AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chess Olympiad 2022: ಚೆಸ್​ ಒಲಿಂಪಿಯಾಡ್​ನಲ್ಲಿ ಮುಂದುವರೆದ ಭಾರತೀಯರ ಪಾರುಪತ್ಯ

Chess Olympiad 2022: ಸದ್ಯ 3ನೇ ದಿನದಾಟದ ಅಂತ್ಯಕ್ಕೆ ಭಾರತೀಯ ಪುರುಷರ ಮತ್ತು ಮಹಿಳೆಯರ ಎ ತಂಡಗಳು ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿಕೊಂಡಿದೆ. ಇನ್ನು ಪುರುಷರ ಬಿ ತಂಡವು 9ನೇ ಸ್ಥಾನದಲ್ಲಿದ್ದರೆ, ಸಿ ತಂಡವು 13ನೇ ಸ್ಥಾನ ಅಲಂಕರಿಸಿದೆ.

Chess Olympiad 2022: ಚೆಸ್​ ಒಲಿಂಪಿಯಾಡ್​ನಲ್ಲಿ ಮುಂದುವರೆದ ಭಾರತೀಯರ ಪಾರುಪತ್ಯ
Chess Olympiad 2022
TV9 Web
| Edited By: |

Updated on: Aug 01, 2022 | 10:52 AM

Share

ಮಹಾಬಲಿಪುರಂನಲ್ಲಿ ಭಾನುವಾರ (ಜುಲೈ 31) ನಡೆದ 44ನೇ ಚೆಸ್ ಒಲಿಂಪಿಯಾಡ್‌ನ (Chess Olympiad 2022) ಮೂರನೇ ಸುತ್ತಿನ ಪಂದ್ಯದಲ್ಲಿ ಭಾರತ ಪುರುಷರ ತಂಡ ಎಲ್ಲಾ ಮೂರು ಪಂದ್ಯಗಳಲ್ಲಿ ಜಯಗಳಿಸುವ ಮೂಲಕ ಉತ್ತಮ ಪ್ರದರ್ಶನ ಮುಂದುವರೆಸಿದ್ದಾರೆ. ಭಾನುವಾರ ನಡೆದ ಸ್ಪರ್ಧೆಯಲ್ಲಿ ಭಾರತ ಎ ತಂಡವು ಗ್ರೀಸ್ ತಂಡವನ್ನು 3-1 ಅಂಕಗಳಿಂದ ಸೋಲಿಸಿದರೆ, ಭಾರತ ಬಿ ತಂಡವು ಸ್ವಿಟ್ಜರ್ಲೆಂಡ್ ಅನ್ನು 4-0 ಅಂತರದಿಂದ ಸೋಲಿಸಿತು. ಹಾಗೆಯೇ ಭಾರತ ಸಿ ತಂಡವು  3-1 ಅಂಕಗಳಿಂದ ಐಸ್​ಲ್ಯಾಂಡ್​ ತಂಡಕ್ಕೆ ಸೋಲುಣಿಸಿತು. ಮೂರನೇ ದಿನವು ನಿರೀಕ್ಷೆಗೆ ತಕ್ಕಂತೆ ಭಾರತ ಬಿ ತಂಡ ಟೂರ್ನಿಯಲ್ಲಿ ಪ್ರಾಬಲ್ಯ ಮುಂದುವರಿಸಿದೆ.

ಹರಿಕೃಷ್ಣ ಮತ್ತು ಅರ್ಜುನ್ ಎರಿಗೈಸಿ ಪೂರ್ಣ ಅಂಕಗಳನ್ನು ತಂದುಕೊಟ್ಟರೆ, ವಿದಿತ್ ಗುಜರಾತಿ ಮತ್ತು ಕೃಷ್ಣನ್ ಸಾಯಿಕಿರಣ್ ಡ್ರಾ ಸಾಧಿಸುವಲ್ಲಿ ಸಫಲರಾಗಿದ್ದಾರೆ. ಬಿ ತಂಡದಲ್ಲಿ ಡಿ ಗುಕೇಶ್, ನಿಹಾಲ್ ಸರಿನ್, ಆರ್ ಪ್ರಗ್ನಾನಂದ ಮತ್ತು ರೌನಕ್ ಸಾಧ್ವನಿ ಗೆಲುವು ಸಾಧಿಸಿದ್ದಾರೆ.

ಕ್ಯಾಟಲಾನ್ ಓಪನಿಂಗ್‌ನಲ್ಲಿ ಡಿಮಿಟ್ರಿ ಮಾಸ್ಟ್ರೋವಾಸಿಲಿಸ್ ವಿರುದ್ಧ ಹರಿಕೃಷ್ಣ ಅತ್ಯುತ್ತಮ ನಡೆಗಳ ಮೂಲಕ ಗಮನ ಸೆಳೆದರು. ಹರಿಕೃಷ್ಣ ಅವರು ತಮ್ಮ ತಂತ್ರಗಾರಿಕೆಯಲ್ಲಿ 24 ನೇ ತಿರುವಿನಲ್ಲಿ ಉತ್ತಮ ದಾಳಿ ನಡೆಸಿದರು. ಅಲ್ಲದೆ ಕಿಂಗ್ ಅನ್ನು ಟಾರ್ಗೆಟ್ ಮಾಡುವ ಮೂಲಕ ಎದುರಾಳಿಯನ್ನು ಇಕ್ಕಟಿಗೆ ಸಿಲುಕಿಸಿದ್ದರು. ಪರಿಣಾಮ ಡಿಮಿಟ್ರಿ 29 ನೇ ತಿರುವಿನಲ್ಲಿ ಹಿಂದೆ ಸರಿಯಲು ನಿರ್ಧರಿಸಿದರು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಈ ವಿಭಿನ್ನ ತಂತ್ರಗಾರಿಕೆ ಬಗ್ಗೆ ಮಾತನಾಡಿದ ಹರಿಕೃಷ್ಣ, “ನನ್ನ ಲೆಕ್ಕಾಚಾರಗಳು ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ನಾನು ಡಬಲ್ ಬಿಷಪ್‌ಗಳನ್ನು ತ್ಯಾಗ ಮಾಡುವ ಮೊದಲು ನಾನು ಸಾಕಷ್ಟು ಯೋಚಿಸಿದೆ. ಅದು ಚೆಕ್‌ಮೇಟಿಂಗ್ ಸ್ಥಾನದಲ್ಲಿ ಕೆಲಸ ಮಾಡದಿದ್ದರೆ, ನಾನು ಸಾಕಷ್ಟು ಪ್ರಯೋಜನವನ್ನು ಪಡೆಯಲಿದ್ದೇನೆ ಎಂಬುದು ಗೊತ್ತಿತ್ತು. ಅಂತಿಮವಾಗಿ ನನ್ನ ನಡೆಯು ಗೆಲುವಿನತ್ತ ಕೊಂಡೊಯ್ದಿರುವುದು ಖಷಿ ನೀಡಿದೆ ಎಂದು ತಿಳಿಸಿದ್ದಾರೆ.

ಸದ್ಯ 3ನೇ ದಿನದಾಟದ ಅಂತ್ಯಕ್ಕೆ ಭಾರತೀಯ ಪುರುಷರ ಮತ್ತು ಮಹಿಳೆಯರ ಎ ತಂಡಗಳು ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿಕೊಂಡಿದೆ. ಇನ್ನು ಪುರುಷರ ಬಿ ತಂಡವು 9ನೇ ಸ್ಥಾನದಲ್ಲಿದ್ದರೆ, ಸಿ ತಂಡವು 13ನೇ ಸ್ಥಾನ ಅಲಂಕರಿಸಿದೆ. ಹಾಗೆಯೇ ಭಾರತೀಯ ಮಹಿಳೆಯರ ಬಿ ತಂಡವು 11ನೇ ಸ್ಥಾನ ಪಡೆದಿದ್ದರೆ, ಭಾರತ ಸಿ ತಂಡವು 15ನೇ ಸ್ಥಾನದಲ್ಲಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ