲೆನ್ ಮ್ಯಾಕ್ಸ್​ವೆಲ್

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ