AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chess World Cup 2023 Final: ಮೊದಲ ಗೇಮ್​ ಡ್ರಾನಲ್ಲಿ ಅಂತ್ಯ: ನಾಳೆ ಪಂದ್ಯ ಮುಂದುವರಿಕೆ

Chess World Cup 2023 Final: ಚೆಸ್ ವಿಶ್ವಕಪ್​ನ ಫೈನಲ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಈ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಿದ 2ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪ್ರಜ್ಞಾನಂದ  ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ 2000 ಮತ್ತು 2002 ರಲ್ಲಿ ಗ್ರ್ಯಾಂಡ್​ ಮಾಸ್ಟರ್ ವಿಶ್ವನಾಥನ್ ಆನಂದ್ ಅವರು ಈ ಸಾಧನೆ ಮಾಡಿದ್ದರು.

Chess World Cup 2023 Final: ಮೊದಲ ಗೇಮ್​ ಡ್ರಾನಲ್ಲಿ ಅಂತ್ಯ: ನಾಳೆ ಪಂದ್ಯ ಮುಂದುವರಿಕೆ
Magnus Carlsen - Praggnanandhaa
TV9 Web
| Edited By: |

Updated on:Aug 22, 2023 | 11:00 PM

Share

ಅಝರ್​ಬೈಜಾನ್​ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್​ನ  ಫೈನಲ್ ಪಂದ್ಯದ ಮೊದಲ ಗೇಮ್​ ಡ್ರಾನಲ್ಲಿ ಅಂತ್ಯಗೊಂಡಿದೆ.​ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್‌ಸೆನ್ ಹಾಗೂ ಭಾರತದ ಆರ್​. ಪ್ರಜ್ಞಾನಂದ (R Praggnanandhaa) ನಡುವಣ ಈ ಪಂದ್ಯದ 2ನೇ ಕ್ಲಾಸಿಕ್ ಗೇಮ್​ ನಾಳೆ ನಡೆಯಲಿದ್ದು, ಇದರಲ್ಲಿ ಗೆದ್ದವರು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಲಿದ್ದಾರೆ.

ಇನ್ನು  90 ನಿಮಿಷಗಳ ಮೊದಲ ಸುತ್ತಿನಲ್ಲಿ  ನಾರ್ವೆಯ ಕಾರ್ಲ್​ಸೆನ್ ಅವರನ್ನು ಆರಂಭದಲ್ಲೇ  ಪ್ರಜ್ಞಾನಂದ ಒತ್ತಡಕ್ಕೆ ಸಿಲುಕಿಸಿದ್ದರು.  ಅತ್ತ ಕಾರ್ಲ್​ಸೆನ್ ಚೆಕ್​ ನೀಡುವತ್ತ ಹೆಚ್ಚಿನ ಗಮನಹರಿಸಿದ್ದರು. ಆದರೆ ಒಂದು ಹಂತ ದಾಟುತ್ತಿದ್ದಂತೆ ಭಾರತೀಯ ಆಟಗಾರನ ಜಾಣ ನಡೆಗಳನ್ನು ಅರಿತ ಬಳಿಕ ರಕ್ಷಾಣತ್ಮಕ ಆಟಕ್ಕೆ ಒತ್ತು ನೀಡಿದರು.

ಈ ಮೂಲಕ ಮೊದಲ ಸುತ್ತಿನ ಅಂತಿಮ ಹಂತದಲ್ಲಿ ಜಾಣ ನಡೆ ಪ್ರದರ್ಶಿಸಿದ ಕಾರ್ಲ್​ಸೆನ್ ಪಂದ್ಯದ ಮೇಲೆ ಮತ್ತೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಮೊದಲ ಸುತ್ತು 35 ಚಲನೆಗಳ ನಂತರ ಡ್ರಾದಲ್ಲಿ ಕೊನೆಗೊಂಡಿತು.

ಪಂದ್ಯ ನಾಳೆ ಮುಂದುವರಿಕೆ:

ಈ ಪಂದ್ಯದ  ಎರಡನೇ ಕ್ಲಾಸಿಕಲ್ ಗೇಮ್​ ನಾಳೆ ಮುಂದುವರೆಯಲಿದೆ. ಇಲ್ಲಿ ಮೊದಲ ಸುತ್ತಿನಲ್ಲಿ ಬಿಳಿ ಕಾಯಿಗಳೊಂದಿಗೆ ಸ್ಪರ್ಧಿಸಿದ್ದ ಪ್ರಜ್ಞಾನಂದ ನಾಳೆ ಕಪ್ಪು ಕಾಯಿಗಳೊಂದಿಗೆ ಚದುರಂಗ ಚಲನೆ ಮಾಡಲಿದ್ದಾರೆ.

ಫೈನಲ್​ನಲ್ಲಿ 2 ಗೇಮ್ಸ್:

ಚೆಸ್ ವಿಶ್ವಕಪ್ ಫೈನಲ್ ಎರಡು ಕ್ಲಾಸಿಕ್ ಗೇಮ್​ಗಳನ್ನು ಒಳಗೊಂಡಿರುತ್ತದೆ. ಮೊದಲ 40 ಚಲನೆಗಳಿಗೆ ಇಬ್ಬರು ಆಟಗಾರರು 90 ನಿಮಿಷಗಳನ್ನು ಪಡೆಯುತ್ತಾರೆ. ಪ್ರತಿ ಚಲನೆಗೆ 30 ಸೆಕೆಂಡುಗಳ ಹೆಚ್ಚಳದೊಂದಿಗೆ ಉಳಿದ ಆಟಕ್ಕೆ 30 ನಿಮಿಷಗಳನ್ನು ನೀಡಲಾಗುತ್ತದೆ.

ಇನ್ನು ಎರಡು ಕ್ಲಾಸಿಕ್ ಗೇಮ್​ಗಳಲ್ಲೂ ಫಲಿತಾಂಶ ಹೊರಬರದಿದ್ದರೆ, 10-10 ನಿಮಿಷಗಳ ರ್ಯಾಪಿಡ್ ಗೇಮ್​ಗಳನ್ನು ಆಡಲಾಗುತ್ತದೆ. ಇದರಲ್ಲೂ ವಿಜೇತ ಯಾರೆಂದು ನಿರ್ಧಾರವಾಗದಿದ್ದರೆ 5 ನಿಮಿಷಗಳ ಎರಡು ರ್ಯಾಪಿಡ್​ ಗೇಮ್​ಗಳ ಅವಕಾಶ ನೀಡಲಾಗುತ್ತದೆ.

ಇನ್ನು ರ್ಯಾಪಿಡ್​ ಗೇಮ್​ಗಳು ಕೂಡ ಡ್ರಾಗೊಂಡರೆ ಸಡನ್ ಡೆತ್ ಮೋಡ್‌ನಲ್ಲಿ ಒಂದೇ ಬ್ಲಿಟ್ಝ್ ಗೇಮ್​ ಆಡಲಾಗುತ್ತದೆ. ಇದರಲ್ಲಿ ಗೆದ್ದವರು ಚಾಂಪಿಯನ್ ಆಗಲಿದ್ದಾರೆ. ಇದೀಗ ಮೊದಲ ಗೇಮ್​ ಡ್ರಾನಲ್ಲಿ ಅಂತ್ಯಗೊಂಡಿದ್ದು, ಪ್ರಜ್ಞಾನಂದರ ವಿಶ್ವಕಪ್ ಗೆಲ್ಲುವ ಕನಸು ಜೀವಂತವಾಗಿದೆ. ಇನ್ನು ಬುಧವಾರ ನಡೆಯಲಿರುವ 2ನೇ ಗೇಮ್​​ನಲ್ಲೇ ಫಲಿತಾಂಶ ಹೊರಬರಲಿದೆಯಾ ಅಥವಾ ಭರ್ಜರಿ ಪೈಪೋಟಿ ಮುಂದುವರೆಯಲಿದೆಯಾ ಕಾದು ನೋಡಬೇಕಿದೆ.

ಟೈಬ್ರೇಕರ್ ಜಯ:

ಇದಕ್ಕೂ ಮುನ್ನ ವಿಶ್ವದ ನಂಬರ್-3 ಚೆಸ್ ತಾರೆ ಫ್ಯಾಬಿಯಾನೊ ಕರುವಾನಾ ಹಾಗೂ ಪ್ರಜ್ಞಾನಂದ ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗಿದ್ದರು. ರೋಚಕ ಪೈಪೋಟಿಗೆ ಸಾಕ್ಷಿಯಾಗಿದ್ದ ಈ ಪಂದ್ಯದ ಮೊದಲೆರಡು ಗೇಮ್​ಗಳು ಡ್ರಾನಲ್ಲಿ ಅಂತ್ಯಗೊಂಡಿದ್ದವು. ಹೀಗಾಗಿ ಟೈಬ್ರೇಕರ್​ನಲ್ಲಿ ಪಂದ್ಯವನ್ನು ಮುಂದುವರೆಸಲಾಯಿತು.

ಈ ಹಂತದಲ್ಲಿ ಜಾಣ್ಮೆಯ ನಡೆಗಳೊಂದಿಗೆ  3.5-2.5 ಅಂತರದಿಂದ ಫ್ಯಾಬಿಯಾನೊ ಕರುವಾನಾಗೆ ಸೋಲುಣಿಸಿ  ಪ್ರಜ್ಞಾನಂದ ಫೈನಲ್​ಗೆ ಪ್ರವೇಶಿಸಿದ್ದರು.

ಇದನ್ನೂ ಓದಿ: ಹಣೆಯಲ್ಲಿ ಸದಾ ವಿಭೂತಿ ಧರಿಸಿಕೊಳ್ಳುವ 18 ವರ್ಷದ ಗ್ರ್ಯಾಂಡ್‌ಮಾಸ್ಟರ್ ಆರ್ ಪ್ರಜ್ಞಾನಂದ ಯಾರು ಗೊತ್ತೇ?

ಹೊಸ ಇತಿಹಾಸ ನಿರ್ಮಿಸಿದ  ಪ್ರಜ್ಞಾನಂದ:

ಚೆಸ್ ವಿಶ್ವಕಪ್​ನ ಫೈನಲ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಈ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಿದ 2ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪ್ರಜ್ಞಾನಂದ  ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ 2000 ಮತ್ತು 2002 ರಲ್ಲಿ ಗ್ರ್ಯಾಂಡ್​ ಮಾಸ್ಟರ್ ವಿಶ್ವನಾಥನ್ ಆನಂದ್ ಅವರು ಈ ಸಾಧನೆ ಮಾಡಿದ್ದರು. ಇದೀಗ ತಮ್ಮ 18ನೇ ವಯಸ್ಸಿನಲ್ಲಿ ಈ ಸಾಧನೆ ಮಾಡುವ ಮೂಲಕ ಪ್ರಜ್ಞಾನಂದ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.​

Published On - 7:55 pm, Tue, 22 August 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ