AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chess World Cup 2023: ಚೆಸ್​ ವಿಶ್ವಕಪ್​:  ಫೈನಲ್​ಗೆ ಪ್ರವೇಶಿಸಿದ ಪ್ರಜ್ಞಾನಂದ

R. Praggnanandhaa: ಕ್ಯಾಂಡಿಡೇಟ್ಸ್ ಪಂದ್ಯಾವಳಿಯಲ್ಲಿ ಐದು ಬಾರಿಯ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಬಳಿಕ ಸೆಮಿಫೈನಲ್​ ಪ್ರವೇಶಿಸಿದ ಮೊದಲ ಚೆಸ್ ಚತುರ ಎಂಬ ಹೆಗ್ಗಳಿಕಗೆ ಆರ್. ಪ್ರಜ್ಞಾನಂದ ಪಾತ್ರರಾಗಿದ್ದಾರೆ.

Chess World Cup 2023: ಚೆಸ್​ ವಿಶ್ವಕಪ್​:  ಫೈನಲ್​ಗೆ ಪ್ರವೇಶಿಸಿದ ಪ್ರಜ್ಞಾನಂದ
R Praggnanandhaa
TV9 Web
| Edited By: |

Updated on:Aug 21, 2023 | 11:15 PM

Share

ಅಝರ್​ಬೈಜಾನ್​ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್​ನ ಸೆಮಿಫೈನಲ್​ನಲ್ಲಿ ಜಯ ಸಾಧಿಸಿ ಭಾರತೀಯ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಫೈನಲ್​ಗೆ ಪ್ರವೇಶಿಸಿದ್ದಾರೆ. ಈ ಮೂಲಕ ಚೆಸ್ ವಿಶ್ವಕಪ್​ನಲ್ಲಿ ಫೈನಲ್​ ಪ್ರವೇಶಿಸಿದ 2ನೇ ಭಾರತೀಯ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ವಿಶ್ವ ಚಾಂಪಿಯನ್​ ವಿಶ್ವನಾಥನ್ ಆನಂದ್ 2000 ಹಾಗೂ 2002 ರಲ್ಲಿ ಈ ಸಾಧನೆ ಮಾಡಿದ್ದರು.

ಭಾನುವಾರ ನಡೆದ ಸೆಮಿಫೈನಲ್​ನ ಮೊದಲ ಗೇಮ್​ನಲ್ಲಿ ಅಮೆರಿಕದ ಫ್ಯಾಬಿಯಾನೊ ಕರುವಾನಾ ವಿರುದ್ಧ ಪ್ರಜ್ಞಾನಂದ ಡ್ರಾ ಸಾಧಿಸಿದ್ದರು. ಇನ್ನು 2ನೇ ಗೇಮ್​ನಲ್ಲಿ ಫ್ಯಾಬಿಯಾನೊ ಕರುವಾನಾ ಡ್ರಾ ಸಾಧಿಸುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಫಲಿತಾಂಶ ನಿರ್ಧಾರಕ್ಕಾಗಿ ಟೈಬ್ರೇಕರ್ ಮೊರೆ ಹೋಗಬೇಕಾಯಿತು.

ಅದರಂತೆ ಸೋಮವಾರ ನಡೆದ ಟೈಬ್ರೇಕರ್​ನಲ್ಲಿ ​ ಗೇಮ್​ನಲ್ಲಿ ಪ್ರಜ್ಞಾನಂದ ಮೇಲೆ ಒತ್ತಡ ಹಾಕುವಲ್ಲಿ ವಿಶ್ವದ 2ನೇ ಶ್ರೇಯಾಂಕಿತ ಚೆಸ್ ಪಟು  ಫ್ಯಾಬಿಯಾನೊ ಕರುವಾನಾ ಯಶಸ್ವಿಯಾಗಿದ್ದರು. ಆದರೆ ನಿರ್ಣಾಯಕ ನಡೆಗಳ ಹಂತದಲ್ಲಿ ಮೇಲುಗೈ ಸಾಧಿಸಿದ 18 ರ ಹರೆಯದ ಭಾರತೀಯ ಚೆಸ್ ಚತುರ ಪಂದ್ಯವನ್ನು ಡ್ರಾನತ್ತ ಕೊಂಡೊಯ್ಯುವಲ್ಲಿ ಯಶಸ್ವಿಯಾದರು.

2ನೇ ಟೈಬ್ರೇಕರ್​ ಗೇಮ್​ನಲ್ಲೂ ಜಾಣ ನಡೆ ಪ್ರದರ್ಶಿಸಿದ ಪ್ರಜ್ಞಾನಂದ ಫ್ಯಾಬಿಯಾನೊ ಕರುವಾನಾ ಅವರ ಗೆಲುವನ್ನು ತಡೆಯುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಪಂದ್ಯವು  10+10 ಟೈಬ್ರೇಕ್‌ನತ್ತ ಸಾಗಿತು. ಇದಾದ ಬಳಿಕ ಮೊದಲ ರ್ಯಾಪಿಡ್ ಟೈಬ್ರೇಕ್​ ನಲ್ಲಿ ಜಯ ಸಾಧಿಸುವ ಮೂಲಕ ಪ್ರಜ್ಞಾನಂದ ಫ್ಯಾಬಿಯಾನೊ ಮೇಲೆ ಒತ್ತಡ ಹೇರಿದರು.

ಅಂತಿಮವಾಗಿ ಫ್ಯಾಬಿಯಾನೊ ಕರುವಾನಾ ಅವರನ್ನು 3.5-2.5 ರಿಂದ ಸೋಲಿಸಿ ಪ್ರಜ್ಞಾನಂದ ಫೈನಲ್​ಗೆ ಪ್ರವೇಶಿಸಿದ್ದಾರೆ. ಇನ್ನು  ಫೈನಲ್​ನಲ್ಲಿ ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ಪ್ರಜ್ಞಾನಂದ ಸ್ಪರ್ಧಿಸಲಿದ್ದಾರೆ. ಇದರಲ್ಲಿ ಗೆಲ್ಲುವ ಮೂಲಕ ಯುವ ಚೆಸ್ ಚತುರ ಪ್ರಜ್ಞಾನಂದ ಹೊಸ ಇತಿಹಾಸ ನಿರ್ಮಿಸಲಿದ್ದಾರಾ ಕಾದು ನೋಡಬೇಕಿದೆ.

ಚದುರಂಗದಾಟದಲ್ಲಿ ವಿಶೇಷ ಸಾಧನೆ:

ಕ್ಯಾಂಡಿಡೇಟ್ಸ್ ಪಂದ್ಯಾವಳಿಯಲ್ಲಿ ಐದು ಬಾರಿಯ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಬಳಿಕ ಸೆಮಿಫೈನಲ್​ಗೆ​ ಪ್ರವೇಶಿಸಿದ ಮೊದಲ ಭಾರತೀಯ ಚೆಸ್ ಚತುರ ಎಂಬ ಹೆಗ್ಗಳಿಕಗೆ ಪಾತ್ರವಾಗಿದ್ದ 18 ವರ್ಷದ ಆರ್. ಪ್ರಜ್ಞಾನಂದ ಇದೀಗ ಫೈನಲ್​ಗೆ ಪ್ರವೇಶಿಸಿದ ಹಿರಿಮೆಗೂ ಪಾತ್ರರಾಗಿದ್ದಾರೆ. ಈ ಮೂಲಕ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಎಂಬ ದಾಖಲೆಯನ್ನು ತಮಿಳುನಾಡು ಮೂಲದ ರಮೇಶ್ ಬಾಬು ಪ್ರಜ್ಞಾನಂದ ನಿರ್ಮಿಸಿದ್ದಾರೆ.

ಫೈನಲ್​ ಬಗ್ಗೆ ಪ್ರಜ್ಞಾನಂದ ಹೇಳಿದ್ದೇನು?

ನಾನು ಈ ಪಂದ್ಯಾವಳಿಯಲ್ಲಿ ಮ್ಯಾಗ್ನಸ್ ಅವರನ್ನು ಎದುರಿಸುವುದನ್ನು ನಿರೀಕ್ಷಿಸಿರಲಿಲ್ಲ. ಏಕೆಂದರೆ ನಾನು ಅವರ ವಿರುದ್ಧ ಆಡುವ ಏಕೈಕ ಮಾರ್ಗವೆಂದರೆ ಅದು ಫೈನಲ್​ನಲ್ಲಿ ಮಾತ್ರ. ಅಲ್ಲದೆ ನಾನು ಫೈನಲ್‌ಗೇರುತ್ತೇನೆ ಎಂಬ ನಿರೀಕ್ಷೆ ಕೂಡ ಇರಲಿಲ್ಲ ಎಂದು ಪ್ರಜ್ಞಾನಂದ ಹೇಳಿದ್ದಾರೆ.

ಸೆಮಿಫೈನಲ್​ನಲ್ಲಿ ನನ್ನ ರಕ್ಷಣಾತ್ಮಕ ಆಟದಿಂದ ಗೆದ್ದಿದ್ದೇನೆ ಅಂದುಕೊಂಡಿದ್ದೇನೆ. ಏಕೆಂದರೆ ಕೆಲ ಗೇಮ್​ಗಳು ತುಂಬಾ ಕಠಿಣವಾಗಿತ್ತು. ಆದರೆ ಕೆಲ ಹಂತದಲ್ಲಿ ಫ್ಯಾಬಿಯಾನೊ ಎಡವಿದರು. ಅಂತಿಮವಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದೇನೆ. ಇದೀಗ ಫೈನಲ್​ಗೆ ಬಂದಿದ್ದೇನೆ. ಅಲ್ಲದೆ ಅತ್ಯುತ್ತಮವಾದದ್ದನ್ನು ನೀಡಲು ಪ್ರಯತ್ನಿಸುತ್ತೇನೆ ಎಂದು ಪ್ರಜ್ಞಾನಂದ ತಿಳಿಸಿದ್ದಾರೆ.

Published On - 9:03 pm, Mon, 21 August 23

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ