AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಗೇಮ್ಸ್​ ಫುಟ್​ಬಾಲ್: ಮೊದಲ ಪಂದ್ಯದಲ್ಲೇ ಭಾರತ ತಂಡಕ್ಕೆ ಹೀನಾಯ ಸೋಲು

Asian Games 2023: 2-1 ಅಂತರ ಸಾಧಿಸಿದ ಬಳಿಕ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಚೀನಾದ ಮುನ್ಪಡೆ ಆಟಗಾರರು 72 ಮತ್ತು 76 ನಿಮಿಷಗಳಲ್ಲಿ ಬ್ಯಾಕ್ ಟು ಬ್ಯಾಕ್ ಗೋಲು ಬಾರಿಸಿದರು. ಇತ್ತ 4-1 ಮುನ್ನಡೆ ಪಡೆಯುತ್ತಿದ್ದಂತೆ ಭಾರತೀಯ ಆಟಗಾರರು ನಿರಾಸೆಗೊಂಡರು.

ಏಷ್ಯನ್ ಗೇಮ್ಸ್​ ಫುಟ್​ಬಾಲ್: ಮೊದಲ ಪಂದ್ಯದಲ್ಲೇ ಭಾರತ ತಂಡಕ್ಕೆ ಹೀನಾಯ ಸೋಲು
India vs China
TV9 Web
| Edited By: |

Updated on: Sep 19, 2023 | 7:31 PM

Share

ಚೀನಾದ ಗುವಾಂಗ್‌ಝೌ ನಗರದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮೊದಲ ಪಂದ್ಯದಲ್ಲೇ ಭಾರತ ಫುಟ್​ಬಾಲ್ ತಂಡವು ಹೀನಾಯ ಸೋಲನುಭವಿಸಿದೆ. ಮಂಗಳವಾರ ಸಂಜೆ ನಡೆದ ಈ ಪಂದ್ಯದಲ್ಲಿ ಭಾರತ ತಂಡವನ್ನು ಚೀನಾ 5-1 ಅಂತರದಿಂದ ಪರಾಜಯಗೊಳಿಸಿದೆ.

ಈ ಪಂದ್ಯದಲ್ಲಿ ಭಾರತ ತಂಡವು ಆರಂಭದಿಂದಲೇ ಕೆಟ್ಟ ಪ್ರದರ್ಶನ ನೀಡಿತ್ತು. ಟೀಮ್ ಇಂಡಿಯಾ ಡಿಫೆಂಡರ್​ಗಳನ್ನು ಸುಲಭವಾಗಿ ವಂಚಿಸುವಲ್ಲಿ ಯಶಸ್ವಿಯಾದ ಚೀನಾ ತಂಡವು 17ನೇ ನಿಮಿಷದಲ್ಲಿಯೇ ಮೊದಲು ಗೋಲು ದಾಖಲಿಸಿತು.

ಆದರೆ, ಮೊದಲಾರ್ಧದಲ್ಲಿಯೇ ಭಾರತದ ರಾಹುಲ್ ಕೆ.ಪಿ ಅದ್ಭುತ ಗೋಲು ಬಾರಿಸಿ ಸ್ಕೋರ್ ಅಂತರವನ್ನು 1-1 ರಂತೆ ಸಮಬಲಗೊಳಿಸಿದರು. ಆದರೆ ದ್ವಿತೀಯಾರ್ಧದಲ್ಲೂ ಸಾಂಘಿಕ ಪ್ರದರ್ಶನ ನೀಡುವಲ್ಲಿ ಭಾರತ ತಂಡವು ವಿಫಲವಾಯಿತು. ಇದರ ಸಂಪೂರ್ಣ ಲಾಭ ಪಡೆದ ಚೀನಾ 51ನೇ ನಿಮಿಷದಲ್ಲಿ 2ನೇ ಗೋಲು ದಾಖಲಿಸಿದರು.

2-1 ಅಂತರ ಸಾಧಿಸಿದ ಬಳಿಕ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಚೀನಾದ ಮುನ್ಪಡೆ ಆಟಗಾರರು 72 ಮತ್ತು 76 ನಿಮಿಷಗಳಲ್ಲಿ ಬ್ಯಾಕ್ ಟು ಬ್ಯಾಕ್ ಗೋಲು ಬಾರಿಸಿದರು. ಇತ್ತ 4-1 ಮುನ್ನಡೆ ಪಡೆಯುತ್ತಿದ್ದಂತೆ ಭಾರತೀಯ ಆಟಗಾರರು ನಿರಾಸೆಗೊಂಡರು.

ಇನ್ನು ಪಂದ್ಯ ಮುಗಿಯಲು ನಿಮಿಷಗಳಿರುವಾಗ 91 ನಿಮಿಷದಲ್ಲಿ ಮತ್ತೊಂದು ಗೋಲು ದಾಖಲಿಸುವ ಮೂಲಕ ಚೀನಾ 5-1 ಅಂತರದಿಂದ ಮೊದಲ ಪಂದ್ಯದಲ್ಲಿ ಜಯಬೇರಿ ಬಾರಿಸಿತು.

ಈ ಪಂದ್ಯದಲ್ಲಿ ಕಣಕ್ಕಿಳಿದ ಭಾರತದ ಪ್ಲೇಯಿಂಗ್-11:

ಗುರ್ಮೀತ್ ಸಿಂಗ್ (ಗೋಲ್‌ಕೀಪರ್), ಲಾಲ್ಚುನುಂಗ, ಸಂದೇಶ್, ಆಯುಷ್, ಸುಮಿತ್, ಅಮರ್‌ಜೀತ್, ರಹೀಮ್ ಅಲಿ, ರಾಹುಲ್ ಕೆಪಿ, ಸುನಿಲ್ ಛೆಟ್ರಿ (ನಾಯಕ), ಬಿ. ಮಿರಾಂಡಾ, ಅಬ್ದುಲ್ ಅಂಜು

ಬದಲಿ ಆಟಗಾರರು: ವಿಶಾಲ್ ಯಾದವ್ (ಗೋಲ್‌ಕೀಪರ್), ಸ್ಯಾಮ್ಯುಯೆಲ್ ಜೇಮ್ಸ್, ವಿ. ಬ್ಯಾರೆಟೊ, ರೋಹಿತ್ ದಾನು, ಧೀರಜ್ ಸಿಂಗ್, ಅಜ್ಫರ್ ನೂರಾನಿ.

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ