AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಗೇಮ್ಸ್​ ಫುಟ್​ಬಾಲ್: ಮೊದಲ ಪಂದ್ಯದಲ್ಲೇ ಭಾರತ ತಂಡಕ್ಕೆ ಹೀನಾಯ ಸೋಲು

Asian Games 2023: 2-1 ಅಂತರ ಸಾಧಿಸಿದ ಬಳಿಕ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಚೀನಾದ ಮುನ್ಪಡೆ ಆಟಗಾರರು 72 ಮತ್ತು 76 ನಿಮಿಷಗಳಲ್ಲಿ ಬ್ಯಾಕ್ ಟು ಬ್ಯಾಕ್ ಗೋಲು ಬಾರಿಸಿದರು. ಇತ್ತ 4-1 ಮುನ್ನಡೆ ಪಡೆಯುತ್ತಿದ್ದಂತೆ ಭಾರತೀಯ ಆಟಗಾರರು ನಿರಾಸೆಗೊಂಡರು.

ಏಷ್ಯನ್ ಗೇಮ್ಸ್​ ಫುಟ್​ಬಾಲ್: ಮೊದಲ ಪಂದ್ಯದಲ್ಲೇ ಭಾರತ ತಂಡಕ್ಕೆ ಹೀನಾಯ ಸೋಲು
India vs China
TV9 Web
| Edited By: |

Updated on: Sep 19, 2023 | 7:31 PM

Share

ಚೀನಾದ ಗುವಾಂಗ್‌ಝೌ ನಗರದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮೊದಲ ಪಂದ್ಯದಲ್ಲೇ ಭಾರತ ಫುಟ್​ಬಾಲ್ ತಂಡವು ಹೀನಾಯ ಸೋಲನುಭವಿಸಿದೆ. ಮಂಗಳವಾರ ಸಂಜೆ ನಡೆದ ಈ ಪಂದ್ಯದಲ್ಲಿ ಭಾರತ ತಂಡವನ್ನು ಚೀನಾ 5-1 ಅಂತರದಿಂದ ಪರಾಜಯಗೊಳಿಸಿದೆ.

ಈ ಪಂದ್ಯದಲ್ಲಿ ಭಾರತ ತಂಡವು ಆರಂಭದಿಂದಲೇ ಕೆಟ್ಟ ಪ್ರದರ್ಶನ ನೀಡಿತ್ತು. ಟೀಮ್ ಇಂಡಿಯಾ ಡಿಫೆಂಡರ್​ಗಳನ್ನು ಸುಲಭವಾಗಿ ವಂಚಿಸುವಲ್ಲಿ ಯಶಸ್ವಿಯಾದ ಚೀನಾ ತಂಡವು 17ನೇ ನಿಮಿಷದಲ್ಲಿಯೇ ಮೊದಲು ಗೋಲು ದಾಖಲಿಸಿತು.

ಆದರೆ, ಮೊದಲಾರ್ಧದಲ್ಲಿಯೇ ಭಾರತದ ರಾಹುಲ್ ಕೆ.ಪಿ ಅದ್ಭುತ ಗೋಲು ಬಾರಿಸಿ ಸ್ಕೋರ್ ಅಂತರವನ್ನು 1-1 ರಂತೆ ಸಮಬಲಗೊಳಿಸಿದರು. ಆದರೆ ದ್ವಿತೀಯಾರ್ಧದಲ್ಲೂ ಸಾಂಘಿಕ ಪ್ರದರ್ಶನ ನೀಡುವಲ್ಲಿ ಭಾರತ ತಂಡವು ವಿಫಲವಾಯಿತು. ಇದರ ಸಂಪೂರ್ಣ ಲಾಭ ಪಡೆದ ಚೀನಾ 51ನೇ ನಿಮಿಷದಲ್ಲಿ 2ನೇ ಗೋಲು ದಾಖಲಿಸಿದರು.

2-1 ಅಂತರ ಸಾಧಿಸಿದ ಬಳಿಕ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಚೀನಾದ ಮುನ್ಪಡೆ ಆಟಗಾರರು 72 ಮತ್ತು 76 ನಿಮಿಷಗಳಲ್ಲಿ ಬ್ಯಾಕ್ ಟು ಬ್ಯಾಕ್ ಗೋಲು ಬಾರಿಸಿದರು. ಇತ್ತ 4-1 ಮುನ್ನಡೆ ಪಡೆಯುತ್ತಿದ್ದಂತೆ ಭಾರತೀಯ ಆಟಗಾರರು ನಿರಾಸೆಗೊಂಡರು.

ಇನ್ನು ಪಂದ್ಯ ಮುಗಿಯಲು ನಿಮಿಷಗಳಿರುವಾಗ 91 ನಿಮಿಷದಲ್ಲಿ ಮತ್ತೊಂದು ಗೋಲು ದಾಖಲಿಸುವ ಮೂಲಕ ಚೀನಾ 5-1 ಅಂತರದಿಂದ ಮೊದಲ ಪಂದ್ಯದಲ್ಲಿ ಜಯಬೇರಿ ಬಾರಿಸಿತು.

ಈ ಪಂದ್ಯದಲ್ಲಿ ಕಣಕ್ಕಿಳಿದ ಭಾರತದ ಪ್ಲೇಯಿಂಗ್-11:

ಗುರ್ಮೀತ್ ಸಿಂಗ್ (ಗೋಲ್‌ಕೀಪರ್), ಲಾಲ್ಚುನುಂಗ, ಸಂದೇಶ್, ಆಯುಷ್, ಸುಮಿತ್, ಅಮರ್‌ಜೀತ್, ರಹೀಮ್ ಅಲಿ, ರಾಹುಲ್ ಕೆಪಿ, ಸುನಿಲ್ ಛೆಟ್ರಿ (ನಾಯಕ), ಬಿ. ಮಿರಾಂಡಾ, ಅಬ್ದುಲ್ ಅಂಜು

ಬದಲಿ ಆಟಗಾರರು: ವಿಶಾಲ್ ಯಾದವ್ (ಗೋಲ್‌ಕೀಪರ್), ಸ್ಯಾಮ್ಯುಯೆಲ್ ಜೇಮ್ಸ್, ವಿ. ಬ್ಯಾರೆಟೊ, ರೋಹಿತ್ ದಾನು, ಧೀರಜ್ ಸಿಂಗ್, ಅಜ್ಫರ್ ನೂರಾನಿ.

Follow Us
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ