AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಗೇಮ್ಸ್​ ಫುಟ್​ಬಾಲ್: ಮೊದಲ ಪಂದ್ಯದಲ್ಲೇ ಭಾರತ ತಂಡಕ್ಕೆ ಹೀನಾಯ ಸೋಲು

Asian Games 2023: 2-1 ಅಂತರ ಸಾಧಿಸಿದ ಬಳಿಕ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಚೀನಾದ ಮುನ್ಪಡೆ ಆಟಗಾರರು 72 ಮತ್ತು 76 ನಿಮಿಷಗಳಲ್ಲಿ ಬ್ಯಾಕ್ ಟು ಬ್ಯಾಕ್ ಗೋಲು ಬಾರಿಸಿದರು. ಇತ್ತ 4-1 ಮುನ್ನಡೆ ಪಡೆಯುತ್ತಿದ್ದಂತೆ ಭಾರತೀಯ ಆಟಗಾರರು ನಿರಾಸೆಗೊಂಡರು.

ಏಷ್ಯನ್ ಗೇಮ್ಸ್​ ಫುಟ್​ಬಾಲ್: ಮೊದಲ ಪಂದ್ಯದಲ್ಲೇ ಭಾರತ ತಂಡಕ್ಕೆ ಹೀನಾಯ ಸೋಲು
India vs China
TV9 Web
| Edited By: |

Updated on: Sep 19, 2023 | 7:31 PM

Share

ಚೀನಾದ ಗುವಾಂಗ್‌ಝೌ ನಗರದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮೊದಲ ಪಂದ್ಯದಲ್ಲೇ ಭಾರತ ಫುಟ್​ಬಾಲ್ ತಂಡವು ಹೀನಾಯ ಸೋಲನುಭವಿಸಿದೆ. ಮಂಗಳವಾರ ಸಂಜೆ ನಡೆದ ಈ ಪಂದ್ಯದಲ್ಲಿ ಭಾರತ ತಂಡವನ್ನು ಚೀನಾ 5-1 ಅಂತರದಿಂದ ಪರಾಜಯಗೊಳಿಸಿದೆ.

ಈ ಪಂದ್ಯದಲ್ಲಿ ಭಾರತ ತಂಡವು ಆರಂಭದಿಂದಲೇ ಕೆಟ್ಟ ಪ್ರದರ್ಶನ ನೀಡಿತ್ತು. ಟೀಮ್ ಇಂಡಿಯಾ ಡಿಫೆಂಡರ್​ಗಳನ್ನು ಸುಲಭವಾಗಿ ವಂಚಿಸುವಲ್ಲಿ ಯಶಸ್ವಿಯಾದ ಚೀನಾ ತಂಡವು 17ನೇ ನಿಮಿಷದಲ್ಲಿಯೇ ಮೊದಲು ಗೋಲು ದಾಖಲಿಸಿತು.

ಆದರೆ, ಮೊದಲಾರ್ಧದಲ್ಲಿಯೇ ಭಾರತದ ರಾಹುಲ್ ಕೆ.ಪಿ ಅದ್ಭುತ ಗೋಲು ಬಾರಿಸಿ ಸ್ಕೋರ್ ಅಂತರವನ್ನು 1-1 ರಂತೆ ಸಮಬಲಗೊಳಿಸಿದರು. ಆದರೆ ದ್ವಿತೀಯಾರ್ಧದಲ್ಲೂ ಸಾಂಘಿಕ ಪ್ರದರ್ಶನ ನೀಡುವಲ್ಲಿ ಭಾರತ ತಂಡವು ವಿಫಲವಾಯಿತು. ಇದರ ಸಂಪೂರ್ಣ ಲಾಭ ಪಡೆದ ಚೀನಾ 51ನೇ ನಿಮಿಷದಲ್ಲಿ 2ನೇ ಗೋಲು ದಾಖಲಿಸಿದರು.

2-1 ಅಂತರ ಸಾಧಿಸಿದ ಬಳಿಕ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಚೀನಾದ ಮುನ್ಪಡೆ ಆಟಗಾರರು 72 ಮತ್ತು 76 ನಿಮಿಷಗಳಲ್ಲಿ ಬ್ಯಾಕ್ ಟು ಬ್ಯಾಕ್ ಗೋಲು ಬಾರಿಸಿದರು. ಇತ್ತ 4-1 ಮುನ್ನಡೆ ಪಡೆಯುತ್ತಿದ್ದಂತೆ ಭಾರತೀಯ ಆಟಗಾರರು ನಿರಾಸೆಗೊಂಡರು.

ಇನ್ನು ಪಂದ್ಯ ಮುಗಿಯಲು ನಿಮಿಷಗಳಿರುವಾಗ 91 ನಿಮಿಷದಲ್ಲಿ ಮತ್ತೊಂದು ಗೋಲು ದಾಖಲಿಸುವ ಮೂಲಕ ಚೀನಾ 5-1 ಅಂತರದಿಂದ ಮೊದಲ ಪಂದ್ಯದಲ್ಲಿ ಜಯಬೇರಿ ಬಾರಿಸಿತು.

ಈ ಪಂದ್ಯದಲ್ಲಿ ಕಣಕ್ಕಿಳಿದ ಭಾರತದ ಪ್ಲೇಯಿಂಗ್-11:

ಗುರ್ಮೀತ್ ಸಿಂಗ್ (ಗೋಲ್‌ಕೀಪರ್), ಲಾಲ್ಚುನುಂಗ, ಸಂದೇಶ್, ಆಯುಷ್, ಸುಮಿತ್, ಅಮರ್‌ಜೀತ್, ರಹೀಮ್ ಅಲಿ, ರಾಹುಲ್ ಕೆಪಿ, ಸುನಿಲ್ ಛೆಟ್ರಿ (ನಾಯಕ), ಬಿ. ಮಿರಾಂಡಾ, ಅಬ್ದುಲ್ ಅಂಜು

ಬದಲಿ ಆಟಗಾರರು: ವಿಶಾಲ್ ಯಾದವ್ (ಗೋಲ್‌ಕೀಪರ್), ಸ್ಯಾಮ್ಯುಯೆಲ್ ಜೇಮ್ಸ್, ವಿ. ಬ್ಯಾರೆಟೊ, ರೋಹಿತ್ ದಾನು, ಧೀರಜ್ ಸಿಂಗ್, ಅಜ್ಫರ್ ನೂರಾನಿ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!