AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಕರಾಝ್ ವಿರುದ್ಧ ಸೋಲಿನ ಸೇಡು ತೀರಿಸಿಕೊಂಡ ಜೊಕೊವಿಚ್

Cincinnati Open 2023: ವಿಂಬಲ್ಡನ್ ಟೂರ್ನಿಯಲ್ಲಿ 20 ರ ಹರೆಯದ ಕಾರ್ಲೊಸ್ ಅಲ್ಕರಾಝ್ ವಿರುದ್ಧ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿದ್ದ ನೊವಾಕ್ ಜೊಕೊವಿಚ್ ಈ ಬಾರಿ ಸೇಡು ತೀರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಅಲ್ಕರಾಝ್ ವಿರುದ್ಧ ಸೋಲಿನ ಸೇಡು ತೀರಿಸಿಕೊಂಡ ಜೊಕೊವಿಚ್
Djokovic vs Alcaraz
TV9 Web
| Edited By: |

Updated on: Aug 21, 2023 | 9:59 PM

Share

ಯುಎಸ್​ಎನಲ್ಲಿ ನಡೆದ ಸಿನ್ಸನಾಟಿ ಓಪನ್​ ಟೆನಿಸ್ ಟೂರ್ನಿಯಲ್ಲಿ ನೊವಾಕ್ ಜೊಕೊವಿಚ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಫೈನಲ್​ ಪಂದ್ಯದಲ್ಲಿ ವಿಂಬಲ್ಡನ್ ಚಾಂಪಿಯನ್ ಕಾರ್ಲೊಸ್ ಅಲ್ಕರಾಝ್​ಗೆ ಸೋಲುಣಿಸಿ ಸರ್ಬಿಯಾ ಟೆನಿಸ್ ತಾರೆ ಈ ಸಾಧನೆ ಮಾಡಿದರು.

ವಿಂಬಲ್ಡನ್​​ ಟೂರ್ನಿಯಲ್ಲಿ ಜೊಕೊವಿಚ್​ಗೆ ಸೋಲುಣಿಸಿ ಅಲ್ಕರಾಝ್ ಹೊಸ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು. ಇದೇ ಕಾರಣದಿಂದಾಗಿ ಸಿನ್ಸನಾಟಿ ಓಪನ್ ಫೈನಲ್​ ಪಂದ್ಯವು ಎಲ್ಲಾ ಕುತೂಹಲಕ್ಕೆ ಕಾರಣವಾಗಿತ್ತು.

ಈ ಕೌತುಕದೊಂದಿಗೆ ಶುರುವಾದ ಫೈನಲ್ ಪಂದ್ಯದ ಮೊದಲ ಸುತ್ತಿನಲ್ಲಿ ರೋಚಕ ಪೈಪೋಟಿ ಕಂಡು ಬಂತು. ಇದಾಗ್ಯೂ 7-5 ಅಂತರದಿಂದ ಜಯ ಸಾಧಿಸಿದ ಅಲ್ಕರಾಝ್ ಮುನ್ನಡೆ ಕಾಯ್ದುಕೊಂಡರು.

ಆದರೆ 2ನೇ ಸುತ್ತಿನಲ್ಲಿ ಭರ್ಜರಿಯಾಗಿ ಕಂಬ್ಯಾಕ್ ಮಾಡಿದ ನೊವಾಕ್ ಜೊಕೊವಿಚ್ 7-6 ಅಂತರದಿಂದ ಗೆಲ್ಲುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಪಂದ್ಯವು ಮೂರನೇ ಸುತ್ತಿನತ್ತ ಸಾಗಿತು. ಅಂತಿಮ ಸುತ್ತು ಕೂಡ ರಣರೋಚಕ ಹೋರಾಟಕ್ಕೆ ಸಾಕ್ಷಿಯಾಯಿತು.

3 ಗಂಟೆ ಮತ್ತು 49 ನಿಮಿಷಗಳವರೆಗೆ ಸಾಗಿದ ಪಂದ್ಯದಲ್ಲಿ ಅಂತಿಮ ಸುತ್ತನ್ನು ನೊವಾಕ್ ಜೊಕೊವಿಚ್ 7-6 ಅಂತರದಿಂದ ಗೆದ್ದುಕೊಂಡರು. ಈ ಮೂಲಕ ಸಿನ್ಸನಾಟಿ ಓಪನ್ ಟೆನಿಸ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದರು.

ಇದನ್ನೂ ಓದಿ: Wimbledon 2023 Final: ಜೊಕೊವಿಚ್​ಗೆ ಸೋಲುಣಿಸಿ ವಿಂಬಲ್ಡನ್ ​ಕಿರೀಟ ಗೆದ್ದ ಅಲ್ಕರಾಝ್

ಶರ್ಟ್ ಹರಿದು ಸಂಭ್ರಮಿಸಿದ ಜೊಕೊವಿಚ್:

ವಿಂಬಲ್ಡನ್ ಟೂರ್ನಿಯಲ್ಲಿ 20 ರ ಹರೆಯದ ಕಾರ್ಲೊಸ್ ಅಲ್ಕರಾಝ್ ವಿರುದ್ಧ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿದ್ದ ನೊವಾಕ್ ಜೊಕೊವಿಚ್ ಈ ಬಾರಿ ಸೇಡು ತೀರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಈ ಗೆಲುವಿನ ಬೆನ್ನಲ್ಲೇ ತಮ್ಮ ಶರ್ಟ್ ಅನ್ನು ಹರಿದು ಹಾಕುವ ಮೂಲಕ ವಿಚಿತ್ರವಾಗಿ ಸಂಭ್ರಮಿಸಿದರು.

ಮತ್ತೊಂದೆಡೆ ಸೋಲಿನ ನೋವಲ್ಲಿ ಕಾರ್ಲೊಸ್ ಅಲ್ಕರಾಝ್ ಕಣ್ಣೀರು ಹಾಕುತ್ತಿರುವುದು ಕಂಡು ಬಂತು. ಒಟ್ಟಿನಲ್ಲಿ ಅಂಗಳದಲ್ಲಿ ಇದೀಗ ರಣರೋಚಕ ಕಾದಾಟದೊಂದಿಗೆ ಅಲ್ಕರಾಝ್ ಹಾಗೂ ಜೊಕೊವಿಚ್ ಟೆನಿಸ್ ಪ್ರಿಯರಿಗೆ ಮನರಂಜನೆಯ ರಸದೌತಣ ಒದಗಿಸುತ್ತಿದ್ದಾರೆ.

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ