AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chris Gayle: ಟಿ-20 ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡಿರದ ವಿಶೇಷ ದಾಖಲೆ ನಿರ್ಮಿಸಿದ ಕ್ರಿಸ್ ಗೇಲ್

Chris Gayle: ಆಸೀಸ್ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದ ಗೇಲ್ ಕೇವಲ 38 ಎಸೆತಗಳಲ್ಲಿ 4 ಬೌಂಡರಿ, 7 ಸಿಕ್ಸ್ ಸಿಡಿಸಿ 67 ರನ್ ಚಚ್ಚಿದರು. ಜೊತೆಗೆ ಟಿ-20 ಇತಿಹಾಸದಲ್ಲಿ ಒಟ್ಟು 14,000 ರನ್ ಪೂರೈಸಿದರು.

Chris Gayle: ಟಿ-20 ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡಿರದ ವಿಶೇಷ ದಾಖಲೆ ನಿರ್ಮಿಸಿದ ಕ್ರಿಸ್ ಗೇಲ್
ಏಕೆಂದರೆ ಗೇಲ್ ಇತ್ತೀಚೆಗೆ ಮುಕ್ತಾಯವಾದ ಟಿ20 ವಿಶ್ವಕಪ್​ನಲ್ಲಿ ನಿವೃತ್ತಿ ನೀಡುವ ಸುಳಿವು ನೀಡಿದ್ದರು. ಹೀಗಾಗಿ 42 ವರ್ಷದ ಕ್ರಿಸ್ ಗೇಲ್ ಮುಂದಿನ ಸೀಸನ್ ಐಪಿಎಲ್ ಆಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತು. ಇದೀಗ ಎಬಿಡಿ ನಿವೃತ್ತಿ ಬೆನ್ನಲ್ಲೇ ಈ ಎಲ್ಲಾ ಪ್ರಶ್ನೆಗಳಿಗೆ ಕ್ರಿಸ್ ಗೇಲ್ ಉತ್ತರ ನೀಡಿದ್ದಾರೆ. ಅದು ಕೂಡ ಒಂದೇ ಒಂದು ವಾಕ್ಯದ ಮೂಲಕ ಎಂಬುದು ವಿಶೇಷ.
TV9 Web
| Edited By: |

Updated on:Jul 13, 2021 | 10:11 AM

Share

ಕೆರಿಬಿಯನ್ನರ ನಾಡಿನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ (Australia) ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ವೆಸ್ಟ್​ ಇಂಡೀಸ್ (West Indies) ತಂಡದ ಸ್ಫೋಟಕ ಬ್ಯಾಟ್ಸ್​ಮನ್​ ಕ್ರಿಸ್ ಗೇಲ್ (Chris Gayle) ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಟಿ-20 ಕ್ರಿಕೆಟ್ ಇತಿಹಾಸದಲ್ಲಿ ಈವರೆಗೆ ಯಾರೂ ಮಾಡಿರದ ವಿಶೇಷ ಸಾಧನೆ ಗೈದಿದ್ದಾರೆ. ಗೇಲ್ ಟಿ-20 ಇತಿಹಾಸದಲ್ಲಿ ಒಟ್ಟು 14,000 ರನ್ ಪೂರೈಸಿದ ಮೊಟ್ಟ ಮೊದಲ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

ಆಸೀಸ್ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದ ಗೇಲ್ ಕೇವಲ 38 ಎಸೆತಗಳಲ್ಲಿ 4 ಬೌಂಡರಿ, 7 ಸಿಕ್ಸ್ ಸಿಡಿಸಿ 67 ರನ್ ಚಚ್ಚಿದರು. ಈ ಮೂಲಕ ಟಿ-20 ಕ್ರಿಕೆಟ್​ನಲ್ಲಿ ಅರ್ಧಶತಕದ ಬರ ಎದುರಿಸುತ್ತಿದ್ದ ಗೇಲ್ ಕೊನೆಗೂ ಕಮ್​ಬ್ಯಾಕ್ ಮಾಡಿದರು. 2016 ರಲ್ಲಿ ಗೇಲ್ ಬ್ಯಾಟ್​ನಿಂದ ಟಿ-20ಯಲ್ಲಿ ಕೊನೆಯ ಅರ್ಧಶತಕ ಬಂದಿತ್ತು.

ಗೇಲ್ ಅವರ ಸ್ಫೋಟಕ ಆಟದ ನೆರವಿನಿಂದ ವೆಸ್ಟ್​ ಇಂಡೀಸ್ ತಂಡ ಆಸೀಸ್ ವಿರುದ್ಧದ ಟಿ-20 ಸರಣಿಯನ್ನೂ ವಶಪಡಿಸಿಕೊಂಡಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ಗೇಲ್, “ನಿಮಗೆಲ್ಲ ತಿಳಿದಿರುವಾಗೆ ನಾನು ಬ್ಯಾಟಿಂಗ್​ನಲ್ಲಿ ಸ್ಟ್ರಗಲ್ ಮಾಡುತ್ತಿದ್ದೆ. ರನ್ ಗಳಿಸಲು ಕಷ್ಟ ಪಡುತ್ತಿದ್ದೆ. ಇದೊಂದು ಅದ್ಭುತ ಜರ್ನಿ, ಸರಣಿ ಜಯ ಸಾಧಿಸಿದ್ದು ತುಂಬಾನೆ ಸಂತಸ ನೀಡಿದೆ” ಎಂದು ಹೇಳಿದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 20 ಓವರ್​ನಲ್ಲಿ 6 ವಿಕೆಟ್ ಕಳೆದುಕೊಂಡು 141 ರನ್ ಗಳಿಸಿತಷ್ಟೆ. ಹೆನ್ರಿಕ್ಯೂಸ್ 29 ಎಸೆತಗಳಲ್ಲಿ 33 ರನ್ ಬಾರಿಸಿದರೆ, ನಾಯಕ ಆ್ಯರೋನ್ ಫಿಂಚ್ 31 ಎಸೆತಗಳಲ್ಲಿ 30 ರನ್ ಗಳಿಸಿದರು. ವಿಂಡೀಸ್ ಪರ ಹೇಡನ್ ವಾಲ್ಶ್ 2 ವಿಕೆಟ್ ಪಡೆದರು.

ಇತ್ತ 142 ರನ್​ಗಳ ಸಾಧಾರಣ ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್​ ಇಂಡೀಸ್ ಆರಂಭದಲ್ಲಿ ಆಂಡ್ರೆ ಫ್ಲೆಟ್ಚರ್(4) ಮತ್ತು ಸಿಮಾನ್ಸ್(15) ವಿಕೆಟ್ ಕಳೆದುಕೊಂಡಿತಾದರು, ನಂತರದಲ್ಲಿ ಶುರುವಾಗಿದ್ದು ಗೇಲ್ ಆರ್ಭಟ. ನಾಯಕ ನಿಕೋಲಸ್ ಪೂರನ್ ಜೊತೆಯಾದ ಗೇಲ್ ಮನಬಂದಂತೆ ಬ್ಯಾಟ್ ಬೀಸಿದರು. ಬೌಂಡರಿ-ಸಿಕ್ಸರ್​ಗಳ ಮಳೆ ಸುರಿಸಿದರು.

ಗೇಲ್ ಕೇವಲ 38 ಎಸೆತಗಳಲ್ಲಿ 4 ಬೌಂಡರಿ, 7 ಸಿಕ್ಸ್ ಸಿಡಿಸಿ 67 ರನ್ ಚಚ್ಚಿದರು. ಪೂರನ್ 27 ಎಸೆತಗಳಲ್ಲಿ ಅಜೇಯ 32 ರನ್ ಗಳಿಸಿದರು. ವಿಂಡೀಸ್ 14.5 ಓವರ್​ನಲ್ಲೇ 4 ವಿಕೆಟ್ ಕಳೆದುಕೊಂಡು 142 ರನ್ ಬಾರಿಸುವ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ್ದಲ್ಲದೆ ಸರಣಿ ವಶಪಡಿಸಿಕೊಂಡಿತು.

ಸದ್ಯ ಐದು ಪಂದ್ಯಗಳ ಟಿ-20 ಸರಣಿಯಲ್ಲಿ ವೆಸ್ಟ್ ಇಂಡೀಸ್ 3-0 ಮುನ್ನಡೆ ಸಾಧಿಸಿದೆ. ನಾಲ್ಕನೇ ಪಂದ್ಯ ಜುಲೈ 14 ರಂದು ನಡೆಯಲಿದೆ.

ICC Player of the Month: ಭಾರತೀಯ ಆಟಗಾರರಿಗೆ ಮತ್ತೊಮ್ಮೆ ನಿರಾಶೆ! ಡೆವೊನ್ ಕಾನ್ವೇಗೆ ಒಲಿದ ಪ್ರಶಸ್ತಿ

IND vs SL: ಭಾರತ ವಿರುದ್ಧದ ಸರಣಿ ಆರಂಭಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಸೇನೆಗೆ ಸೇರಿದ ಲಂಕಾ ತಂಡದ ಮಾಜಿ ನಾಯಕ

Published On - 10:06 am, Tue, 13 July 21

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ