AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಗೇಮ್ಸ್​ ಫುಟ್​ಬಾಲ್: ಮೊದಲ ಪಂದ್ಯದಲ್ಲೇ ಭಾರತ ತಂಡಕ್ಕೆ ಹೀನಾಯ ಸೋಲು

Asian Games 2023: 2-1 ಅಂತರ ಸಾಧಿಸಿದ ಬಳಿಕ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಚೀನಾದ ಮುನ್ಪಡೆ ಆಟಗಾರರು 72 ಮತ್ತು 76 ನಿಮಿಷಗಳಲ್ಲಿ ಬ್ಯಾಕ್ ಟು ಬ್ಯಾಕ್ ಗೋಲು ಬಾರಿಸಿದರು. ಇತ್ತ 4-1 ಮುನ್ನಡೆ ಪಡೆಯುತ್ತಿದ್ದಂತೆ ಭಾರತೀಯ ಆಟಗಾರರು ನಿರಾಸೆಗೊಂಡರು.

ಏಷ್ಯನ್ ಗೇಮ್ಸ್​ ಫುಟ್​ಬಾಲ್: ಮೊದಲ ಪಂದ್ಯದಲ್ಲೇ ಭಾರತ ತಂಡಕ್ಕೆ ಹೀನಾಯ ಸೋಲು
India vs China
TV9 Web
| Edited By: |

Updated on: Sep 19, 2023 | 7:31 PM

Share

ಚೀನಾದ ಗುವಾಂಗ್‌ಝೌ ನಗರದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮೊದಲ ಪಂದ್ಯದಲ್ಲೇ ಭಾರತ ಫುಟ್​ಬಾಲ್ ತಂಡವು ಹೀನಾಯ ಸೋಲನುಭವಿಸಿದೆ. ಮಂಗಳವಾರ ಸಂಜೆ ನಡೆದ ಈ ಪಂದ್ಯದಲ್ಲಿ ಭಾರತ ತಂಡವನ್ನು ಚೀನಾ 5-1 ಅಂತರದಿಂದ ಪರಾಜಯಗೊಳಿಸಿದೆ.

ಈ ಪಂದ್ಯದಲ್ಲಿ ಭಾರತ ತಂಡವು ಆರಂಭದಿಂದಲೇ ಕೆಟ್ಟ ಪ್ರದರ್ಶನ ನೀಡಿತ್ತು. ಟೀಮ್ ಇಂಡಿಯಾ ಡಿಫೆಂಡರ್​ಗಳನ್ನು ಸುಲಭವಾಗಿ ವಂಚಿಸುವಲ್ಲಿ ಯಶಸ್ವಿಯಾದ ಚೀನಾ ತಂಡವು 17ನೇ ನಿಮಿಷದಲ್ಲಿಯೇ ಮೊದಲು ಗೋಲು ದಾಖಲಿಸಿತು.

ಆದರೆ, ಮೊದಲಾರ್ಧದಲ್ಲಿಯೇ ಭಾರತದ ರಾಹುಲ್ ಕೆ.ಪಿ ಅದ್ಭುತ ಗೋಲು ಬಾರಿಸಿ ಸ್ಕೋರ್ ಅಂತರವನ್ನು 1-1 ರಂತೆ ಸಮಬಲಗೊಳಿಸಿದರು. ಆದರೆ ದ್ವಿತೀಯಾರ್ಧದಲ್ಲೂ ಸಾಂಘಿಕ ಪ್ರದರ್ಶನ ನೀಡುವಲ್ಲಿ ಭಾರತ ತಂಡವು ವಿಫಲವಾಯಿತು. ಇದರ ಸಂಪೂರ್ಣ ಲಾಭ ಪಡೆದ ಚೀನಾ 51ನೇ ನಿಮಿಷದಲ್ಲಿ 2ನೇ ಗೋಲು ದಾಖಲಿಸಿದರು.

2-1 ಅಂತರ ಸಾಧಿಸಿದ ಬಳಿಕ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಚೀನಾದ ಮುನ್ಪಡೆ ಆಟಗಾರರು 72 ಮತ್ತು 76 ನಿಮಿಷಗಳಲ್ಲಿ ಬ್ಯಾಕ್ ಟು ಬ್ಯಾಕ್ ಗೋಲು ಬಾರಿಸಿದರು. ಇತ್ತ 4-1 ಮುನ್ನಡೆ ಪಡೆಯುತ್ತಿದ್ದಂತೆ ಭಾರತೀಯ ಆಟಗಾರರು ನಿರಾಸೆಗೊಂಡರು.

ಇನ್ನು ಪಂದ್ಯ ಮುಗಿಯಲು ನಿಮಿಷಗಳಿರುವಾಗ 91 ನಿಮಿಷದಲ್ಲಿ ಮತ್ತೊಂದು ಗೋಲು ದಾಖಲಿಸುವ ಮೂಲಕ ಚೀನಾ 5-1 ಅಂತರದಿಂದ ಮೊದಲ ಪಂದ್ಯದಲ್ಲಿ ಜಯಬೇರಿ ಬಾರಿಸಿತು.

ಈ ಪಂದ್ಯದಲ್ಲಿ ಕಣಕ್ಕಿಳಿದ ಭಾರತದ ಪ್ಲೇಯಿಂಗ್-11:

ಗುರ್ಮೀತ್ ಸಿಂಗ್ (ಗೋಲ್‌ಕೀಪರ್), ಲಾಲ್ಚುನುಂಗ, ಸಂದೇಶ್, ಆಯುಷ್, ಸುಮಿತ್, ಅಮರ್‌ಜೀತ್, ರಹೀಮ್ ಅಲಿ, ರಾಹುಲ್ ಕೆಪಿ, ಸುನಿಲ್ ಛೆಟ್ರಿ (ನಾಯಕ), ಬಿ. ಮಿರಾಂಡಾ, ಅಬ್ದುಲ್ ಅಂಜು

ಬದಲಿ ಆಟಗಾರರು: ವಿಶಾಲ್ ಯಾದವ್ (ಗೋಲ್‌ಕೀಪರ್), ಸ್ಯಾಮ್ಯುಯೆಲ್ ಜೇಮ್ಸ್, ವಿ. ಬ್ಯಾರೆಟೊ, ರೋಹಿತ್ ದಾನು, ಧೀರಜ್ ಸಿಂಗ್, ಅಜ್ಫರ್ ನೂರಾನಿ.

Follow Us
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ