Chess Olympiad 2024: ಟ್ರೋಫಿ ಗೆದ್ದು ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಸಂಭ್ರಮಿಸಿದ ಭಾರತೀಯ ಚೆಸ್ ಚತುರರು

Chess Olympiad 2024: ಚೆಸ್ ಒಲಿಂಪಿಯಾಡ್​ನ ಮುಕ್ತ ವಿಭಾಗದ ಫೈನಲ್​ನಲ್ಲಿ ಭಾರತ ಪುರುಷರ ತಂಡವು 3.5-0.5 ಅಂತರದಿಂದ ಸ್ಲೊವೇನಿಯಾ ತಂಡವನ್ನು ಸೋಲಿಸಿ ಚಿನ್ನದ ಪದಕ ಗೆದ್ದುಕೊಂಡಿತು. ಮತ್ತೊಂದೆಡೆ ಮಹಿಳಾ ತಂಡವು ಅಜರ್‌ಬೈಜಾನ್‌ ತಂಡವನ್ನು 3.5-0.5 ರಿಂದ ಸೋಲಿಸಿ ಬಂಗಾರದ ಪದಕವನ್ನು ತಮ್ಮದಾಗಿಸಿಕೊಂಡರು.

Chess Olympiad 2024: ಟ್ರೋಫಿ ಗೆದ್ದು ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಸಂಭ್ರಮಿಸಿದ ಭಾರತೀಯ ಚೆಸ್ ಚತುರರು
|

Updated on: Sep 23, 2024 | 1:33 PM

ಹಂಗೇರಿಯ ಬುಡಾಪೆಸ್ಟ್​ನಲ್ಲಿ ನಡೆದ ಚೆಸ್ ಒಲಿಂಪಿಯಾಡ್​ನಲ್ಲಿ ಭಾರತ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪುರುಷ ಮತ್ತು ಮಹಿಳಾ ಮುಕ್ತ ವಿಭಾಗದಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡರು. ಪುರುಷರ ವಿಭಾಗದಲ್ಲಿ ಸ್ಪರ್ಧಿಸಿದ್ದ ಡಿ.ಗುಕೇಶ್, ಆರ್.ಪ್ರಜ್ಞಾನಂದ, ಅರ್ಜುನ್ ಎರಿಗೇಸಿ 3-0 ಮುನ್ನಡೆ ತರುವ ಚಿನ್ನದ ಪದಕವನ್ನು ಖಚಿತಪಡಿಸಿದ್ದರು. ಇನ್ನು ಅಂತಿಮ ಸುತ್ತಿನಲ್ಲಿ ವಿದಿತ್ ಅವರು ಪಂದ್ಯವನ್ನು ಡ್ರಾದೊಂದಿಗೆ ಕೊನೆಗೊಳಿಸಿದರು. ಈ ಮೂಲಕ ಭಾರತ ಪುರುಷರ ತಂಡ ಸ್ಲೊವೇನಿಯಾವನ್ನು 3.5-0.5 ಅಂತರದಿಂದ ಸೋಲಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿತು.

ಮಹಿಳಾ ವಿಭಾಗದಲ್ಲಿ ಸ್ಪರ್ಧಿಸಿದ್ದ ಹರಿಕಾ ದ್ರೋಣವಲ್ಲಿ, ಆರ್ ವೈಶಾಲಿ, ದಿವ್ಯಾ ದೇಶಮುಖ್, ವಾಂತಿಕಾ ಅಗರ್ವಾಲ್ ಮತ್ತು ತಾನಿಯಾ ಸಚ್‌ದೇವ್ ತಂಡವು ಅಜರ್‌ಬೈಜಾನ್‌ ತಂಡವನ್ನು 3.5-0.5 ರಿಂದ ಸೋಲಿಸಿ ಚಿನ್ನ ಗೆದ್ದರು. ಈ ಪದಕಗಳೊಂದಿಗೆ ಚಾಂಪಿಯನ್ಸ್ ಟ್ರೋಫಿ ಪಡೆದ ಭಾರತೀಯ ಚೆಸ್ ಚತುರರು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಶೈಲಿಯಲ್ಲಿ ಪ್ರಶಸ್ತಿಯನ್ನು ಎತ್ತಿ ಹಿಡಿದದ್ದು ವಿಶೇಷವಾಗಿತ್ತು.

2024ರ ಟಿ20 ವಿಶ್ವಕಪ್​ ಗೆದ್ದ ಬಳಿಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸ್ಲೋ ವಾಕಿಂಗ್​ನೊಂದಿಗೆ ಟ್ರೋಫಿಯನ್ನು ಸ್ವೀಕರಿಸಿದ್ದರು. ಇದೇ ಶೈಲಿಯಲ್ಲಿ ಡಿ ಗುಕೇಶ್ ಮತ್ತು ತಾನಿಯಾ ಸಚ್‌ದೇವ್ ಟ್ರೋಫಿಯೊಂದಿಗೆ ಆಗಮಿಸಿ ಸಂಭ್ರಮಿಸಿದರು. ಇದೀಗ ಈ ಸಂಭ್ರಮದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ಪಡೆದುಕೊಳ್ಳುತ್ತಿದೆ.

 

 

Follow us
ಐದು ದಶಕಗಳ ಹೋರಾಟದ ಫಲವಾಗಿ ಕೆರೆಗೆ ಬಂತು ತುಂಗಭದ್ರಾ ನದಿ ನೀರು
ಐದು ದಶಕಗಳ ಹೋರಾಟದ ಫಲವಾಗಿ ಕೆರೆಗೆ ಬಂತು ತುಂಗಭದ್ರಾ ನದಿ ನೀರು
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
ಹೇಗಿತ್ತು ನೋಡಿ ಹರ್ಷಿಕಾ ಪೂಣಚ್ಚ ಬೇಬಿ ಶವರ್; ಯಾರೆಲ್ಲಾ ಬಂದಿದ್ರು?
ಹೇಗಿತ್ತು ನೋಡಿ ಹರ್ಷಿಕಾ ಪೂಣಚ್ಚ ಬೇಬಿ ಶವರ್; ಯಾರೆಲ್ಲಾ ಬಂದಿದ್ರು?
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ